Homeಎಕಾನಮಿವೇಗವಾಗಿ ಮುಂದೋಡುತ್ತಿರುವ ರೇಸಿಂಗ್ ಕಾರಿನ ಟೈರುಗಳನ್ನ ಶೂಟ್ ಮಾಡಿದಂತೆ...

ವೇಗವಾಗಿ ಮುಂದೋಡುತ್ತಿರುವ ರೇಸಿಂಗ್ ಕಾರಿನ ಟೈರುಗಳನ್ನ ಶೂಟ್ ಮಾಡಿದಂತೆ…

ಉದ್ಯೋಗ ನಷ್ಟ ಮತ್ತು ಅಸಂಘಟಿತ ಉದ್ದಿಮೆಗಳ ಮುಚ್ಚುವಿಕೆಯ ದೀರ್ಘಕಾಲೀನ ಪರಿಣಾಮವನ್ನು ಈ ಆರ್ಥಿಕ ಕುಸಿತದಲ್ಲಿ ಕಾಣುತ್ತಿದ್ದೇವೆ

- Advertisement -
- Advertisement -

Demonetization in a booming like shooting economy is at the tyres of a racing car”           ಇದು ಅರ್ಥಶಾಸ್ತ್ರಜ್ಞ ಜೀನ್ ಡ್ರೆಝ್ ಹೇಳಿದ ಮಾತು.

ಈ ಮಾತು ಈಗ ಭಾರತದ ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಕೇಂದ್ರ ಸರ್ಕಾರದ ಅಥವಾ ಪ್ರಧಾನಿ ಮೋದಿಯವರ ಬೆಂಬಲಿಗರು ಈಗಿನ ಪರಿಸ್ಥಿತಿಗೆ ಜಾಗತಿಕ ಆರ್ಥಿಕ ಹಿನ್ನಡೆಯೇ ಕಾರಣ ಅಂತ ಎಷ್ಟೇ ಚೀರಾಡಿದರೂ (ಅವರ್ಯಾರೂ ಕೂಡ ತಮ್ಮ ಮಾತಿಗೆ ಪೂರಕವಾದ ಅಂಕಿಅಂಶಗಳನ್ನ ಕೊಡ್ತಿಲ್ಲ) ದೇಶದ ಆರ್ಥಿಕ ಹಿಂಜರಿತಕ್ಕೆ ಮೂಲಕಾರಣ ಡಿಮಾನಿಟೈಸೇಷನ್ ಮತ್ತು ಅಪ್ರಬುದ್ಧ ಜಿಎಸ್ಟಿ ಜಾರಿ ಎಂದು ಜಗತ್ತಿನ ಎಲ್ಲ ಪ್ರಮುಖ ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಇದು ಹೇಗೆ ಮತ್ತು ಇದರಿಂದ ಹೊರಬರುವ ದಾರಿಗಳೇನು ಎಂದು ಸಂಕ್ಷಿಪ್ತವಾಗಿ ನೋಡೋಣ.
ಒಬ್ಬ/ಳು ತನ್ನ ಸಾಮಥ್ರ್ಯಕ್ಕೆ ತಕ್ಕ ಉದ್ಯೋಗ ಪಡೆದಾಗ ಅಲ್ಲಿ ದುಡಿಯುವ ಹಣವನ್ನು ತನಗೆ ಅಗತ್ಯವಿರುವ ವಸ್ತುಗಳನ್ನು ಕೊಳ್ಳಲು ಬಳಸುತ್ತಾನೆ/ಳೆ. ಆ ಅಂಗಡಿಯವನು/ಳು ಇಂಥ ವ್ಯಾಪಾರದಿಂದ ಬಂದ ಹಣವನ್ನು ತನ್ನ ಅಗತ್ಯದ ವಸ್ತುಗಳನ್ನು ಕೊಳ್ಳಲು ಬಳಸುವುದಲ್ಲದೆ, ತನ್ನ ಅಂಗಡಿಗೆ ಬೇಕಾದ ವಸ್ತುಗಳನ್ನು ಕೊಳ್ಳಲು ಬಳಸುತ್ತಾನೆ/ಳೆ. ಇದರಿಂದಾಗಿ ಆ ಅಂಗಡಿಗೆ ವಿವಿಧ ರೀತಿಯ ವಸ್ತುಗಳನ್ನು ತಯಾರಿಸುವ ಅಥವಾ ವಿತರಿಸುವ ಕಂಪನಿಗೂ ಬೇಡಿಕೆ ಹೆಚ್ಚಾಗುತ್ತದೆ. ಜೊತೆಗೆ ಅಂತಹ ಅಂಗಡಿ ಮತ್ತು ಕಂಪನಿಗಳಲ್ಲಿ ಕೆಲಸ ಮಾಡುವವರಿಗೂ ಸಂಬಳ ಸುಲಭವಾಗಿ ದೊರೆತು ಅವರೂ ಅದನ್ನು ಮಾರುಕಟ್ಟೆಯಲ್ಲಿ ಖರ್ಚು ಮಾಡುತ್ತಾರೆ. ಹೀಗೆ ಹಲವು ಸ್ತರಗಳಲ್ಲಿ ಒಂದಕ್ಕೊಂದು ಪೂರಕವಾದ ಬೇಡಿಕೆ ಹೆಚ್ಚಾಗಿ ಅದಕ್ಕೆ ತಕ್ಕಂತೆ ಉತ್ಪಾದನೆಯೂ ಹೆಚ್ಚುತ್ತಾ ಹೋಗಿ ಆರ್ಥಿಕತೆ ವೇಗವಾಗಿ ಬೆಳೆಯುತ್ತದೆ.

