Homeಮುಖಪುಟಆರೋಗ್ಯ ಕೇಂದ್ರಗಳಿಗೆ ಅನುದಾನ ನಿರಾಕರಣೆ; ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದ ಕೇರಳ ಸರ್ಕಾರ

ಆರೋಗ್ಯ ಕೇಂದ್ರಗಳಿಗೆ ಅನುದಾನ ನಿರಾಕರಣೆ; ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದ ಕೇರಳ ಸರ್ಕಾರ

- Advertisement -
- Advertisement -

ತೀವ್ರ ಅನುದಾನದ ಕೊರತೆ ಎದುರಿಸುತ್ತಿರುವ ಕೇರಳವು ಅಂತಿಮವಾಗಿ ಕೇಂದ್ರ ಸರ್ಕಾರದ ನಿರ್ದೇಶನಕ್ಕೆ ಮಣಿಯಲು ನಿರ್ಧರಿಸಿದ್ದು, ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ಆರೋಗ್ಯ ಕೇಂದ್ರಗಳ ಹೆಸರುಗಳಿಗೆ ‘ಟ್ಯಾಗ್‌ಲೈನ್‌’ ಸೇರಿಸಲು ನಿರ್ಧರಿಸಿದೆ.

ಕೇರಳ ಸರ್ಕಾರವು ಜೂನ್ 26 ರ ಬುಧವಾರ ಹೊರಡಿಸಿದ ಆದೇಶದಲ್ಲಿ “ಆಯುಷ್ಮಾನ್ ಭಾರತ್‌ನ ಬ್ರ್ಯಾಂಡಿಂಗ್ ಮಾರ್ಗಸೂಚಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ” ಆದೇಶ ನೀಡಲು ಸಂತೋಷವಾಗಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರವು 2023-2024ರಲ್ಲಿ ರಾಜ್ಯಕ್ಕೆ ನೀಡಬೇಕಾದ ಎನ್‌ಎಚ್‌ಎಂ ಅನುದಾನವನ್ನು ವಿತರಿಸಲು ನಿರಾಕರಿಸಿದ ನಂತರ, ಕೇರಳ ಸರ್ಕಾರವು ತನ್ನ ನಿಲುವನ್ನು ಮರುಪರಿಶೀಲಿಸುವಂತೆ ಮಾಡಿದೆ.

₹600 ಕೋಟಿಗೂ ಅಧಿಕ ಅನುದಾನ ನೀಡುವಂತೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಮೊದಲ ಕಂತನ್ನು ಮಂಜೂರು ಮಾಡುವಂತೆ ಕೇಂದ್ರಕ್ಕೆ ರಾಜ್ಯ ಒತ್ತಾಯಿಸಿದ ಮೂರು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಆರೋಗ್ಯವು ರಾಜ್ಯದ ವಿಷಯವಾಗಿರುವುದರಿಂದ ಈ ಕ್ರಮವನ್ನು ‘ಒಕ್ಕೂಟ’ ತತ್ವಗಳಿಗೆ ಹೊಡೆತವೆಂದು ಪರಿಗಣಿಸಬಹುದು ಎಂಬ ಚರ್ಚೆಗಳನ್ನು ಈ ನಡೆ ಹುಟ್ಟುಹಾಕಿದೆ.

ಆರಂಭದಲ್ಲಿ, ಕೇರಳವು ಸಹ-ಬ್ರಾಂಡಿಂಗ್ ಆದೇಶವನ್ನು ತಿರಸ್ಕರಿಸಿತು, ಭಾಷಾ ಮತ್ತು ಸಾಂಸ್ಕೃತಿಕ ಭಿನ್ನತೆಗಳು ತಮ್ಮ ವಿರೋಧಕ್ಕೆ ಪ್ರಾಥಮಿಕ ಕಾರಣಗಳಾಗಿವೆ. ಸ್ಥಳೀಯ ಜನಸಂಖ್ಯೆಯ ಸಾಂಸ್ಕೃತಿಕ ಮತ್ತು ಭಾಷಿಕ ಗುರುತಿನೊಂದಿಗೆ ಹೆಸರುಗಳು ಪ್ರತಿಧ್ವನಿಸುವುದಿಲ್ಲ ಎಂದು ರಾಜ್ಯವು ವಾದಿಸಿತ್ತು. ಈಗ, ಈಗಿರುವ ಆರೋಗ್ಯ ಕೇಂದ್ರಗಳಿಗೆ ಮರುನಾಮಕರಣ ಮಾಡುವ ಬದಲು ಹೆಸರುಗಳನ್ನು ಟ್ಯಾಗ್‌ಲೈನ್‌ಗಳಾಗಿ ಸೇರಿಸಲು ಕೇರಳ ನಿರ್ಧರಿಸಿದೆ.

