HomeUncategorizedಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್‌ಎಸ್‌ಎಸ್‌ ಮುಖಂಡ ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಆಡಿಯೋ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದ್ದು, ‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್ ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

‘ಮ್ಯೂಸಿಯಂ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶ ದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ತಪ್ಪು ತಿಳಿಯಬೇಡಿ, ನೀವು ಮೀಸಲಾತಿ ಪಡೆದುಕೊಳ್ಳುವ ಜಾತಿಗೆ ಸೇರಿದ್ದೀರಾ ಎಂದು ಕೇಳಿದರು. ನಾನು ಹೌದು ಎಂದಿದ್ದಕ್ಕೆ ನನಗೆ ಪ್ರವೇಶ ನಿರಾಕರಿಸಿದರು. ನನ್ನೊಂದಿಗೆ ಬಂದಿದ್ದ ಇಬ್ಬರು ಸ್ನೇಹಿತರು ಮಾತ್ರ ಒಳಗೆ ಹೋದರು. ಪರವಾಗಿಲ್ಲ ಎಂದು ಹೇಳಿದ ನಾನು, ಹೊರಗೆ ಕಾಯುತ್ತಾ ಕುಳಿತುಕೊಂಡೆ. ಗೋವಿಂದ ಕಾರಜೋಳ ಹಾಗೂ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೂ ಪ್ರವೇಶ ನಿರಾಕರಿಸಲಾಗಿತ್ತಾ? ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿಯಿಂದ ದೂರ ಉಳಿದಿರುವ ಗೂಳಿಹಟ್ಟಿ:

ಹೊಸದುರ್ಗ ಮೀಸಲು ಕ್ಷೇತ್ರದಿಂದ ಗೆದ್ದು ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್, 2023ರ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದಾರೆ. ಹೊಸದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಗೂಳಿಹಟ್ಟಿ ಶೇಖರ್‌ಗೆ ಹೈಕಮಾಂಡ್ ಟಿಕೆಟ್ ನೀಡಲಿಲ್ಲ. ಬದಲಿಗೆ ಅಂದಿನ ಖನಿಜ ನಿಗಮದ ಅಧ್ಯಕ್ಷರಾಗಿದ್ದ ಎಸ್. ಲಿಂಗಮೂರ್ತಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಗೂಳಿಹಟ್ಟಿ ರಾಜೀನಾಮೆ ನೀಡಿದ್ದರು.

ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ:

ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಅವರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಸುಮಾರು ₹23 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದನ್ನೂ ಓದಿ; ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...