Homeಕರ್ನಾಟಕವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

- Advertisement -
- Advertisement -

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಕ್ರೌರ್ಯ ಎನಿಸಿದರೂ, ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 498-ಎ (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿಯಿಂದ ಕ್ರೌರ್ಯ) ಅಡಿಯಲ್ಲಿ ಅದು ಕ್ರೌರ್ಯದ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ವಿವಾಹ ನಂತರ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಹಿನ್ನೆಲೆ ಪತ್ನಿಯು ಐಪಿಸಿ ಕಲಂ 498-ಎ ಅಡಿಯಲ್ಲಿ ಕ್ರೌರ್ಯದ ಆರೋಪ ಹೊರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಅವರ ಪತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದೆ.

ಡಿಸೆಂಬರ್ 2019 ರಲ್ಲಿ ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ಆದರೆ ಪತ್ನಿ ಮಾಡಿರುವ ಏಕೈಕ ಆರೋಪವೆಂದರೆ, ”ಪತಿಯು ಆಧ್ಯಾತ್ಮಕ ಚಿಂತಕರೊಬ್ಬರ ಅನುಯಾಯಿಯಾಗಿದ್ದಾರೆ. ಸದಾ ಅವರ ಪ್ರವಚನಗಳ ವಿಡಿಯೊ ಕಡೆಗೇ ಆಸಕ್ತಿ ತೋರುತ್ತಾ ಆಧ್ಯಾತ್ಮಿಕ ಒಲವು ಬೆಳೆಸಿಕೊಂಡಿದ್ದಾರೆ. ನನ್ನೊಡನೆ ಯಾವತ್ತೂ ದೈಹಿಕ ಸಂಪರ್ಕ ಬೆಳೆಸುವ ಆಸಕ್ತಿ ತೋರಿಸಿಲ್ಲ. ಇದು ಹಿಂದೂ ವಿವಾಹ ಕಾಯ್ದೆಯಡಿ ನಿಸ್ಸಂದೇಹವಾಗಿ ಕ್ರೌರ್ಯ ಎನಿಸಲಿದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ನ್ಯಾಯಪೀಠವು, ”ಇದು ಐಪಿಸಿ ಕಲಂ 498- ಎ ಅಡಿಯಲ್ಲಿ ಹೇಳಿರುವಂತಹ ಕ್ರೌರ್ಯದ ಅಪರಾಧ ಕೃತ್ಯವಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 2022 ರಲ್ಲಿ ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯದ ಆಧಾರದ ಮೇಲೆ ಪತ್ನಿಯ ಮನವಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯವು ಈಗಾಗಲೇ ವಿಚ್ಛೇದನದ ಆದೇಶವನ್ನು ನೀಡಿತ್ತು.

ದೂರಿನಲ್ಲಿ ಮತ್ತು ದೋಷಾರೋಪ ಪಟ್ಟಿಯಲ್ಲಿ 498-ಎ ಅಡಿಯಲ್ಲಿ ಕ್ರೌರ್ಯದ ಅಪರಾಧ ನಡೆದಿದೆ ಎನ್ನಲಾದ ಬಗ್ಗೆ ಯಾವುದೇ ಅಂಶಗಳು ಕಂಡುಬರುತ್ತಿಲ್ಲ. ಹೀಗಾಗಿ, ಪತಿ ಹಾಗೂ ಅವರ ತಂದೆ-ತಾಯಿ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹಾಗಾಗಿ ಪತಿ ಮತ್ತು ಅವರ ಪೋಷಕರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನ್ಯಾಯಪೀಠ ತೀರ್ಮಾನಿಸಿದೆ.

ಇದನ್ನೂ ಓದಿ: ಲಿವ್‌ ಇನ್‌ ರಿಲೇಷನ್‌ಷಿಪ್‌ಗಳಿಗೆ ಕಾನೂನಿನಡಿ ಮದುವೆಯ ಮಾನ್ಯತೆ ಇಲ್ಲ: ಕೇರಳ ಹೈಕೋರ್ಟ್

ಏನಿದು ಪ್ರಕರಣ?:

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪತಿ-ಪತ್ನಿ 2019ರ ಡಿಸೆಂಬರ್ 18 ರಂದು ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ನಂತರ ಪತಿಯ ಮನೆಯನ್ನು ತೊರೆದಿದ್ದರು. 2020ರ ಫೆಬ್ರುವರಿ 5ರಂದು ಪತಿ ಮತ್ತು ಅವರ ಪೋಷಕರ ವಿರುದ್ಧ ಐಪಿಸಿ ಕಲಂ 498-ಎ, ವರದಕ್ಷಿಣೆ ತಡೆ ಕಾಯ್ದೆ ಕಲಂ 4ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಮತ್ತೊಂದೆಡೆ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಕ್ರೌರ್ಯದ ಆಧಾರದ ಮೇಲೆ ಮದುವೆ ಅಸಿಂಧುಗೊಳಿಸುವಂತೆ ಕೋರಿದ್ದರು.

ಕೌಟುಂಬಿಕ ನ್ಯಾಯಾಲಯವು 2022ರ ನವೆಂಬರ್ 16ರಂದು ದಂಪತಿಯ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿತ್ತು. ಇದಾದ ನಂತರ ವರದಕ್ಷಿಣೆ ಕಿರುಕುಳ ಆರೋಪದಡಿ ಪತಿಯ ವಿರುದ್ಧದ ಪ್ರಕರಣವನ್ನು ಪತ್ನಿ ಮುಂದುವರಿಸಿದ್ದರು.

ಆ ಬಳಿಕ ಪೊಲೀಸರು ಕ್ರಿಮಿನಲ್‌ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದರು. ಪತಿ ಮತ್ತು ಅವರ ತಂದೆ, ತಾಯಿ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ರದ್ದು ಕೋರಿ ಪತಿ 2021ರ ಸೆಪ್ಟೆಂಬರ್ 6ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿದ್ದ ವಿಚಾರಣೆಯ ಪ್ರಕ್ರಿಯೆಗೆ ತಡೆ ನೀಡಿತ್ತು. ಪತ್ನಿಯ ಆರೋಪಗಳನ್ನು ಅಲ್ಲಗೆಳೆದಿದ್ದ ಪತಿ, ವಿವಾಹಯಾದ ನಂತರ ನನ್ನ ತಂದೆ-ತಾಯಿ ನಮ್ಮ ಜೊತೆಗೆ ನೆಲೆಸಿರಲಿಲ್ಲವಾದರೂ ಅವರನ್ನೂ ಪ್ರಕರಣದಲ್ಲಿ ಎಳೆದು ತಂದಿದ್ದಾರೆ. ಹೀಗಾಗಿ, ಐಪಿಸಿ 498-ಎ ಅಡಿ ಮಾಡಿರುವ ಆರೋಪಗಳನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...