ಹೆಚ್ಚುತ್ತಿರುವ ಹಣಕಾಸಿನ ಒತ್ತಡಗಳು ಮತ್ತು ಅಗತ್ಯ ಎನ್‌ಎಂಎಚ್‌ ಅನುದಾನವು ಅಪಾಯದಲ್ಲಿದೆ, ಕೇಂದ್ರ ಸರ್ಕಾರದ ನಿರ್ದೇಶನವನ್ನು ಅನುಸರಿಸುವುದನ್ನು ಬಿಟ್ಟು ಕೇರಳಕ್ಕೆ ಬೇರೆ ಆಯ್ಕೆ ಇರಲಿಲ್ಲ.

ಪ್ರಸ್ತುತ ಹಳೆಯ ಹೆಸರುಗಳಲ್ಲಿರುವ ಆರೋಗ್ಯ ಕೇಂದ್ರಗಳು ಹಾಗೆಯೇ ಇರುತ್ತವೆ; ಈಗಿರುವ ಹೆಸರುಗಳಿಗೆ ‘ಆಯುಷ್ಮಾನ್ ಆರೋಗ್ಯ ಮಂದಿರ’ ಮತ್ತು ‘ಆರೋಗ್ಯಂ ಪರಮಂ ಧನಂ’ ಅನ್ನು ‘ಟ್ಯಾಗ್‌ಲೈನ್‌’ಗಳಾಗಿ ಬಳಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.

ಹೊಸ ಟ್ಯಾಗ್‌ಲೈನ್‌ಗಳ ಕುರಿತು ಸೂಚನೆಗಳು

“ಆಯುಷ್ಮಾನ್ ಆರೋಗ್ಯ ಮಂದಿರ” ಎಂಬ ಶೀರ್ಷಿಕೆಯ ಆರೋಗ್ಯ ಕೇಂದ್ರಗಳು ಈಗ ಎಲ್ಲ ಉಪ ಕೇಂದ್ರಗಳ ಹೆಸರಿನೊಂದಿಗೆ ಮಲಯಾಳಂ ಮತ್ತು ಇಂಗ್ಲಿಷ್‌ನಲ್ಲಿ “ಆರೋಗ್ಯಂ ಪರಮಂ ಧನಂ” ಎಂಬ ಅಡಿಬರಹವನ್ನು ಹೊಂದಿರುತ್ತದೆ. ಈ ಸಂಸ್ಥೆಗಳ ಸ್ಥಳೀಯ ಹೆಸರಿನೊಂದಿಗೆ ಹೊಸ ಹೆಸರನ್ನು ನೀಡಬೇಕು. ಹೆಸರುಗಳು ಮತ್ತು ಅಡಿಬರಹವನ್ನು ಒಂದೇ ಗಾತ್ರದಲ್ಲಿ ಬರೆಯಬೇಕು. ಕೇಂದ್ರ ಸರ್ಕಾರವು ಸೂಚಿಸಿದಂತೆ ‘ಎಥ್ನಿಕ್ ಬ್ರೌನ್ 8589’ ನಲ್ಲಿ ಹೆಸರು ಅನ್ನು ನೀಡಬೇಕು” ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಮೇಲಿನ ಹೆಸರುಗಳಲ್ಲಿ ಕೇರಳ ಸರ್ಕಾರ ಮತ್ತು ಕೇಂದ್ರ ಆರೋಗ್ಯ ಸಚಿವಾಲಯದ ಲೋಗೋಗಳನ್ನು ಸೇರಿಸಬೇಕು ಎಂದು ಅದು ಹೇಳಿದೆ.

“ಕೇಂದ್ರ ಸರ್ಕಾರವು ಸೂಚಿಸಿದಂತೆ ಎಲ್ಲ ಕೇಂದ್ರಗಳ ಹೊರ ಗೋಡೆಗಳ ಬಣ್ಣವನ್ನು ಹಳದಿ ಲೋಹ 7920 ಗೆ ಬದಲಾಯಿಸಲಾಗುತ್ತದೆ” ಎಂದು ಆದೇಶವು ಸಂಸ್ಥೆಗಳ ಗೋಡೆಗಳ ಮೇಲೆ ಚಿತ್ರಿಸಬೇಕಾದ ಚಿತ್ರಗಳನ್ನು ಉಲ್ಲೇಖಿಸುತ್ತದೆ. ಇದು ತಾಯಿಯ ಆರೋಗ್ಯ ರಕ್ಷಣೆ, ಆರೋಗ್ಯ ಜಾಗೃತಿ ಮತ್ತು ಯೋಗ ಇತ್ಯಾದಿಗಳಿಗೆ ಸಂಬಂಧಿಸಿದ ಚಿತ್ರಣಗಳನ್ನು ಒಳಗೊಂಡಿದೆ.

ಮಾರ್ಗಸೂಚಿಗಳನ್ನು ಅನುಸರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿರುವನಂತಪುರಂನ ಎನ್‌ಎಚ್‌ಎಂನ ರಾಜ್ಯ ಮಿಷನ್ ನಿರ್ದೇಶಕರು ಮತ್ತು ಆರೋಗ್ಯ ಸೇವೆಗಳ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ; ಮಸೀದಿ ಧ್ವಂಸಕ್ಕೆ ಪ್ರತಿರೋಧ: ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ಸ್ಥಳೀಯಯರೊಂದಿಗೆ ಪೊಲೀಸರ ಘರ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...