Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...