Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...