Homeದಲಿತ್ ಫೈಲ್ಸ್ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ - ಕಣ್ಮುಚ್ಚಿ ಕುಳಿತ ತಾಲ್ಲೂಕು...

ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

- Advertisement -
- Advertisement -

ದಲಿತ ಕುಟುಂಬಗಳು ತಮಗಾಗಿ ನಿರ್ಮಿಸಿದ ರಸ್ತೆಯಲ್ಲಿ ಓಡಾಡಲು ಸವರ್ಣಿಯ ಕುಟುಂಬದವರು ಅಡ್ಡಿಪಡಿಸುತ್ತಿರುವ, ಅದನ್ನು ಬಗೆಹರಿಸುವಂತೆ ತಾಲ್ಲೂಕು ಆಡಳಿತಕ್ಕೆ ಹಲವು ಮನವಿ ಮಾಡಿದರೂ ಸ್ಪಂದಿಸದಿರುವ ಅಮಾನವೀಯ ಪ್ರಕರಣ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಜರುಗಿದೆ.

ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಪುಟ್ಟ ಗ್ರಾಮದ ಹೆಸರು ಅರೇನಹಳ್ಳಿ ಕಾಲೋನಿ. ಇಲ್ಲಿ 20 ಕ್ಕೂ ಹೆಚ್ಚು ದಲಿತ ಕುಟುಂಬಗಳು ಸುಮಾರು 150 ವರ್ಷದ ಹಿಂದಿನಿಂದಲೂ ವಾಸಿಸುತ್ತಾ ಬಂದಿವೆ. ಅವರ ಬಹುದಿನದ ಬೇಡಿಕೆಯಿಂದ 2018-19ರಲ್ಲಿ ಸರ್ಕಾರದ ವತಿಯಿಂದ ಕಾಂಕ್ರೀಟ್ ರಸ್ತೆಯೇನೊ ನಿರ್ಮಾಣವಾಗಿದೆ. ಆದರೆ ಆ ರಸ್ತೆಯಲ್ಲಿ ದಲಿತರು ಓಡಾಡುವಂತಿಲ್ಲ. ಏಕೆಂದರೆ ಅಲ್ಲಿಯೇ ಪಕ್ಕದಲ್ಲಿ ಮನೆ ಕಟ್ಟಿಕೊಂಡಿರುವ ತಮ್ಮೆಗೌಡ ಎಂಬ ಒಕ್ಕಲಿಗ ಸಮುದಾಯದ ಕುಟುಂಬದವರು ರಸ್ತೆಯ ಎರಡೂ ಬದಿಗೂ ತೆಂಗಿನ ಗರಿಗಳನ್ನು ಸುರಿದು ರಸ್ತೆಯನ್ನು ಮುಚ್ಚಿಬಿಟ್ಟಿದ್ದಾರೆ. ಇದರಿಂದ ಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳು ಬೀರುವಳ್ಳಿ ಗ್ರಾಮ ಪಂಚಾಯ್ತಿಗೆ, ತಹಶೀಲ್ದಾರ್‌ರವರಿಗೆ ಹಲವಾರು ಮನವಿ ಮಾಡಿದರೂ ಪ್ರಯೋಜನವಾಗದೆ ದಿಕ್ಕುಕಾಣದಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಗ್ರಾಮದ ಯುವಕ ಶಂಕರ್, “ಮೂರು ವರ್ಷದ ಹಿಂದೆ ಎಸ್‌ಸಿಪಿ ಯೋಜನೆಯಡಿ ನಮ್ಮ ಕಾಲೋನಿಗೆ ಸರ್ವೆ ನಂಬರ್ 25 ರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಮಾಡಲಾಯಿತು. ಆದರೆ ರಸ್ತೆ ಮಾಡಲು ತಮ್ಮ ಜಮೀನಿನ ಕೆಲ ಭಾಗ ಬಿಟ್ಟುಕೊಟ್ಟಿರುವ ತಮ್ಮೆಗೌಡ ಎಂಬುವವರ ಕುಟುಂಬ ತಮಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂದು ರಸ್ತೆಯ ಎರಡೂ ಬದಿಗೆ ತೆಂಗಿನ ಮೊಟ್ಟೆಗಳನ್ನು ಸುರಿದು ರಸ್ತೆ ಮುಚ್ಚಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಯ ಪಿಡಿಓರವರನ್ನು ಕೇಳಿದರೆ ತಮ್ಮೆಗೌಡರು ಮನೆ ಕಟ್ಟಿಕೊಳ್ಳಲು ಎಸ್‌ಸಿಪಿ ಯೋಜನೆಯಡಿ 5 ಲಕ್ಷ ರೂ ಅನುದಾನ ನೀಡಿದ್ದೇವೆ. ಹಾಗಾಗಿ ಅವರಿಗೆ ಪರಿಹಾರ ಕೊಟ್ಟಾಂತಾಗಿದೆ ಎನ್ನುತ್ತಾರೆ. ತಹಶೀಲ್ದಾರರಿಗೆ ಎರಡು ಬಾರಿ ಮನವಿ ಮಾಡಿದರೂ ಅವರು ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಈ ನಮ್ಮ ಪುಟ್ಟ ಗ್ರಾಮದಲ್ಲಿ ಕೆಲವೇ ದಲಿತ ಕುಟುಂಬಗಳಿವೆ. ಅವರ್ಯಾರು ಸಮರ್ಣಿಯರ ವಿರುದ್ಧ ಮಾತನಾಡುವ ಧೈರ್ಯ ಹೊಂದಿಲ್ಲ. ಗ್ರಾಮ ಪಂಚಾಯ್ತಿಗೆ ದೂರು ಕೊಟ್ಟಿದ್ದೇವೆ. ಗ್ರಾಮ ಪಂಚಾಯ್ತಿಯು ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ರಸ್ತೆ ತೆರವು ಮಾಡಿಕೊಡಬೇಕೆಂದು ತಹಶೀಲ್ದಾರ್‌ರವರಿಗೆ ಒಂದೂವರೆ ತಿಂಗಳ ಹಿಂದೆಯೆ ಪತ್ರ ಬರೆದಿದೆ. ಆದರೆ ಸಮಸ್ಯೆ ಮಾತ್ರ ಇದುವರೆಗೂ ಬಗೆಹರಿದಿಲ್ಲ. ನಮ್ಮನ್ನು ಈ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಾರೆ ಶಂಕರ್.

ನಮಗೆ ಪರ್ಯಾಯ ರಸ್ತೆ ಸಹ ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ವಾಹನಗಳನ್ನು ಮನೆಯಲ್ಲಿಯೇ ನಿಲ್ಲಿಸಿ ಹೊಲಗಳ ಮೇಲೆ ಬಹುದೂರಕ್ಕೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಬಗೆಹರಿಸಬೇಕು ಎಂದು ಅಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

ಈ ಕುರಿತು ತಹಶೀಲ್ದಾರ್‌ರವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಿಕ್ಕ ನಂತರ ಅಪ್‌ಡೇಟ್‌ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...