Homeದಲಿತ್ ಫೈಲ್ಸ್ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ - ಕಣ್ಮುಚ್ಚಿ ಕುಳಿತ ತಾಲ್ಲೂಕು...

ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

- Advertisement -
- Advertisement -

ದಲಿತ ಕುಟುಂಬಗಳು ತಮಗಾಗಿ ನಿರ್ಮಿಸಿದ ರಸ್ತೆಯಲ್ಲಿ ಓಡಾಡಲು ಸವರ್ಣಿಯ ಕುಟುಂಬದವರು ಅಡ್ಡಿಪಡಿಸುತ್ತಿರುವ, ಅದನ್ನು ಬಗೆಹರಿಸುವಂತೆ ತಾಲ್ಲೂಕು ಆಡಳಿತಕ್ಕೆ ಹಲವು ಮನವಿ ಮಾಡಿದರೂ ಸ್ಪಂದಿಸದಿರುವ ಅಮಾನವೀಯ ಪ್ರಕರಣ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಜರುಗಿದೆ.

ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಪುಟ್ಟ ಗ್ರಾಮದ ಹೆಸರು ಅರೇನಹಳ್ಳಿ ಕಾಲೋನಿ. ಇಲ್ಲಿ 20 ಕ್ಕೂ ಹೆಚ್ಚು ದಲಿತ ಕುಟುಂಬಗಳು ಸುಮಾರು 150 ವರ್ಷದ ಹಿಂದಿನಿಂದಲೂ ವಾಸಿಸುತ್ತಾ ಬಂದಿವೆ. ಅವರ ಬಹುದಿನದ ಬೇಡಿಕೆಯಿಂದ 2018-19ರಲ್ಲಿ ಸರ್ಕಾರದ ವತಿಯಿಂದ ಕಾಂಕ್ರೀಟ್ ರಸ್ತೆಯೇನೊ ನಿರ್ಮಾಣವಾಗಿದೆ. ಆದರೆ ಆ ರಸ್ತೆಯಲ್ಲಿ ದಲಿತರು ಓಡಾಡುವಂತಿಲ್ಲ. ಏಕೆಂದರೆ ಅಲ್ಲಿಯೇ ಪಕ್ಕದಲ್ಲಿ ಮನೆ ಕಟ್ಟಿಕೊಂಡಿರುವ ತಮ್ಮೆಗೌಡ ಎಂಬ ಒಕ್ಕಲಿಗ ಸಮುದಾಯದ ಕುಟುಂಬದವರು ರಸ್ತೆಯ ಎರಡೂ ಬದಿಗೂ ತೆಂಗಿನ ಗರಿಗಳನ್ನು ಸುರಿದು ರಸ್ತೆಯನ್ನು ಮುಚ್ಚಿಬಿಟ್ಟಿದ್ದಾರೆ. ಇದರಿಂದ ಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳು ಬೀರುವಳ್ಳಿ ಗ್ರಾಮ ಪಂಚಾಯ್ತಿಗೆ, ತಹಶೀಲ್ದಾರ್‌ರವರಿಗೆ ಹಲವಾರು ಮನವಿ ಮಾಡಿದರೂ ಪ್ರಯೋಜನವಾಗದೆ ದಿಕ್ಕುಕಾಣದಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಗ್ರಾಮದ ಯುವಕ ಶಂಕರ್, “ಮೂರು ವರ್ಷದ ಹಿಂದೆ ಎಸ್‌ಸಿಪಿ ಯೋಜನೆಯಡಿ ನಮ್ಮ ಕಾಲೋನಿಗೆ ಸರ್ವೆ ನಂಬರ್ 25 ರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಮಾಡಲಾಯಿತು. ಆದರೆ ರಸ್ತೆ ಮಾಡಲು ತಮ್ಮ ಜಮೀನಿನ ಕೆಲ ಭಾಗ ಬಿಟ್ಟುಕೊಟ್ಟಿರುವ ತಮ್ಮೆಗೌಡ ಎಂಬುವವರ ಕುಟುಂಬ ತಮಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂದು ರಸ್ತೆಯ ಎರಡೂ ಬದಿಗೆ ತೆಂಗಿನ ಮೊಟ್ಟೆಗಳನ್ನು ಸುರಿದು ರಸ್ತೆ ಮುಚ್ಚಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಯ ಪಿಡಿಓರವರನ್ನು ಕೇಳಿದರೆ ತಮ್ಮೆಗೌಡರು ಮನೆ ಕಟ್ಟಿಕೊಳ್ಳಲು ಎಸ್‌ಸಿಪಿ ಯೋಜನೆಯಡಿ 5 ಲಕ್ಷ ರೂ ಅನುದಾನ ನೀಡಿದ್ದೇವೆ. ಹಾಗಾಗಿ ಅವರಿಗೆ ಪರಿಹಾರ ಕೊಟ್ಟಾಂತಾಗಿದೆ ಎನ್ನುತ್ತಾರೆ. ತಹಶೀಲ್ದಾರರಿಗೆ ಎರಡು ಬಾರಿ ಮನವಿ ಮಾಡಿದರೂ ಅವರು ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಈ ನಮ್ಮ ಪುಟ್ಟ ಗ್ರಾಮದಲ್ಲಿ ಕೆಲವೇ ದಲಿತ ಕುಟುಂಬಗಳಿವೆ. ಅವರ್ಯಾರು ಸಮರ್ಣಿಯರ ವಿರುದ್ಧ ಮಾತನಾಡುವ ಧೈರ್ಯ ಹೊಂದಿಲ್ಲ. ಗ್ರಾಮ ಪಂಚಾಯ್ತಿಗೆ ದೂರು ಕೊಟ್ಟಿದ್ದೇವೆ. ಗ್ರಾಮ ಪಂಚಾಯ್ತಿಯು ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ರಸ್ತೆ ತೆರವು ಮಾಡಿಕೊಡಬೇಕೆಂದು ತಹಶೀಲ್ದಾರ್‌ರವರಿಗೆ ಒಂದೂವರೆ ತಿಂಗಳ ಹಿಂದೆಯೆ ಪತ್ರ ಬರೆದಿದೆ. ಆದರೆ ಸಮಸ್ಯೆ ಮಾತ್ರ ಇದುವರೆಗೂ ಬಗೆಹರಿದಿಲ್ಲ. ನಮ್ಮನ್ನು ಈ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಾರೆ ಶಂಕರ್.

ನಮಗೆ ಪರ್ಯಾಯ ರಸ್ತೆ ಸಹ ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ವಾಹನಗಳನ್ನು ಮನೆಯಲ್ಲಿಯೇ ನಿಲ್ಲಿಸಿ ಹೊಲಗಳ ಮೇಲೆ ಬಹುದೂರಕ್ಕೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಬಗೆಹರಿಸಬೇಕು ಎಂದು ಅಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

ಈ ಕುರಿತು ತಹಶೀಲ್ದಾರ್‌ರವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಿಕ್ಕ ನಂತರ ಅಪ್‌ಡೇಟ್‌ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....