Homeಕರ್ನಾಟಕಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

- Advertisement -
- Advertisement -

ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಪ್ರಹಸನ (ಸ್ಕಿಟ್‌) ಪ್ರದರ್ಶಿಸಿರುವ ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿ.ಆರ್.ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನ್ ಜೈನ್‌ ಯೂನಿವರ್ಸಿಟಿ (ಜೈನ್ ವಿಶ್ವವಿದ್ಯಾನಿಲಯ ರದ್ದುಗೊಳಿಸಿ) ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿರುವ ಪೋಸ್ಟರ್‌ ವೈರಲ್ ಆಗುತ್ತಿದೆ. ಮತ್ತೊಂದೆಡೆ ಜೈನ್ ವಿವಿಯು, “ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಸ್ಕಿಟ್ ಮಾಡಲಾಗಿದೆ. ಈ ರೀತಿಯ ಅಪಕಲ್ಪನೆಗಳು ಇರಬಾರದು ಎಂದು ಈ ಸ್ಕಿಟ್ ಕೊನೆಯಲ್ಲಿ ಸಂದೇಶ ಸಾರುತ್ತಿದೆ” ಎಂದು ಹೇಳಿಕೊಂಡಿದೆ. (ಸಾರ್ವಜನಿಕವಾಗಿ ಸ್ಕಿಟ್‌ನ ಪೂರ್ಣ ವಿಡಿಯೊ ಲಭ್ಯವಾಗಿಲ್ಲ.)

ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ದಲಿತ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಸಂಸ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಈ ಸ್ಕಿಟ್ ಮಾಡಿರುವವರ ಉದ್ದೇಶ ಸ್ಪಷ್ಟವಾಗುತ್ತಿದೆ. ಸಮಾಜದಲ್ಲಿ ಅರಿವು ಮೂಡಿಸಲು ಇದನ್ನು ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅರಿವು ಮೂಡಿಸಲು ಬೇರೆ ಬೇರೆ ಆಯಾಮಗಳು ಇರುತ್ತವೆ. ಆದರೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ, ಮೀಸಲಾತಿ, ಅಸ್ಪೃಶ್ಯತೆಯ ಬಗ್ಗೆ ಬಳಸಿರುವ ಭಾಷೆಯು ಇವರ ಉದ್ದೇಶವೇನೆಂದು ಹೇಳುತ್ತದೆ. ಜಾತಿ ಪೀಡಿತ ಮನೋಭಾವ ಎದ್ದುಕಾಣುತ್ತಿದೆ” ಎಂದಿದ್ದಾರೆ.

“ಈ ಸ್ಕಿಟ್‌ನ ರಿಹರ್ಸಲ್‌ ನೋಡಿ ಪ್ರದರ್ಶನಕ್ಕೆ ಅನುಮತಿ ನೀಡಿದವರು ಯಾರು? ಅವರ ವಿರುದ್ಧ ಕಾನೂನು ಕ್ರಮ ಆಗಬೇಕಿದೆ. ಬಂಡವಾಳಶಾಹಿಗಳು ನಡೆಸುತ್ತಿರುವ ಈ ಸಂಸ್ಥೆಯ ಮ್ಯಾನೇಜ್‌ಮೆಂಟ್ ವಿರುದ್ಧ ಕ್ರಮ ಜರುಗಿಸಬೇಕಿದೆ. ಸರ್ಕಾರಗಳಿಗೆ ಈ ರೀತಿಯ ಮನಸ್ಥಿತಿಗಳೇ ಬೇಕಾಗಿವೆ. ಸಾಮಾಜಿಕ ನ್ಯಾಯವನ್ನು ಇವರು ಕಡೆಗಣಿಸುತ್ತಿದ್ದಾರೆ. ಅಪ್ರಜಾತ್ಮಕ ವ್ಯವಸ್ಥೆ ಬೆಳೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ಬಾಬಾ ಸಾಹೇಬರ ಕುರಿತು ಅವಹೇಳನಕಾರಿ ಸ್ಕಿಟ್ ಮಾಡಿಸಿದ್ದಾರೆ. ಯಾವ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

