Homeಕರ್ನಾಟಕವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

- Advertisement -
- Advertisement -

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಕ್ರೌರ್ಯ ಎನಿಸಿದರೂ, ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 498-ಎ (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿಯಿಂದ ಕ್ರೌರ್ಯ) ಅಡಿಯಲ್ಲಿ ಅದು ಕ್ರೌರ್ಯದ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ವಿವಾಹ ನಂತರ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಹಿನ್ನೆಲೆ ಪತ್ನಿಯು ಐಪಿಸಿ ಕಲಂ 498-ಎ ಅಡಿಯಲ್ಲಿ ಕ್ರೌರ್ಯದ ಆರೋಪ ಹೊರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಅವರ ಪತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದೆ.

ಡಿಸೆಂಬರ್ 2019 ರಲ್ಲಿ ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ಆದರೆ ಪತ್ನಿ ಮಾಡಿರುವ ಏಕೈಕ ಆರೋಪವೆಂದರೆ, ”ಪತಿಯು ಆಧ್ಯಾತ್ಮಕ ಚಿಂತಕರೊಬ್ಬರ ಅನುಯಾಯಿಯಾಗಿದ್ದಾರೆ. ಸದಾ ಅವರ ಪ್ರವಚನಗಳ ವಿಡಿಯೊ ಕಡೆಗೇ ಆಸಕ್ತಿ ತೋರುತ್ತಾ ಆಧ್ಯಾತ್ಮಿಕ ಒಲವು ಬೆಳೆಸಿಕೊಂಡಿದ್ದಾರೆ. ನನ್ನೊಡನೆ ಯಾವತ್ತೂ ದೈಹಿಕ ಸಂಪರ್ಕ ಬೆಳೆಸುವ ಆಸಕ್ತಿ ತೋರಿಸಿಲ್ಲ. ಇದು ಹಿಂದೂ ವಿವಾಹ ಕಾಯ್ದೆಯಡಿ ನಿಸ್ಸಂದೇಹವಾಗಿ ಕ್ರೌರ್ಯ ಎನಿಸಲಿದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ನ್ಯಾಯಪೀಠವು, ”ಇದು ಐಪಿಸಿ ಕಲಂ 498- ಎ ಅಡಿಯಲ್ಲಿ ಹೇಳಿರುವಂತಹ ಕ್ರೌರ್ಯದ ಅಪರಾಧ ಕೃತ್ಯವಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 2022 ರಲ್ಲಿ ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯದ ಆಧಾರದ ಮೇಲೆ ಪತ್ನಿಯ ಮನವಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯವು ಈಗಾಗಲೇ ವಿಚ್ಛೇದನದ ಆದೇಶವನ್ನು ನೀಡಿತ್ತು.

ದೂರಿನಲ್ಲಿ ಮತ್ತು ದೋಷಾರೋಪ ಪಟ್ಟಿಯಲ್ಲಿ 498-ಎ ಅಡಿಯಲ್ಲಿ ಕ್ರೌರ್ಯದ ಅಪರಾಧ ನಡೆದಿದೆ ಎನ್ನಲಾದ ಬಗ್ಗೆ ಯಾವುದೇ ಅಂಶಗಳು ಕಂಡುಬರುತ್ತಿಲ್ಲ. ಹೀಗಾಗಿ, ಪತಿ ಹಾಗೂ ಅವರ ತಂದೆ-ತಾಯಿ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹಾಗಾಗಿ ಪತಿ ಮತ್ತು ಅವರ ಪೋಷಕರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನ್ಯಾಯಪೀಠ ತೀರ್ಮಾನಿಸಿದೆ.

ಇದನ್ನೂ ಓದಿ: ಲಿವ್‌ ಇನ್‌ ರಿಲೇಷನ್‌ಷಿಪ್‌ಗಳಿಗೆ ಕಾನೂನಿನಡಿ ಮದುವೆಯ ಮಾನ್ಯತೆ ಇಲ್ಲ: ಕೇರಳ ಹೈಕೋರ್ಟ್

ಏನಿದು ಪ್ರಕರಣ?:

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪತಿ-ಪತ್ನಿ 2019ರ ಡಿಸೆಂಬರ್ 18 ರಂದು ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ನಂತರ ಪತಿಯ ಮನೆಯನ್ನು ತೊರೆದಿದ್ದರು. 2020ರ ಫೆಬ್ರುವರಿ 5ರಂದು ಪತಿ ಮತ್ತು ಅವರ ಪೋಷಕರ ವಿರುದ್ಧ ಐಪಿಸಿ ಕಲಂ 498-ಎ, ವರದಕ್ಷಿಣೆ ತಡೆ ಕಾಯ್ದೆ ಕಲಂ 4ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಮತ್ತೊಂದೆಡೆ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಕ್ರೌರ್ಯದ ಆಧಾರದ ಮೇಲೆ ಮದುವೆ ಅಸಿಂಧುಗೊಳಿಸುವಂತೆ ಕೋರಿದ್ದರು.

ಕೌಟುಂಬಿಕ ನ್ಯಾಯಾಲಯವು 2022ರ ನವೆಂಬರ್ 16ರಂದು ದಂಪತಿಯ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿತ್ತು. ಇದಾದ ನಂತರ ವರದಕ್ಷಿಣೆ ಕಿರುಕುಳ ಆರೋಪದಡಿ ಪತಿಯ ವಿರುದ್ಧದ ಪ್ರಕರಣವನ್ನು ಪತ್ನಿ ಮುಂದುವರಿಸಿದ್ದರು.

ಆ ಬಳಿಕ ಪೊಲೀಸರು ಕ್ರಿಮಿನಲ್‌ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದರು. ಪತಿ ಮತ್ತು ಅವರ ತಂದೆ, ತಾಯಿ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ರದ್ದು ಕೋರಿ ಪತಿ 2021ರ ಸೆಪ್ಟೆಂಬರ್ 6ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿದ್ದ ವಿಚಾರಣೆಯ ಪ್ರಕ್ರಿಯೆಗೆ ತಡೆ ನೀಡಿತ್ತು. ಪತ್ನಿಯ ಆರೋಪಗಳನ್ನು ಅಲ್ಲಗೆಳೆದಿದ್ದ ಪತಿ, ವಿವಾಹಯಾದ ನಂತರ ನನ್ನ ತಂದೆ-ತಾಯಿ ನಮ್ಮ ಜೊತೆಗೆ ನೆಲೆಸಿರಲಿಲ್ಲವಾದರೂ ಅವರನ್ನೂ ಪ್ರಕರಣದಲ್ಲಿ ಎಳೆದು ತಂದಿದ್ದಾರೆ. ಹೀಗಾಗಿ, ಐಪಿಸಿ 498-ಎ ಅಡಿ ಮಾಡಿರುವ ಆರೋಪಗಳನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...