Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...