Homeದಲಿತ್ ಫೈಲ್ಸ್ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ - ಕಣ್ಮುಚ್ಚಿ ಕುಳಿತ ತಾಲ್ಲೂಕು...

ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

- Advertisement -
- Advertisement -

ದಲಿತ ಕುಟುಂಬಗಳು ತಮಗಾಗಿ ನಿರ್ಮಿಸಿದ ರಸ್ತೆಯಲ್ಲಿ ಓಡಾಡಲು ಸವರ್ಣಿಯ ಕುಟುಂಬದವರು ಅಡ್ಡಿಪಡಿಸುತ್ತಿರುವ, ಅದನ್ನು ಬಗೆಹರಿಸುವಂತೆ ತಾಲ್ಲೂಕು ಆಡಳಿತಕ್ಕೆ ಹಲವು ಮನವಿ ಮಾಡಿದರೂ ಸ್ಪಂದಿಸದಿರುವ ಅಮಾನವೀಯ ಪ್ರಕರಣ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಜರುಗಿದೆ.

ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಪುಟ್ಟ ಗ್ರಾಮದ ಹೆಸರು ಅರೇನಹಳ್ಳಿ ಕಾಲೋನಿ. ಇಲ್ಲಿ 20 ಕ್ಕೂ ಹೆಚ್ಚು ದಲಿತ ಕುಟುಂಬಗಳು ಸುಮಾರು 150 ವರ್ಷದ ಹಿಂದಿನಿಂದಲೂ ವಾಸಿಸುತ್ತಾ ಬಂದಿವೆ. ಅವರ ಬಹುದಿನದ ಬೇಡಿಕೆಯಿಂದ 2018-19ರಲ್ಲಿ ಸರ್ಕಾರದ ವತಿಯಿಂದ ಕಾಂಕ್ರೀಟ್ ರಸ್ತೆಯೇನೊ ನಿರ್ಮಾಣವಾಗಿದೆ. ಆದರೆ ಆ ರಸ್ತೆಯಲ್ಲಿ ದಲಿತರು ಓಡಾಡುವಂತಿಲ್ಲ. ಏಕೆಂದರೆ ಅಲ್ಲಿಯೇ ಪಕ್ಕದಲ್ಲಿ ಮನೆ ಕಟ್ಟಿಕೊಂಡಿರುವ ತಮ್ಮೆಗೌಡ ಎಂಬ ಒಕ್ಕಲಿಗ ಸಮುದಾಯದ ಕುಟುಂಬದವರು ರಸ್ತೆಯ ಎರಡೂ ಬದಿಗೂ ತೆಂಗಿನ ಗರಿಗಳನ್ನು ಸುರಿದು ರಸ್ತೆಯನ್ನು ಮುಚ್ಚಿಬಿಟ್ಟಿದ್ದಾರೆ. ಇದರಿಂದ ಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳು ಬೀರುವಳ್ಳಿ ಗ್ರಾಮ ಪಂಚಾಯ್ತಿಗೆ, ತಹಶೀಲ್ದಾರ್‌ರವರಿಗೆ ಹಲವಾರು ಮನವಿ ಮಾಡಿದರೂ ಪ್ರಯೋಜನವಾಗದೆ ದಿಕ್ಕುಕಾಣದಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಗ್ರಾಮದ ಯುವಕ ಶಂಕರ್, “ಮೂರು ವರ್ಷದ ಹಿಂದೆ ಎಸ್‌ಸಿಪಿ ಯೋಜನೆಯಡಿ ನಮ್ಮ ಕಾಲೋನಿಗೆ ಸರ್ವೆ ನಂಬರ್ 25 ರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಮಾಡಲಾಯಿತು. ಆದರೆ ರಸ್ತೆ ಮಾಡಲು ತಮ್ಮ ಜಮೀನಿನ ಕೆಲ ಭಾಗ ಬಿಟ್ಟುಕೊಟ್ಟಿರುವ ತಮ್ಮೆಗೌಡ ಎಂಬುವವರ ಕುಟುಂಬ ತಮಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂದು ರಸ್ತೆಯ ಎರಡೂ ಬದಿಗೆ ತೆಂಗಿನ ಮೊಟ್ಟೆಗಳನ್ನು ಸುರಿದು ರಸ್ತೆ ಮುಚ್ಚಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಯ ಪಿಡಿಓರವರನ್ನು ಕೇಳಿದರೆ ತಮ್ಮೆಗೌಡರು ಮನೆ ಕಟ್ಟಿಕೊಳ್ಳಲು ಎಸ್‌ಸಿಪಿ ಯೋಜನೆಯಡಿ 5 ಲಕ್ಷ ರೂ ಅನುದಾನ ನೀಡಿದ್ದೇವೆ. ಹಾಗಾಗಿ ಅವರಿಗೆ ಪರಿಹಾರ ಕೊಟ್ಟಾಂತಾಗಿದೆ ಎನ್ನುತ್ತಾರೆ. ತಹಶೀಲ್ದಾರರಿಗೆ ಎರಡು ಬಾರಿ ಮನವಿ ಮಾಡಿದರೂ ಅವರು ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಈ ನಮ್ಮ ಪುಟ್ಟ ಗ್ರಾಮದಲ್ಲಿ ಕೆಲವೇ ದಲಿತ ಕುಟುಂಬಗಳಿವೆ. ಅವರ್ಯಾರು ಸಮರ್ಣಿಯರ ವಿರುದ್ಧ ಮಾತನಾಡುವ ಧೈರ್ಯ ಹೊಂದಿಲ್ಲ. ಗ್ರಾಮ ಪಂಚಾಯ್ತಿಗೆ ದೂರು ಕೊಟ್ಟಿದ್ದೇವೆ. ಗ್ರಾಮ ಪಂಚಾಯ್ತಿಯು ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ರಸ್ತೆ ತೆರವು ಮಾಡಿಕೊಡಬೇಕೆಂದು ತಹಶೀಲ್ದಾರ್‌ರವರಿಗೆ ಒಂದೂವರೆ ತಿಂಗಳ ಹಿಂದೆಯೆ ಪತ್ರ ಬರೆದಿದೆ. ಆದರೆ ಸಮಸ್ಯೆ ಮಾತ್ರ ಇದುವರೆಗೂ ಬಗೆಹರಿದಿಲ್ಲ. ನಮ್ಮನ್ನು ಈ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಾರೆ ಶಂಕರ್.

ನಮಗೆ ಪರ್ಯಾಯ ರಸ್ತೆ ಸಹ ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ವಾಹನಗಳನ್ನು ಮನೆಯಲ್ಲಿಯೇ ನಿಲ್ಲಿಸಿ ಹೊಲಗಳ ಮೇಲೆ ಬಹುದೂರಕ್ಕೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಬಗೆಹರಿಸಬೇಕು ಎಂದು ಅಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

ಈ ಕುರಿತು ತಹಶೀಲ್ದಾರ್‌ರವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಿಕ್ಕ ನಂತರ ಅಪ್‌ಡೇಟ್‌ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...