Homeಕರ್ನಾಟಕವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

- Advertisement -
- Advertisement -

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಕ್ರೌರ್ಯ ಎನಿಸಿದರೂ, ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 498-ಎ (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿಯಿಂದ ಕ್ರೌರ್ಯ) ಅಡಿಯಲ್ಲಿ ಅದು ಕ್ರೌರ್ಯದ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ವಿವಾಹ ನಂತರ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಹಿನ್ನೆಲೆ ಪತ್ನಿಯು ಐಪಿಸಿ ಕಲಂ 498-ಎ ಅಡಿಯಲ್ಲಿ ಕ್ರೌರ್ಯದ ಆರೋಪ ಹೊರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಅವರ ಪತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದೆ.

ಡಿಸೆಂಬರ್ 2019 ರಲ್ಲಿ ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ಆದರೆ ಪತ್ನಿ ಮಾಡಿರುವ ಏಕೈಕ ಆರೋಪವೆಂದರೆ, ”ಪತಿಯು ಆಧ್ಯಾತ್ಮಕ ಚಿಂತಕರೊಬ್ಬರ ಅನುಯಾಯಿಯಾಗಿದ್ದಾರೆ. ಸದಾ ಅವರ ಪ್ರವಚನಗಳ ವಿಡಿಯೊ ಕಡೆಗೇ ಆಸಕ್ತಿ ತೋರುತ್ತಾ ಆಧ್ಯಾತ್ಮಿಕ ಒಲವು ಬೆಳೆಸಿಕೊಂಡಿದ್ದಾರೆ. ನನ್ನೊಡನೆ ಯಾವತ್ತೂ ದೈಹಿಕ ಸಂಪರ್ಕ ಬೆಳೆಸುವ ಆಸಕ್ತಿ ತೋರಿಸಿಲ್ಲ. ಇದು ಹಿಂದೂ ವಿವಾಹ ಕಾಯ್ದೆಯಡಿ ನಿಸ್ಸಂದೇಹವಾಗಿ ಕ್ರೌರ್ಯ ಎನಿಸಲಿದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ನ್ಯಾಯಪೀಠವು, ”ಇದು ಐಪಿಸಿ ಕಲಂ 498- ಎ ಅಡಿಯಲ್ಲಿ ಹೇಳಿರುವಂತಹ ಕ್ರೌರ್ಯದ ಅಪರಾಧ ಕೃತ್ಯವಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 2022 ರಲ್ಲಿ ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯದ ಆಧಾರದ ಮೇಲೆ ಪತ್ನಿಯ ಮನವಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯವು ಈಗಾಗಲೇ ವಿಚ್ಛೇದನದ ಆದೇಶವನ್ನು ನೀಡಿತ್ತು.

ದೂರಿನಲ್ಲಿ ಮತ್ತು ದೋಷಾರೋಪ ಪಟ್ಟಿಯಲ್ಲಿ 498-ಎ ಅಡಿಯಲ್ಲಿ ಕ್ರೌರ್ಯದ ಅಪರಾಧ ನಡೆದಿದೆ ಎನ್ನಲಾದ ಬಗ್ಗೆ ಯಾವುದೇ ಅಂಶಗಳು ಕಂಡುಬರುತ್ತಿಲ್ಲ. ಹೀಗಾಗಿ, ಪತಿ ಹಾಗೂ ಅವರ ತಂದೆ-ತಾಯಿ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹಾಗಾಗಿ ಪತಿ ಮತ್ತು ಅವರ ಪೋಷಕರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನ್ಯಾಯಪೀಠ ತೀರ್ಮಾನಿಸಿದೆ.

ಇದನ್ನೂ ಓದಿ: ಲಿವ್‌ ಇನ್‌ ರಿಲೇಷನ್‌ಷಿಪ್‌ಗಳಿಗೆ ಕಾನೂನಿನಡಿ ಮದುವೆಯ ಮಾನ್ಯತೆ ಇಲ್ಲ: ಕೇರಳ ಹೈಕೋರ್ಟ್

ಏನಿದು ಪ್ರಕರಣ?:

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪತಿ-ಪತ್ನಿ 2019ರ ಡಿಸೆಂಬರ್ 18 ರಂದು ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ನಂತರ ಪತಿಯ ಮನೆಯನ್ನು ತೊರೆದಿದ್ದರು. 2020ರ ಫೆಬ್ರುವರಿ 5ರಂದು ಪತಿ ಮತ್ತು ಅವರ ಪೋಷಕರ ವಿರುದ್ಧ ಐಪಿಸಿ ಕಲಂ 498-ಎ, ವರದಕ್ಷಿಣೆ ತಡೆ ಕಾಯ್ದೆ ಕಲಂ 4ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಮತ್ತೊಂದೆಡೆ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಕ್ರೌರ್ಯದ ಆಧಾರದ ಮೇಲೆ ಮದುವೆ ಅಸಿಂಧುಗೊಳಿಸುವಂತೆ ಕೋರಿದ್ದರು.

ಕೌಟುಂಬಿಕ ನ್ಯಾಯಾಲಯವು 2022ರ ನವೆಂಬರ್ 16ರಂದು ದಂಪತಿಯ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿತ್ತು. ಇದಾದ ನಂತರ ವರದಕ್ಷಿಣೆ ಕಿರುಕುಳ ಆರೋಪದಡಿ ಪತಿಯ ವಿರುದ್ಧದ ಪ್ರಕರಣವನ್ನು ಪತ್ನಿ ಮುಂದುವರಿಸಿದ್ದರು.

ಆ ಬಳಿಕ ಪೊಲೀಸರು ಕ್ರಿಮಿನಲ್‌ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದರು. ಪತಿ ಮತ್ತು ಅವರ ತಂದೆ, ತಾಯಿ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ರದ್ದು ಕೋರಿ ಪತಿ 2021ರ ಸೆಪ್ಟೆಂಬರ್ 6ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿದ್ದ ವಿಚಾರಣೆಯ ಪ್ರಕ್ರಿಯೆಗೆ ತಡೆ ನೀಡಿತ್ತು. ಪತ್ನಿಯ ಆರೋಪಗಳನ್ನು ಅಲ್ಲಗೆಳೆದಿದ್ದ ಪತಿ, ವಿವಾಹಯಾದ ನಂತರ ನನ್ನ ತಂದೆ-ತಾಯಿ ನಮ್ಮ ಜೊತೆಗೆ ನೆಲೆಸಿರಲಿಲ್ಲವಾದರೂ ಅವರನ್ನೂ ಪ್ರಕರಣದಲ್ಲಿ ಎಳೆದು ತಂದಿದ್ದಾರೆ. ಹೀಗಾಗಿ, ಐಪಿಸಿ 498-ಎ ಅಡಿ ಮಾಡಿರುವ ಆರೋಪಗಳನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...