ಆದರೆ ಮೋದಿಯವರು ತಾವು ಹೇಳಿದಂತೆ ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಇದ್ದಕ್ಕಿದ್ದಂತೆ ಡಿಮಾನೆಟೈಸೇಷನ್ ಮಾಡುವ ಮೂಲಕ ಕನಿಷ್ಟ ಐವತ್ತು ಲಕ್ಷ ಮಂದಿಯ ಉದ್ಯೋಗಗಳನ್ನು ಕೇವಲ ಆ ಮೂರು ತಿಂಗಳುಗಳಲ್ಲಿ ಕಸಿದುಕೊಂಡು ಬಿಟ್ಟರು.

ಇವತ್ತು ನಮ್ಮ ದೇಶದಲ್ಲಿ ಶೇ. ತೊಂಬತ್ತರಷ್ಟು ಉದ್ಯೋಗಿಗಳು ಕೆಲಸ ಮಾಡುತ್ತಿರುವುದೇ ಅಸಂಘಟಿತ ವಲಯದ ಉದ್ದಿಮೆಗಳಲ್ಲಿ ಹಾಗೂ ದೇಶದ ಜಿಡಿಪಿಯಲ್ಲಿ ಈ ಅಸಂಘಟಿತ ವಲಯದ ಕೊಡುಗೆ ಶೇ45 ರಷ್ಟಿದೆ. ಈ ಅಸಂಘಟಿತ ಉದ್ಯಮಗಳೆಲ್ಲ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳಾಗಿದ್ದು ಇವೆಲ್ಲವೂ ನಗದಿನ ರೂಪದಲ್ಲೇ ತಮ್ಮ ವ್ಯವಹಾರ ಮಾಡುತ್ತವೆ.

