Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...