Homeಕರೋನಾ ತಲ್ಲಣದೇಶದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು: 11 ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

ದೇಶದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು: 11 ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

- Advertisement -
- Advertisement -

ಅತ್ಯಂತ ಅಪಾಯಕಾರಿ ವಿಧದ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ 11 ರಾಜ್ಯಗಳಿಗೆ ಒಕ್ಕೂಟ ಸರ್ಕಾರ ಎಚ್ಚರಿಕೆ ನೀಡಿದೆ. ಪ್ರಕರಣಗಳನ್ನು ಅದಷ್ಟು ಬೇಗನೆ ಪತ್ತೆಹಚ್ಚಲು, ಸಹಾಯವಾಣಿಯನ್ನು ಪ್ರಾರಂಭಿಸಲು ಸಲಹೆ ನೀಡಿದೆ. ಡೆಂಗ್ಯೂ ಪರೀಕ್ಷೆಯ ಸಾಕಷ್ಟು ಪರೀಕ್ಷಾ ಕಿಟ್‌ಗಳು, ಲಾರ್ವಿಸೈಡ್‌ಗಳು ಮತ್ತು ಔಷಧಿಗಳನ್ನು ಸಂಗ್ರಹಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ 11 ರಾಜ್ಯಗಳಿಗೆ ತಿಳಿಸಿದೆ.

ಕೊರೊನಾ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಡೆಂಗ್ಯೂ ಪ್ರಕರಣಗಳ ಕುರಿತು ಚರ್ಚಿಸಲಾಗಿದೆ. ಮುಂಬರುವ ಹಬ್ಬಗಳ ಕಾರಣ ಹೆಚ್ಚಿನ ಜನ ಸೇರುವ ಸಾಮೂಹಿಕ ಸಭೆಗಳನ್ನು ತಪ್ಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಸೆರೊಟೈಪ್ – II ಡೆಂಗ್ಯೂನ ಪ್ರಕರಣಗಳನ್ನು ವರದಿ ಮಾಡುವ ರಾಜ್ಯಗಳಲ್ಲಿ ಆಂಧ್ರ ಪ್ರದೇಶ, ಗುಜರಾತ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿವೆ.

ಇದನ್ನೂ ಓದಿ: ರಾಜ್ಯದ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್‌: ಹಲವೆಡೆ ಹಾಸಿಗೆ ಸಿಗದೆ ಪರದಾಟ

ಈ 11 ರಾಜ್ಯಗಳಿಗೆ “ಸೆರೋಟೈಪ್- II ಡೆಂಗ್ಯೂ” ಉಂಟುಮಾಡುವ ಸಮಸ್ಯೆಗಳ ತ್ವರಿತ ವರದಿ ನೀಡಲು ತಂಡಗಳನ್ನು ನಿಯೋಜಿಸುವಂತೆ ಆರೋಗ್ಯ ಸಚಿವಾಲಯ ಮತ್ತು ಕುಟುಂಬ ಕಲ್ಯಾಣ ತಿಳಿಸಿದೆ. ಸಹಾಯವಾಣಿಗಳು, ವೆಕ್ಟರ್ ನಿಯಂತ್ರಣದ ವಿಧಾನಗಳು ಮತ್ತು ಡೆಂಗ್ಯೂ ರೋಗಲಕ್ಷಣಗಳ ಬಗ್ಗೆ ಪ್ರಚಾರಗಳನ್ನು ಕೈಗೊಳ್ಳಲು ತಿಳಿಸಿದೆ.

ರಾಜ್ಯದಲ್ಲಿಯೂ ಡೆಂಗ್ಯೂ ವೈರಲ್ ಫೀವರ್‌ ಪ್ರಕರಣಗಳು ವರದಿಯಾಗುತ್ತಿದ್ದು, ಯಾದಗಿರಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ಬೆಂಗಳೂರು, ಗದಗ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರಿನ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. ಯಾದಗಿರಿ ಮತ್ತು ಗದಗದಲ್ಲಿ ಹೆಚ್ಚಿನ ಮಕ್ಕಳು ಈ ಸೋಂಕಿಗೆ ತುತ್ತಾಗಿದ್ದಾರೆ.

ಇದು ಮಳೆಗಾಲವಾದ್ದರಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿ ಕಣಿಸಿಕೊಳ್ಳುತ್ತದೆ. ಸಣ್ಣ ಜ್ವರ ಕೂಡ ಹೆಚ್ಚು ದಿನ ಇರುತ್ತದೆ. ಜ್ವರ ಉಲ್ಬಣಿಸಿದರೆ ಗುಣವಾಗುವಾಗುವುದು ತಡವಾಗುತ್ತದೆ. ವೈರಲ್‌ ನ್ಯುಮೊನಿಯಾಗೆ ತಿರುಗುತ್ತದೆ. ಆಗ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ‘ಒಂದು ಮಗುವಿನಲ್ಲಿ ವೈರಾಣು ಸೋಂಕು ಕಾಣಿಸಿಕೊಂಡರೆ ಆ ಮಗುವಿನೊಂದಿಗೆ ಇನ್ನೊಂದು ಮಗು ಬೆರೆಯಲು ಬಿಡಬಾರದು. ವೈರಾಣು ಜ್ವರಕ್ಕೆ ನಿರ್ದಿಷ್ಟ ಔಷಧ ಇರುವುದಿಲ್ಲ ಎಂದು ತಜ್ಞ ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...