Homeದಲಿತ್ ಫೈಲ್ಸ್ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ - ಕಣ್ಮುಚ್ಚಿ ಕುಳಿತ ತಾಲ್ಲೂಕು...

ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

- Advertisement -
- Advertisement -

ದಲಿತ ಕುಟುಂಬಗಳು ತಮಗಾಗಿ ನಿರ್ಮಿಸಿದ ರಸ್ತೆಯಲ್ಲಿ ಓಡಾಡಲು ಸವರ್ಣಿಯ ಕುಟುಂಬದವರು ಅಡ್ಡಿಪಡಿಸುತ್ತಿರುವ, ಅದನ್ನು ಬಗೆಹರಿಸುವಂತೆ ತಾಲ್ಲೂಕು ಆಡಳಿತಕ್ಕೆ ಹಲವು ಮನವಿ ಮಾಡಿದರೂ ಸ್ಪಂದಿಸದಿರುವ ಅಮಾನವೀಯ ಪ್ರಕರಣ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಜರುಗಿದೆ.

ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಪುಟ್ಟ ಗ್ರಾಮದ ಹೆಸರು ಅರೇನಹಳ್ಳಿ ಕಾಲೋನಿ. ಇಲ್ಲಿ 20 ಕ್ಕೂ ಹೆಚ್ಚು ದಲಿತ ಕುಟುಂಬಗಳು ಸುಮಾರು 150 ವರ್ಷದ ಹಿಂದಿನಿಂದಲೂ ವಾಸಿಸುತ್ತಾ ಬಂದಿವೆ. ಅವರ ಬಹುದಿನದ ಬೇಡಿಕೆಯಿಂದ 2018-19ರಲ್ಲಿ ಸರ್ಕಾರದ ವತಿಯಿಂದ ಕಾಂಕ್ರೀಟ್ ರಸ್ತೆಯೇನೊ ನಿರ್ಮಾಣವಾಗಿದೆ. ಆದರೆ ಆ ರಸ್ತೆಯಲ್ಲಿ ದಲಿತರು ಓಡಾಡುವಂತಿಲ್ಲ. ಏಕೆಂದರೆ ಅಲ್ಲಿಯೇ ಪಕ್ಕದಲ್ಲಿ ಮನೆ ಕಟ್ಟಿಕೊಂಡಿರುವ ತಮ್ಮೆಗೌಡ ಎಂಬ ಒಕ್ಕಲಿಗ ಸಮುದಾಯದ ಕುಟುಂಬದವರು ರಸ್ತೆಯ ಎರಡೂ ಬದಿಗೂ ತೆಂಗಿನ ಗರಿಗಳನ್ನು ಸುರಿದು ರಸ್ತೆಯನ್ನು ಮುಚ್ಚಿಬಿಟ್ಟಿದ್ದಾರೆ. ಇದರಿಂದ ಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳು ಬೀರುವಳ್ಳಿ ಗ್ರಾಮ ಪಂಚಾಯ್ತಿಗೆ, ತಹಶೀಲ್ದಾರ್‌ರವರಿಗೆ ಹಲವಾರು ಮನವಿ ಮಾಡಿದರೂ ಪ್ರಯೋಜನವಾಗದೆ ದಿಕ್ಕುಕಾಣದಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಗ್ರಾಮದ ಯುವಕ ಶಂಕರ್, “ಮೂರು ವರ್ಷದ ಹಿಂದೆ ಎಸ್‌ಸಿಪಿ ಯೋಜನೆಯಡಿ ನಮ್ಮ ಕಾಲೋನಿಗೆ ಸರ್ವೆ ನಂಬರ್ 25 ರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಮಾಡಲಾಯಿತು. ಆದರೆ ರಸ್ತೆ ಮಾಡಲು ತಮ್ಮ ಜಮೀನಿನ ಕೆಲ ಭಾಗ ಬಿಟ್ಟುಕೊಟ್ಟಿರುವ ತಮ್ಮೆಗೌಡ ಎಂಬುವವರ ಕುಟುಂಬ ತಮಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂದು ರಸ್ತೆಯ ಎರಡೂ ಬದಿಗೆ ತೆಂಗಿನ ಮೊಟ್ಟೆಗಳನ್ನು ಸುರಿದು ರಸ್ತೆ ಮುಚ್ಚಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಯ ಪಿಡಿಓರವರನ್ನು ಕೇಳಿದರೆ ತಮ್ಮೆಗೌಡರು ಮನೆ ಕಟ್ಟಿಕೊಳ್ಳಲು ಎಸ್‌ಸಿಪಿ ಯೋಜನೆಯಡಿ 5 ಲಕ್ಷ ರೂ ಅನುದಾನ ನೀಡಿದ್ದೇವೆ. ಹಾಗಾಗಿ ಅವರಿಗೆ ಪರಿಹಾರ ಕೊಟ್ಟಾಂತಾಗಿದೆ ಎನ್ನುತ್ತಾರೆ. ತಹಶೀಲ್ದಾರರಿಗೆ ಎರಡು ಬಾರಿ ಮನವಿ ಮಾಡಿದರೂ ಅವರು ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಈ ನಮ್ಮ ಪುಟ್ಟ ಗ್ರಾಮದಲ್ಲಿ ಕೆಲವೇ ದಲಿತ ಕುಟುಂಬಗಳಿವೆ. ಅವರ್ಯಾರು ಸಮರ್ಣಿಯರ ವಿರುದ್ಧ ಮಾತನಾಡುವ ಧೈರ್ಯ ಹೊಂದಿಲ್ಲ. ಗ್ರಾಮ ಪಂಚಾಯ್ತಿಗೆ ದೂರು ಕೊಟ್ಟಿದ್ದೇವೆ. ಗ್ರಾಮ ಪಂಚಾಯ್ತಿಯು ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ರಸ್ತೆ ತೆರವು ಮಾಡಿಕೊಡಬೇಕೆಂದು ತಹಶೀಲ್ದಾರ್‌ರವರಿಗೆ ಒಂದೂವರೆ ತಿಂಗಳ ಹಿಂದೆಯೆ ಪತ್ರ ಬರೆದಿದೆ. ಆದರೆ ಸಮಸ್ಯೆ ಮಾತ್ರ ಇದುವರೆಗೂ ಬಗೆಹರಿದಿಲ್ಲ. ನಮ್ಮನ್ನು ಈ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಾರೆ ಶಂಕರ್.

ನಮಗೆ ಪರ್ಯಾಯ ರಸ್ತೆ ಸಹ ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ವಾಹನಗಳನ್ನು ಮನೆಯಲ್ಲಿಯೇ ನಿಲ್ಲಿಸಿ ಹೊಲಗಳ ಮೇಲೆ ಬಹುದೂರಕ್ಕೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಬಗೆಹರಿಸಬೇಕು ಎಂದು ಅಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

ಈ ಕುರಿತು ತಹಶೀಲ್ದಾರ್‌ರವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಿಕ್ಕ ನಂತರ ಅಪ್‌ಡೇಟ್‌ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...