HomeUncategorizedಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್‌ಎಸ್‌ಎಸ್‌ ಮುಖಂಡ ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಆಡಿಯೋ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದ್ದು, ‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್ ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

‘ಮ್ಯೂಸಿಯಂ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶ ದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ತಪ್ಪು ತಿಳಿಯಬೇಡಿ, ನೀವು ಮೀಸಲಾತಿ ಪಡೆದುಕೊಳ್ಳುವ ಜಾತಿಗೆ ಸೇರಿದ್ದೀರಾ ಎಂದು ಕೇಳಿದರು. ನಾನು ಹೌದು ಎಂದಿದ್ದಕ್ಕೆ ನನಗೆ ಪ್ರವೇಶ ನಿರಾಕರಿಸಿದರು. ನನ್ನೊಂದಿಗೆ ಬಂದಿದ್ದ ಇಬ್ಬರು ಸ್ನೇಹಿತರು ಮಾತ್ರ ಒಳಗೆ ಹೋದರು. ಪರವಾಗಿಲ್ಲ ಎಂದು ಹೇಳಿದ ನಾನು, ಹೊರಗೆ ಕಾಯುತ್ತಾ ಕುಳಿತುಕೊಂಡೆ. ಗೋವಿಂದ ಕಾರಜೋಳ ಹಾಗೂ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೂ ಪ್ರವೇಶ ನಿರಾಕರಿಸಲಾಗಿತ್ತಾ? ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿಯಿಂದ ದೂರ ಉಳಿದಿರುವ ಗೂಳಿಹಟ್ಟಿ:

ಹೊಸದುರ್ಗ ಮೀಸಲು ಕ್ಷೇತ್ರದಿಂದ ಗೆದ್ದು ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್, 2023ರ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದಾರೆ. ಹೊಸದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಗೂಳಿಹಟ್ಟಿ ಶೇಖರ್‌ಗೆ ಹೈಕಮಾಂಡ್ ಟಿಕೆಟ್ ನೀಡಲಿಲ್ಲ. ಬದಲಿಗೆ ಅಂದಿನ ಖನಿಜ ನಿಗಮದ ಅಧ್ಯಕ್ಷರಾಗಿದ್ದ ಎಸ್. ಲಿಂಗಮೂರ್ತಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಗೂಳಿಹಟ್ಟಿ ರಾಜೀನಾಮೆ ನೀಡಿದ್ದರು.

ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ:

ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಅವರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಸುಮಾರು ₹23 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದನ್ನೂ ಓದಿ; ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...