HomeUncategorizedಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್‌ಎಸ್‌ಎಸ್‌ ಮುಖಂಡ ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಆಡಿಯೋ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದ್ದು, ‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್ ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

‘ಮ್ಯೂಸಿಯಂ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶ ದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ತಪ್ಪು ತಿಳಿಯಬೇಡಿ, ನೀವು ಮೀಸಲಾತಿ ಪಡೆದುಕೊಳ್ಳುವ ಜಾತಿಗೆ ಸೇರಿದ್ದೀರಾ ಎಂದು ಕೇಳಿದರು. ನಾನು ಹೌದು ಎಂದಿದ್ದಕ್ಕೆ ನನಗೆ ಪ್ರವೇಶ ನಿರಾಕರಿಸಿದರು. ನನ್ನೊಂದಿಗೆ ಬಂದಿದ್ದ ಇಬ್ಬರು ಸ್ನೇಹಿತರು ಮಾತ್ರ ಒಳಗೆ ಹೋದರು. ಪರವಾಗಿಲ್ಲ ಎಂದು ಹೇಳಿದ ನಾನು, ಹೊರಗೆ ಕಾಯುತ್ತಾ ಕುಳಿತುಕೊಂಡೆ. ಗೋವಿಂದ ಕಾರಜೋಳ ಹಾಗೂ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೂ ಪ್ರವೇಶ ನಿರಾಕರಿಸಲಾಗಿತ್ತಾ? ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿಯಿಂದ ದೂರ ಉಳಿದಿರುವ ಗೂಳಿಹಟ್ಟಿ:

ಹೊಸದುರ್ಗ ಮೀಸಲು ಕ್ಷೇತ್ರದಿಂದ ಗೆದ್ದು ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್, 2023ರ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದಾರೆ. ಹೊಸದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಗೂಳಿಹಟ್ಟಿ ಶೇಖರ್‌ಗೆ ಹೈಕಮಾಂಡ್ ಟಿಕೆಟ್ ನೀಡಲಿಲ್ಲ. ಬದಲಿಗೆ ಅಂದಿನ ಖನಿಜ ನಿಗಮದ ಅಧ್ಯಕ್ಷರಾಗಿದ್ದ ಎಸ್. ಲಿಂಗಮೂರ್ತಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಗೂಳಿಹಟ್ಟಿ ರಾಜೀನಾಮೆ ನೀಡಿದ್ದರು.

ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ:

ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಅವರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಸುಮಾರು ₹23 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದನ್ನೂ ಓದಿ; ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...