Homeಕರ್ನಾಟಕವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

- Advertisement -
- Advertisement -

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಕ್ರೌರ್ಯ ಎನಿಸಿದರೂ, ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 498-ಎ (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿಯಿಂದ ಕ್ರೌರ್ಯ) ಅಡಿಯಲ್ಲಿ ಅದು ಕ್ರೌರ್ಯದ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ವಿವಾಹ ನಂತರ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಹಿನ್ನೆಲೆ ಪತ್ನಿಯು ಐಪಿಸಿ ಕಲಂ 498-ಎ ಅಡಿಯಲ್ಲಿ ಕ್ರೌರ್ಯದ ಆರೋಪ ಹೊರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಅವರ ಪತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದೆ.

ಡಿಸೆಂಬರ್ 2019 ರಲ್ಲಿ ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ಆದರೆ ಪತ್ನಿ ಮಾಡಿರುವ ಏಕೈಕ ಆರೋಪವೆಂದರೆ, ”ಪತಿಯು ಆಧ್ಯಾತ್ಮಕ ಚಿಂತಕರೊಬ್ಬರ ಅನುಯಾಯಿಯಾಗಿದ್ದಾರೆ. ಸದಾ ಅವರ ಪ್ರವಚನಗಳ ವಿಡಿಯೊ ಕಡೆಗೇ ಆಸಕ್ತಿ ತೋರುತ್ತಾ ಆಧ್ಯಾತ್ಮಿಕ ಒಲವು ಬೆಳೆಸಿಕೊಂಡಿದ್ದಾರೆ. ನನ್ನೊಡನೆ ಯಾವತ್ತೂ ದೈಹಿಕ ಸಂಪರ್ಕ ಬೆಳೆಸುವ ಆಸಕ್ತಿ ತೋರಿಸಿಲ್ಲ. ಇದು ಹಿಂದೂ ವಿವಾಹ ಕಾಯ್ದೆಯಡಿ ನಿಸ್ಸಂದೇಹವಾಗಿ ಕ್ರೌರ್ಯ ಎನಿಸಲಿದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ನ್ಯಾಯಪೀಠವು, ”ಇದು ಐಪಿಸಿ ಕಲಂ 498- ಎ ಅಡಿಯಲ್ಲಿ ಹೇಳಿರುವಂತಹ ಕ್ರೌರ್ಯದ ಅಪರಾಧ ಕೃತ್ಯವಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 2022 ರಲ್ಲಿ ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯದ ಆಧಾರದ ಮೇಲೆ ಪತ್ನಿಯ ಮನವಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯವು ಈಗಾಗಲೇ ವಿಚ್ಛೇದನದ ಆದೇಶವನ್ನು ನೀಡಿತ್ತು.

ದೂರಿನಲ್ಲಿ ಮತ್ತು ದೋಷಾರೋಪ ಪಟ್ಟಿಯಲ್ಲಿ 498-ಎ ಅಡಿಯಲ್ಲಿ ಕ್ರೌರ್ಯದ ಅಪರಾಧ ನಡೆದಿದೆ ಎನ್ನಲಾದ ಬಗ್ಗೆ ಯಾವುದೇ ಅಂಶಗಳು ಕಂಡುಬರುತ್ತಿಲ್ಲ. ಹೀಗಾಗಿ, ಪತಿ ಹಾಗೂ ಅವರ ತಂದೆ-ತಾಯಿ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹಾಗಾಗಿ ಪತಿ ಮತ್ತು ಅವರ ಪೋಷಕರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನ್ಯಾಯಪೀಠ ತೀರ್ಮಾನಿಸಿದೆ.

ಇದನ್ನೂ ಓದಿ: ಲಿವ್‌ ಇನ್‌ ರಿಲೇಷನ್‌ಷಿಪ್‌ಗಳಿಗೆ ಕಾನೂನಿನಡಿ ಮದುವೆಯ ಮಾನ್ಯತೆ ಇಲ್ಲ: ಕೇರಳ ಹೈಕೋರ್ಟ್

ಏನಿದು ಪ್ರಕರಣ?:

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪತಿ-ಪತ್ನಿ 2019ರ ಡಿಸೆಂಬರ್ 18 ರಂದು ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ನಂತರ ಪತಿಯ ಮನೆಯನ್ನು ತೊರೆದಿದ್ದರು. 2020ರ ಫೆಬ್ರುವರಿ 5ರಂದು ಪತಿ ಮತ್ತು ಅವರ ಪೋಷಕರ ವಿರುದ್ಧ ಐಪಿಸಿ ಕಲಂ 498-ಎ, ವರದಕ್ಷಿಣೆ ತಡೆ ಕಾಯ್ದೆ ಕಲಂ 4ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಮತ್ತೊಂದೆಡೆ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಕ್ರೌರ್ಯದ ಆಧಾರದ ಮೇಲೆ ಮದುವೆ ಅಸಿಂಧುಗೊಳಿಸುವಂತೆ ಕೋರಿದ್ದರು.

ಕೌಟುಂಬಿಕ ನ್ಯಾಯಾಲಯವು 2022ರ ನವೆಂಬರ್ 16ರಂದು ದಂಪತಿಯ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿತ್ತು. ಇದಾದ ನಂತರ ವರದಕ್ಷಿಣೆ ಕಿರುಕುಳ ಆರೋಪದಡಿ ಪತಿಯ ವಿರುದ್ಧದ ಪ್ರಕರಣವನ್ನು ಪತ್ನಿ ಮುಂದುವರಿಸಿದ್ದರು.

ಆ ಬಳಿಕ ಪೊಲೀಸರು ಕ್ರಿಮಿನಲ್‌ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದರು. ಪತಿ ಮತ್ತು ಅವರ ತಂದೆ, ತಾಯಿ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ರದ್ದು ಕೋರಿ ಪತಿ 2021ರ ಸೆಪ್ಟೆಂಬರ್ 6ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿದ್ದ ವಿಚಾರಣೆಯ ಪ್ರಕ್ರಿಯೆಗೆ ತಡೆ ನೀಡಿತ್ತು. ಪತ್ನಿಯ ಆರೋಪಗಳನ್ನು ಅಲ್ಲಗೆಳೆದಿದ್ದ ಪತಿ, ವಿವಾಹಯಾದ ನಂತರ ನನ್ನ ತಂದೆ-ತಾಯಿ ನಮ್ಮ ಜೊತೆಗೆ ನೆಲೆಸಿರಲಿಲ್ಲವಾದರೂ ಅವರನ್ನೂ ಪ್ರಕರಣದಲ್ಲಿ ಎಳೆದು ತಂದಿದ್ದಾರೆ. ಹೀಗಾಗಿ, ಐಪಿಸಿ 498-ಎ ಅಡಿ ಮಾಡಿರುವ ಆರೋಪಗಳನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...