Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...