ಇದ್ದಕ್ಕಿದ್ದಂತೆ ಡಿಮಾನೆಟೈಸೇಷನ್ ಮೂಲಕ ನಗದಿನ ಹರಿವೇ ನಿಂತುಹೋದಾಗ ಸಾವಿರಾರು ಉದ್ದಿಮೆಗಳು ಬಾಗಿಲು ಮುಚ್ಚಿದ ಪರಿಣಾಮ ಲಕ್ಷಾಂತರ ಮಂದಿ ತಮ್ಮ ಕೆಲಸ ಕಳೆದುಕೊಂಡರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದಂತೆ ಡಿಮಾನೆಟೈಸೇಷನ್ನಿನ ತಕ್ಷಣದ ಪರಿಣಾಮವಾಗಿಯೇ ಮುಂದಿನ ತ್ರೈಮಾಸಿಕದಲ್ಲಿಯೇ ಜಿಡಿಪಿ ದರ ಶೇ. ಎರಡರಷ್ಟು ಕುಸಿಯಿತು.

ಆದರೆ ಉದ್ಯೋಗ ನಷ್ಟ ಮತ್ತು ಅಸಂಘಟಿತ ಉದ್ದಿಮೆಗಳ ಮುಚ್ಚುವಿಕೆಯ ದೀರ್ಘಕಾಲೀನ ಪರಿಣಾಮವನ್ನು ಈ ಆರ್ಥಿಕ ಕುಸಿತದಲ್ಲಿ ಕಾಣುತ್ತಿದ್ದೇವೆ

ಮೊದಲೇ ಡಿಮಾನೆಟೈಸೇಷನ್ನಿಂದ ಹೊಡೆತ ತಿಂದಿದ್ದ ಅಸಂಘಟಿತ ವಲಯಕ್ಕೆ ಚೇತರಿಸಿಕೊಳ್ಳುವ ಮೊದಲೇ ಮತ್ತೆ ಹೊಡೆತ ನೀಡಿದ್ದು ಸರಿಯಾದ ತಯಾರಿಯಿಲ್ಲದ ಜಿಎಸ್ಟಿಯ ಆತುರಾತುರದ ಜಾರಿ. ಇದರಿಂದ ಜಿಎಸ್‍ಟಿ ಅಳವಡಿಸಿಕೊಳ್ಳಲು ಸರಿಯಾದ ಸೌಲಭ್ಯ ಮತ್ತು ಶಕ್ತಿ ಹೊಂದಿರದಿದ್ದ ಬಹುತೇಕ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳಲ್ಲದೇ ಹಲವಾರು ಮದ್ಯಮ ಗಾತ್ರದ ಉದ್ದಿಮೆಗಳೂ ಹೊಡೆತ ತಿಂದವು. ಹಲವಾರು ಉದ್ದಿಮೆಗಳು ಮುಚ್ಚಿಕೊಂಡವು ಮತ್ತು ಇನ್ನೂ ಸಹಸ್ರಾರು ಉದ್ದಿಮೆಗಳ ಲಾಭಾಂಶ, ವ್ಯವಹಾರ ಎಲ್ಲ ಕಡಿಮೆಯಾಯಿತು.

ಇದರ ಪರಿಣಾಮ ಮತ್ತಷ್ಟು ಉದ್ಯೋಗ ನಷ್ಟ ಮತ್ತು ಆರ್ಥಿಕತೆಗೆ ಹೊಡೆತ. ಈ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಮೇಲೆ ಅನೇಕ ರೀತಿಯಲ್ಲಿ ಅವಲಂಬಿತವಾಗಿದ್ದ ಭಾರೀ ಉದ್ದಿಮೆಗಳು ಕೂಡ ಕೆಲಕಾಲದ ಬಳಿಕ ಈ ಜಿಎಸ್ಟಿ ಹೊಡೆತವನ್ನು ಪರೋಕ್ಷವಾಗಿ ಅನುಭವಿಸಿ ಹಿಂಜರಿತಕ್ಕೆ ಒಳಗಾದವು.