“ಆರ್‌ಎಸ್‌ಎಸ್, ಬಿಜೆಪಿಯವರು ಮೀಸಲಾತಿ ಎಂದರೆ ಮೈ ಪರಚಿಕೊಳ್ಳುತ್ತಾರೆ. ಮೂಲತಃ ಸಾಮಾಜಿಕ ನ್ಯಾಯದ ವಿರೋಧಿ ಮನಸ್ಥಿತಿ ಇವರದ್ದು. ಮಂಡಲ್‌ ವರದಿಗೆ ಬೆಂಕಿ ಹಚ್ಚಿದವರು ಇವರು. ಮೀಸಲಾತಿಯ ವಿರುದ್ಧ ವಿಷ ಕಾರುತ್ತಿರುವವರು ಇವರು. ಆದರೆ ಇಡಬ್ಲ್ಯೂಎಸ್‌ ಮೂಲಕ ಅನಾಯಸವಾಗಿ ತಿನ್ನುತ್ತಿದ್ದಾರೆ. ಇಡಬ್ಲ್ಯೂಎಸ್‌ ಕುರಿತು ಇವರಿಗೆ ಏನೂ ಅನಿಸುವುದಿಲ್ಲ” ಎಂದು ಟೀಕಿಸಿದರು.

“ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದು, ಜೈನ್‌ ವಿವಿ ಬಾಯ್ಕಾಟ್‌ ಘೋಷಣೆ ಕೂಗುತ್ತಿದ್ದಾರೆ. ಈ ವಿಶ್ವವಿದ್ಯಾನಿಲಯವನ್ನು ರದ್ದುಗೊಳಿಸಬೇಕು. ಈ ಸ್ಕಿಟ್‌ನಲ್ಲಿ ಭಾಗಿಯಾಗಿರುವವರು (ಸ್ಕಿಟ್ ಮಾಡಿದವನು, ಮಾಡಲು ಕುಮ್ಮಕ್ಕು ಕೊಟ್ಟವನು, ಅದನ್ನು ಪ್ರೋತ್ಸಾಹಿಸಿದ ಮ್ಯಾನೇಜ್‌ಮೆಂಟ್) ಯಾರೇ ಆದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇಂತಹ ದೇಶದ್ರೋಹಿಗಳ ಮೇಲೆ ಯುಎಪಿಎ ಹಾಗೂ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ದಸಂಸ ಹಿರಿಯ ಮುಖಂಡರಾದ ಎನ್‌.ವೆಂಕಟೇಶ್ ಮಾತನಾಡಿ, “ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿ ಈ ಘಟನೆಯನ್ನು ಖಂಡಿಸುತ್ತದೆ. ಇಲ್ಲಿ ಉದ್ದೇಶಪೂರ್ವಕವಾಗಿ ಅಂಬೇಡ್ಕರ್‌ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಅಸಮಾನತೆಯನ್ನು ಉಳಿಸಿಕೊಂಡು ಹೋಗಬೇಕು ಎಂಬುದು ಸಂಘಪರಿವಾರದ ಆಲೋಚನೆ. ಹೀಗಾಗಿ ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬುಡಮೇಲು ಮಾಡಲು, ಸಂವಿಧಾನ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದರು.

ಒಳಮೀಸಲಾತಿ ಹೋರಾಟದ ಮುಂಚೂಣಿ ಮುಖಂಡರಾದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಂವಿಧಾನ ಜಾರಿಮಾಡಬೇಕಾದ ಸರ್ಕಾರ ಇಂತಹ ಘಟನೆಗಳು ನಡೆದಾಗ ತಕ್ಷಣವೇ ಕ್ರಮ ಜರುಗಿಸಬೇಕು. ಸಂವಿಧಾನಶಿಲ್ಪಿಯನ್ನು ಅವಹೇಳನ ಮಾಡಿದವರನ್ನು ಬೇಷರತ್ತಾಗಿ ಅರೆಸ್ಟ್ ಮಾಡಿ, ತನಿಖೆ ಆರಂಭಿಸಬೇಕು. ಅನಗತ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಅವಕಾಶ ನೀಡಿ ಯುವಕರನ್ನು ಪ್ರಚೋದನೆ ಮಾಡಬಾರದು. ಇದು ಸರ್ಕಾರ ವೈಫಲ್ಯವಾಗುತ್ತದೆ. ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು. ಇಂತಹ ವಿಚಾರಗಳು ಹೆಚ್ಚು ಚರ್ಚೆಯಾದಷ್ಟು ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ” ಎಂದು ಎಚ್ಚರಿಸಿದರು.

ಘಟನೆಯನ್ನು ಖಂಡಿಸಿದ ಹಿರಿಯ ದಲಿತ ಮುಖಂಡರಾದ ಕರಿಯಪ್ಪ ಗುಡಿಮನಿ, “ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿಯ ಸ್ಥಳೀಯ ಕಾರ್ಯಕರ್ತರು ವಿಜಯನಗರ ಚಾಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...