Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...