ಹಾಗಾಗಿಯೇ, ಇವತ್ತಿನ ಆರ್ಥಿಕ ಹಿಂಜರಿತ ಏನಿದೆ ಅದು ನಮ್ಮ ದೇಶದ ಪ್ರಧಾನಿ ಮತ್ತು ಕೇಂದ್ರ ಸರ್ಕಾರ ತಾನಾಗಿಯೇ ಸ್ವಯಂಕೃತಾಪರಾಧದಿಂದ ತಂದಿಟ್ಟುಕೊಂಡದ್ದೇ ಹೊರತು ಇದಕ್ಕೆ ಕೇವಲ ಜಾಗತಿಕ ಹಿಂಜರಿತ ಕಾರಣವಲ್ಲ. ಆದರೆ, ಇದರ ಕಷ್ಟ ಉಣ್ಣುತ್ತಿರುವವರು ನಮ್ಮಂತ ಕೋಟಿಕೋಟಿ ಜನಸಾಮಾನ್ಯರು.

ಈ ಆರ್ಥಿಕ ಹಿಂಜರಿತಕ್ಕೆ ಪರಿಹಾರವಿಲ್ಲವೆ? ಇದರಿಂದ ಹೊರಬರಲು ತೆಗೆದುಕೊಳ್ಳಬೇಕಾದ ಕ್ರಮಗಳೇನು?

ದೇಶದ ಮತ್ತು ಜಗತ್ತಿನ ಎಲ್ಲ ಆರ್ಥಿಕ ತಜ್ಞರು ಹೇಳಿರುವಂತೆ ಈಗಿನ ಆರ್ಥಿಕ ಹಿಂಜರಿತ ಉಂಟಾಗಿರುವುದು ಬೇಡಿಕೆಯ ಕೊರತೆಯಿಂದ. ಅಂದರೆ, ಈ ದೇಶದ ಜನರಲ್ಲಿ ಕೊಳ್ಳುವ ಶಕ್ತಿ ಉಡುಗಿರುವುದರಿಂದ. ಹಾಗಾಗಿ, ಬಹುತೇಕ ಎಲ್ಲ ಆರ್ಥಿಕ ತಜ್ಞರ ಅಭಿಪ್ರಾಯ ಈ ದೇಶದ ಜನಗಳ ಅದರಲ್ಲೂ ಗ್ರಾಮಾಂತರ ಪ್ರದೇಶದ ಜನಗಳ ಕೈಯಲ್ಲಿ ಹೆಚ್ಚು ಹಣ ಓಡಾಡುವಂತೆ ಮಾಡಿ ಅವರ ಕೊಳ್ಳುವ ಶಕ್ತಿ ಹೆಚ್ಚಾಗುವಂತೆ ಮಾಡುವುದು. ಇದರಿಂದ ಬೇಡಿಕೆ ಹೆಚ್ಚಾಗಿ ಅದಕ್ಕೆ ತಕ್ಕಂತೆ ಉತ್ಪಾದನೆಯೂ ಹೆಚ್ಚಾಗುತ್ತದೆ. ಯಾವಾಗ ಉತ್ಪಾದನೆ ಹೆಚ್ಚಾಗಬೇಕಾದ ಸನ್ನಿವೇಶ ಬರುತ್ತದೋ ಆಗ ಹೆಚ್ಚಿನ ಖಾಸಗಿ ಬಂಡವಾಳವೂ ಹರಿದುಬರುತ್ತದೆ. ಬಂಡವಾಳ ಮತ್ತಷ್ಟು ಉದ್ಯೋಗಗಳನ್ನು ಸೃಷ್ಟಿಸಿ ಆರ್ಥಿಕತೆ ಈ ಹಿಂಜರಿತದಿಂದ ಹೊರಬರಲು ಸಾಧ್ಯವಾಗುತ್ತದೆ.

