Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...