Homeಕರ್ನಾಟಕಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

- Advertisement -
- Advertisement -

ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಪ್ರಹಸನ (ಸ್ಕಿಟ್‌) ಪ್ರದರ್ಶಿಸಿರುವ ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿ.ಆರ್.ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನ್ ಜೈನ್‌ ಯೂನಿವರ್ಸಿಟಿ (ಜೈನ್ ವಿಶ್ವವಿದ್ಯಾನಿಲಯ ರದ್ದುಗೊಳಿಸಿ) ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿರುವ ಪೋಸ್ಟರ್‌ ವೈರಲ್ ಆಗುತ್ತಿದೆ. ಮತ್ತೊಂದೆಡೆ ಜೈನ್ ವಿವಿಯು, “ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಸ್ಕಿಟ್ ಮಾಡಲಾಗಿದೆ. ಈ ರೀತಿಯ ಅಪಕಲ್ಪನೆಗಳು ಇರಬಾರದು ಎಂದು ಈ ಸ್ಕಿಟ್ ಕೊನೆಯಲ್ಲಿ ಸಂದೇಶ ಸಾರುತ್ತಿದೆ” ಎಂದು ಹೇಳಿಕೊಂಡಿದೆ. (ಸಾರ್ವಜನಿಕವಾಗಿ ಸ್ಕಿಟ್‌ನ ಪೂರ್ಣ ವಿಡಿಯೊ ಲಭ್ಯವಾಗಿಲ್ಲ.)

ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ದಲಿತ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಸಂಸ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಈ ಸ್ಕಿಟ್ ಮಾಡಿರುವವರ ಉದ್ದೇಶ ಸ್ಪಷ್ಟವಾಗುತ್ತಿದೆ. ಸಮಾಜದಲ್ಲಿ ಅರಿವು ಮೂಡಿಸಲು ಇದನ್ನು ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅರಿವು ಮೂಡಿಸಲು ಬೇರೆ ಬೇರೆ ಆಯಾಮಗಳು ಇರುತ್ತವೆ. ಆದರೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ, ಮೀಸಲಾತಿ, ಅಸ್ಪೃಶ್ಯತೆಯ ಬಗ್ಗೆ ಬಳಸಿರುವ ಭಾಷೆಯು ಇವರ ಉದ್ದೇಶವೇನೆಂದು ಹೇಳುತ್ತದೆ. ಜಾತಿ ಪೀಡಿತ ಮನೋಭಾವ ಎದ್ದುಕಾಣುತ್ತಿದೆ” ಎಂದಿದ್ದಾರೆ.

“ಈ ಸ್ಕಿಟ್‌ನ ರಿಹರ್ಸಲ್‌ ನೋಡಿ ಪ್ರದರ್ಶನಕ್ಕೆ ಅನುಮತಿ ನೀಡಿದವರು ಯಾರು? ಅವರ ವಿರುದ್ಧ ಕಾನೂನು ಕ್ರಮ ಆಗಬೇಕಿದೆ. ಬಂಡವಾಳಶಾಹಿಗಳು ನಡೆಸುತ್ತಿರುವ ಈ ಸಂಸ್ಥೆಯ ಮ್ಯಾನೇಜ್‌ಮೆಂಟ್ ವಿರುದ್ಧ ಕ್ರಮ ಜರುಗಿಸಬೇಕಿದೆ. ಸರ್ಕಾರಗಳಿಗೆ ಈ ರೀತಿಯ ಮನಸ್ಥಿತಿಗಳೇ ಬೇಕಾಗಿವೆ. ಸಾಮಾಜಿಕ ನ್ಯಾಯವನ್ನು ಇವರು ಕಡೆಗಣಿಸುತ್ತಿದ್ದಾರೆ. ಅಪ್ರಜಾತ್ಮಕ ವ್ಯವಸ್ಥೆ ಬೆಳೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ಬಾಬಾ ಸಾಹೇಬರ ಕುರಿತು ಅವಹೇಳನಕಾರಿ ಸ್ಕಿಟ್ ಮಾಡಿಸಿದ್ದಾರೆ. ಯಾವ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