ಅದಕ್ಕೆ ಕೇಂದ್ರ ಸರ್ಕಾರ ಮಾಡಬೇಕಿರುವುದು ಅತಿಮುಖ್ಯವಾಗಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚು ಹಣ ಕೊಡುವುದು ಹಾಗೂ ಆ ಯೋಜನೆಯಡಿಯಲ್ಲಿನ ಕೂಲಿಯನ್ನು ದುಪ್ಪಟ್ಟುಗೊಳಿಸುವುದು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಬೇಡಿಕೆ ಗಮನಾರ್ಹವಾಗಿ ಹೆಚ್ಚುತ್ತದೆ. ಜೊತೆಗೆ ರೈತರಿಗೆ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ಕೊಡುವುದು. ಇವೆರಡೂ ತ್ವರಿತವಾಗಿ ಮಾಡಬಲ್ಲಂತ ಕೆಲಸಗಳು.

ಹಾಗೆಯೇ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲು (ರಸ್ತೆ, ಸೇತುವೆ, ಕಿರುನೀರಾವರಿ, ವಿದ್ಯುತ್ ಇತ್ಯಾದಿ) ಹೆಚ್ಚೆಚ್ಚು ಬಂಡವಾಳವನ್ನು ಸರ್ಕಾರವೇ ತೊಡಗಿಸುವುದು. ಇದರಿಂದಾಗಿಯೂ ಲಕ್ಷಾಂತರ ಉದ್ಯೋಗ ತಾತ್ಕಾಲಿಕವಾಗಿಯಾದರೂ ಸೃಷ್ಟಿಯಾಗಿ ಜನಗಳ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ.

ಇದರ ಜೊತೆಗೆ ಮಧ್ಯಮ ವರ್ಗದವರಿಗೆ ಆದಾಯ ತೆರಿಗೆಯನ್ನು ಕಡಿಮೆ ಮಾಡಿದರೆ ಅದರಲ್ಲಿ ಉಳಿಯುವ ಹಣವನ್ನು ಅವರು ಖರ್ಚು ಮಾಡುವುದರಿಂದಲೂ ಬೇಡಿಕೆ ಹೆಚ್ಚುತ್ತದೆ. ಈ ದೇಶದಲ್ಲಿ ಅಂದಾಜು ಐದು ಕೋಟಿ ಕುಟುಂಬಗಳು ಆದಾಯ ತೆರಿಗೆ ಪಾವತಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಬೇಡಿಕೆ ಹೆಚ್ಚಳ ಮಾಡುವಲ್ಲಿ ಒಂದು ಮಟ್ಟಕ್ಕೆ ಪರಿಣಾಮಕಾರಿಯಾಗಿಯೇ ಆಗಿರುತ್ತದೆ.

ಇದೆಲ್ಲದರಿಂದ ವಿತ್ತೀಯ ಕೊರತೆ (Fiscal deficit) ಹೆಚ್ಚಾದರೂ ಕೂಡ ಅದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸರ್ಕಾರ ಮೇಲಿನಂಥ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ. (ವಾಸ್ತವವಾಗಿ ಈಗಾಗಲೇ ಬಹಳ ನಿಧಾನವಾಗಿ ಹೋಗಿದೆ)
ಇಷ್ಟೆಲ್ಲಾ ಮಾಡಿದರೂ ಕೂಡ ಆರ್ಥಿಕ ಚೇತರಿಕೆಗೆ ಕನಿಷ್ಟ ಒಂದು ವರ್ಷ ಬೇಕಾಗುವಂತಹ ವಿಷಮ ಸ್ಥಿತಿಯಲ್ಲಿ ನಾವಿದ್ದೇವೆ. ಆದರೆ, ಸರ್ಕಾರ ಬೇಡಿಕೆ ಹೆಚ್ಚಾಗುವಂಥ ಕ್ರಮಗಳನ್ನು ತೆಗೆದುಕೊಳ್ಳುವ ಬದಲು ಉತ್ಪಾದನೆ ಮತ್ತು ಅದರಿಂದ ಮತ್ತಷ್ಟು ಸರಬರಾಜು ಹೆಚ್ಚಾಗುವಂಥ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಕಾರ್ಪೊರೇಟ್ ಟ್ಯಾಕ್ಸನ್ನು 35% ರಿಂದ 25% ಗೆ ಇಳಿಸಿದ್ದು ಆರ್ಥಿಕ ಚೇತರಿಕೆಗೆ ಸರ್ಕಾರ ತೆಗೆದುಕೊಂಡ ಅತ್ಯಂತ ಪ್ರಮುಖ ಕ್ರಮ. ತಮ್ಮ ಲಾಭದ ಮೇಲೆ ಕಟ್ಟುವ ತೆರಿಗೆ ಕಡಿಮೆಯಾದ ಕಾರಣಕ್ಕೆ ಅನೇಕ ಕಂಪನಿಗಳು ಹೆಚ್ಚು ಉತ್ಪಾದಿಸುತ್ತವೆ ಮತ್ತು ಹೊಸದಾಗಿ ಬಂಡವಾಳ ಹೂಡುತ್ತವೆ. ಅದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂಬುದು ಸರ್ಕಾರದ ನಿರೀಕ್ಷೆ.

