Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...