“ಆರ್‌ಎಸ್‌ಎಸ್, ಬಿಜೆಪಿಯವರು ಮೀಸಲಾತಿ ಎಂದರೆ ಮೈ ಪರಚಿಕೊಳ್ಳುತ್ತಾರೆ. ಮೂಲತಃ ಸಾಮಾಜಿಕ ನ್ಯಾಯದ ವಿರೋಧಿ ಮನಸ್ಥಿತಿ ಇವರದ್ದು. ಮಂಡಲ್‌ ವರದಿಗೆ ಬೆಂಕಿ ಹಚ್ಚಿದವರು ಇವರು. ಮೀಸಲಾತಿಯ ವಿರುದ್ಧ ವಿಷ ಕಾರುತ್ತಿರುವವರು ಇವರು. ಆದರೆ ಇಡಬ್ಲ್ಯೂಎಸ್‌ ಮೂಲಕ ಅನಾಯಸವಾಗಿ ತಿನ್ನುತ್ತಿದ್ದಾರೆ. ಇಡಬ್ಲ್ಯೂಎಸ್‌ ಕುರಿತು ಇವರಿಗೆ ಏನೂ ಅನಿಸುವುದಿಲ್ಲ” ಎಂದು ಟೀಕಿಸಿದರು.

“ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದು, ಜೈನ್‌ ವಿವಿ ಬಾಯ್ಕಾಟ್‌ ಘೋಷಣೆ ಕೂಗುತ್ತಿದ್ದಾರೆ. ಈ ವಿಶ್ವವಿದ್ಯಾನಿಲಯವನ್ನು ರದ್ದುಗೊಳಿಸಬೇಕು. ಈ ಸ್ಕಿಟ್‌ನಲ್ಲಿ ಭಾಗಿಯಾಗಿರುವವರು (ಸ್ಕಿಟ್ ಮಾಡಿದವನು, ಮಾಡಲು ಕುಮ್ಮಕ್ಕು ಕೊಟ್ಟವನು, ಅದನ್ನು ಪ್ರೋತ್ಸಾಹಿಸಿದ ಮ್ಯಾನೇಜ್‌ಮೆಂಟ್) ಯಾರೇ ಆದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇಂತಹ ದೇಶದ್ರೋಹಿಗಳ ಮೇಲೆ ಯುಎಪಿಎ ಹಾಗೂ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ದಸಂಸ ಹಿರಿಯ ಮುಖಂಡರಾದ ಎನ್‌.ವೆಂಕಟೇಶ್ ಮಾತನಾಡಿ, “ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿ ಈ ಘಟನೆಯನ್ನು ಖಂಡಿಸುತ್ತದೆ. ಇಲ್ಲಿ ಉದ್ದೇಶಪೂರ್ವಕವಾಗಿ ಅಂಬೇಡ್ಕರ್‌ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಅಸಮಾನತೆಯನ್ನು ಉಳಿಸಿಕೊಂಡು ಹೋಗಬೇಕು ಎಂಬುದು ಸಂಘಪರಿವಾರದ ಆಲೋಚನೆ. ಹೀಗಾಗಿ ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬುಡಮೇಲು ಮಾಡಲು, ಸಂವಿಧಾನ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದರು.

ಒಳಮೀಸಲಾತಿ ಹೋರಾಟದ ಮುಂಚೂಣಿ ಮುಖಂಡರಾದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಂವಿಧಾನ ಜಾರಿಮಾಡಬೇಕಾದ ಸರ್ಕಾರ ಇಂತಹ ಘಟನೆಗಳು ನಡೆದಾಗ ತಕ್ಷಣವೇ ಕ್ರಮ ಜರುಗಿಸಬೇಕು. ಸಂವಿಧಾನಶಿಲ್ಪಿಯನ್ನು ಅವಹೇಳನ ಮಾಡಿದವರನ್ನು ಬೇಷರತ್ತಾಗಿ ಅರೆಸ್ಟ್ ಮಾಡಿ, ತನಿಖೆ ಆರಂಭಿಸಬೇಕು. ಅನಗತ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಅವಕಾಶ ನೀಡಿ ಯುವಕರನ್ನು ಪ್ರಚೋದನೆ ಮಾಡಬಾರದು. ಇದು ಸರ್ಕಾರ ವೈಫಲ್ಯವಾಗುತ್ತದೆ. ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು. ಇಂತಹ ವಿಚಾರಗಳು ಹೆಚ್ಚು ಚರ್ಚೆಯಾದಷ್ಟು ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ” ಎಂದು ಎಚ್ಚರಿಸಿದರು.

ಘಟನೆಯನ್ನು ಖಂಡಿಸಿದ ಹಿರಿಯ ದಲಿತ ಮುಖಂಡರಾದ ಕರಿಯಪ್ಪ ಗುಡಿಮನಿ, “ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿಯ ಸ್ಥಳೀಯ ಕಾರ್ಯಕರ್ತರು ವಿಜಯನಗರ ಚಾಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...