ಆದರೆ, ಈಗ ತಾವು ಉತ್ಪಾದಿಸಿರುವ ಉತ್ಪನ್ನಗಳು ಮಾರಾಟವಾದಾಗ ತಾನೇ ಕಂಪನಿಗಳಿಗೆ ಲಾಭ ಮತ್ತು ಲಾಭದ ಮೇಲಿನ ತೆರಿಗೆ ಇಳಿಕೆಯ ಲಾಭ ಎರಡೂ ಸಿಗುವುದು? ಆದರೆ, ಈಗಾಗಲೆ ಉತ್ಪನ್ನವಾಗಿರುವ ವಸ್ತುಗಳಿಗೇ ಬೇಡಿಕೆ ಇಲ್ಲದಿರುವಾಗ ಈ ಕಂಪನಿಗಳು ಮತ್ತಷ್ಟು ಉತ್ಪಾದನೆ ಯಾಕೆ ಮಾಡುತ್ತವೆ?

ಹಾಗಾಗಿ, ಸರ್ಕಾರ ಇಲ್ಲಿಯತನಕ ತೆಗೆದುಕೊಂಡ ಯಾವ ಕ್ರಮಗಳೂ (ಕಾರ್ಪೋರೇಟ್ ತೆರಿಗೆ ಕಡಿತ, ಬ್ಯಾಂಕುಗಳ ವಿಲೀನ ಇತ್ಯಾದಿ) ಆರ್ಥಿಕ ಹಿಂಜರಿತದಿಂದ ದೇಶವನ್ನು ಹೊರತರುವಲ್ಲಿ ಪರಿಣಾಮಕಾರಿಯಾಗಿಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು ಮಾಡಬಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಳ್ಳುತ್ತಿಲ್ಲ.

ಇದರ ಜೊತೆಗೆ ಜಾಗತಿಕ ಹಿಂಜರಿತ ಮತ್ತು ತೈಲ ಬೆಲೆ ಹೆಚ್ಚಳವೂ ಸೇರಿ ದೇಶ ಆರ್ಥಿಕ ಹಿಂಜರಿತದಿಂದ ಹೊರಬರುವ ಲಕ್ಷಣ ಸದ್ಯದ ಭವಿಷ್ಯದಲ್ಲೆಲ್ಲೂ ಕಾಣಿಸುತ್ತಿಲ್ಲ. ಇದರ ಹೊಡೆತದಲ್ಲಿ ಜನಸಾಮಾನ್ಯರ ಬದುಕು ಮತ್ತಷ್ಟು ಅಸಹನೀಯವಾಗಲಿದ್ದು, ಬಡತನದ ದಾರುಣತೆ ಇನ್ನೂ ಹೆಚ್ಚಲಿದ್ದು, ಇದರೊಳಗೆ ಬದುಕುಳಿಯುವುದೇ ಒಂದು ಸವಾಲಾಗಲಿದೆ.
ಡಾ.ಬಿ.ಸಿ.ಬಸವರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...