Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...