Homeಕರ್ನಾಟಕಅಪಾರ್ಟ್‌ಮೆಂಟ್ ಸಹಕಾರಿ ಸಂಘ ಅಮಾನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ: ಪರಶುರಾಮ್

ಅಪಾರ್ಟ್‌ಮೆಂಟ್ ಸಹಕಾರಿ ಸಂಘ ಅಮಾನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ: ಪರಶುರಾಮ್

- Advertisement -
- Advertisement -

ಸ್ಥಳೀಯ ಕಾನೂನುಗಳನ್ನು ಪಾಲಿಸುವ ನೆಪದಲ್ಲಿ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ರಾಜ್ಯದಲ್ಲಿ ಅಪಾರ್ಟ್‌ಮೆಂಟ್ ಸಹಕಾರಿ ಸಂಘವನ್ನು ರಚಿಸುವ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಅಪಾರ್ಟ್‌ಮೆಂಟ್ ಸಹಕಾರಿ ಸಂಘ ಆರೋಪ ಮಾಡಿದೆ.

ಶನಿವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪರಶುರಾಮ್, ಸಹಕಾರಿ ಸಂಘಗಳನ್ನು ರಚಿಸಿಕೊಳ್ಳುವುದು ಪ್ರಜೆಗಳ ಮೂಲಭೂತ ಹಕ್ಕಾಗಿದೆ. ಈ ಹಕ್ಕಿನ ಅಡಿಯಲ್ಲಿ ಅಪಾರ್ಟ್‌ಮೆಂಟ್ ಸಮೂಹದ ನಿರ್ವಹಣೆಗಾಗಿ ಅಪಾರ್ಟ್‌ಮೆಂಟ್ ಮಾಲಕರು ನಗರದಲ್ಲಿ ಸುಮಾರು 50 ಅಪಾರ್ಟ್‌ಮೆಂಟ್ ಮಾಲಕರ ಕೋ-ಆಪರೇಟಿವ್ ಸೊಸೈಟಿಗಳನ್ನು ಕಾನೂನು ಬದ್ದವಾಗಿ ನೋಂದಾಯಿಸಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ, ಈ ಸಹಕಾರಿ ಸಂಘಗಳಿಗೆ ಅಪಾರ್ಟ್‌ಮೆಂಟ್ ಸಮೂಹದ ಮೂಲ ಭೂಮಿ, ಕಾಮನ್ ಸ್ಪೇಸ್ ಹಾಗೂ ಕಾಮನ್ ಅಮೆನಿಟಿಗಳನ್ನು ಹಸ್ತಾಂತರಿಸುವ ಅನಿವಾರ್ಯತೆ ಬಿಲ್ಡರ್‌ಗಳಿಗೆ ಉಂಟಾಗಿರುವುದರಿಂದ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಅಪಾರ್ಟ್‌ಮೆಂಟ್ ಮಾಲಕರ ಕೋ- ಆಪರೇಟಿವ್ ಸೊಸೈಟಿಗಳನ್ನು ಅಮಾನ್ಯ ಮಾಡುವ ಆದೇಶ ನೀಡಿದೆ. ಈ ಆದೇಶವು ಸಂವಿಧಾನದತ್ತ ಮೂಲಭೂತ ಹಕ್ಕಿಗೆ ಚ್ಯುತಿತರುವುದಷ್ಟೇ ಅಲ್ಲದೆ, ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳಿಗೆ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಲ್ಡರ್‌ಗಳು ಅಪಾರ್ಟ್‌ಮೆಂಟ್ ಮಾಲಕರಿಗೆ ಭೂಮಿಯ ದಾಖಲೆಗಳನ್ನು ಸರಿಯಾಗಿ ಹಸ್ತಾಂತರಿಸದೇ, ಭೂಮಿಯನ್ನು ಉಳಿಸಿಕೊಳ್ಳಲು ಬಯಸುವ ಅನೇಕ ಮಾಲಕರು ತೊಂದರೆಗೆ ಸಿಲುಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ಮಧ್ಯಮ ವರ್ಗದ ಜನರ ಹಕ್ಕನ್ನು ಕಾಪಾಡಬೇಕು. ಅಪಾರ್ಟ್‌ಮೆಂಟ್ ಭೂಮಿಗಳನ್ನು ಮಾಲಕರಲ್ಲದ ಬಿಲ್ಡರ್‌ಗಳು ಅಡವಿಡುವ ವ್ಯವಸ್ಥೆಯನ್ನು ನಿಲ್ಲಿಸಬೇಕು ಮತ್ತು ಭೂಮಿಯ ಮಾಲಕತ್ವದ ಹಕ್ಕನ್ನು ಅಪಾರ್ಟ್‌ಮೆಂಟ್ ಮಾಲಕರಿಗೆ ಉಳಿಸಿಕೊಡಬೇಕು ಎಂದು ಪರಶುರಾಮ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಶ್ರೀಪಾದ, ಖಜಾಂಚಿ ರಮ್ಯಾ ರಾವ್, ಕಾರ್ಯದರ್ಶಿ ವಿದ್ಯಾಧರ ದುರ್ಗೇಕರ್, ಗಂಗಾಧರ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. In Many Cities, registrar doesn’t accept application for registering new society. Some officials say registration of co-op housing society has been cancelled due to societies do not follow the rules and officials from co-op housing society Registrar don’t want monitor the activities of a co-op housing society activities………

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...