Homeಕರ್ನಾಟಕಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

- Advertisement -
- Advertisement -

ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಪ್ರಹಸನ (ಸ್ಕಿಟ್‌) ಪ್ರದರ್ಶಿಸಿರುವ ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿ.ಆರ್.ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನ್ ಜೈನ್‌ ಯೂನಿವರ್ಸಿಟಿ (ಜೈನ್ ವಿಶ್ವವಿದ್ಯಾನಿಲಯ ರದ್ದುಗೊಳಿಸಿ) ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿರುವ ಪೋಸ್ಟರ್‌ ವೈರಲ್ ಆಗುತ್ತಿದೆ. ಮತ್ತೊಂದೆಡೆ ಜೈನ್ ವಿವಿಯು, “ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಸ್ಕಿಟ್ ಮಾಡಲಾಗಿದೆ. ಈ ರೀತಿಯ ಅಪಕಲ್ಪನೆಗಳು ಇರಬಾರದು ಎಂದು ಈ ಸ್ಕಿಟ್ ಕೊನೆಯಲ್ಲಿ ಸಂದೇಶ ಸಾರುತ್ತಿದೆ” ಎಂದು ಹೇಳಿಕೊಂಡಿದೆ. (ಸಾರ್ವಜನಿಕವಾಗಿ ಸ್ಕಿಟ್‌ನ ಪೂರ್ಣ ವಿಡಿಯೊ ಲಭ್ಯವಾಗಿಲ್ಲ.)

ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ದಲಿತ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಸಂಸ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಈ ಸ್ಕಿಟ್ ಮಾಡಿರುವವರ ಉದ್ದೇಶ ಸ್ಪಷ್ಟವಾಗುತ್ತಿದೆ. ಸಮಾಜದಲ್ಲಿ ಅರಿವು ಮೂಡಿಸಲು ಇದನ್ನು ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅರಿವು ಮೂಡಿಸಲು ಬೇರೆ ಬೇರೆ ಆಯಾಮಗಳು ಇರುತ್ತವೆ. ಆದರೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ, ಮೀಸಲಾತಿ, ಅಸ್ಪೃಶ್ಯತೆಯ ಬಗ್ಗೆ ಬಳಸಿರುವ ಭಾಷೆಯು ಇವರ ಉದ್ದೇಶವೇನೆಂದು ಹೇಳುತ್ತದೆ. ಜಾತಿ ಪೀಡಿತ ಮನೋಭಾವ ಎದ್ದುಕಾಣುತ್ತಿದೆ” ಎಂದಿದ್ದಾರೆ.

“ಈ ಸ್ಕಿಟ್‌ನ ರಿಹರ್ಸಲ್‌ ನೋಡಿ ಪ್ರದರ್ಶನಕ್ಕೆ ಅನುಮತಿ ನೀಡಿದವರು ಯಾರು? ಅವರ ವಿರುದ್ಧ ಕಾನೂನು ಕ್ರಮ ಆಗಬೇಕಿದೆ. ಬಂಡವಾಳಶಾಹಿಗಳು ನಡೆಸುತ್ತಿರುವ ಈ ಸಂಸ್ಥೆಯ ಮ್ಯಾನೇಜ್‌ಮೆಂಟ್ ವಿರುದ್ಧ ಕ್ರಮ ಜರುಗಿಸಬೇಕಿದೆ. ಸರ್ಕಾರಗಳಿಗೆ ಈ ರೀತಿಯ ಮನಸ್ಥಿತಿಗಳೇ ಬೇಕಾಗಿವೆ. ಸಾಮಾಜಿಕ ನ್ಯಾಯವನ್ನು ಇವರು ಕಡೆಗಣಿಸುತ್ತಿದ್ದಾರೆ. ಅಪ್ರಜಾತ್ಮಕ ವ್ಯವಸ್ಥೆ ಬೆಳೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ಬಾಬಾ ಸಾಹೇಬರ ಕುರಿತು ಅವಹೇಳನಕಾರಿ ಸ್ಕಿಟ್ ಮಾಡಿಸಿದ್ದಾರೆ. ಯಾವ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

“ಆರ್‌ಎಸ್‌ಎಸ್, ಬಿಜೆಪಿಯವರು ಮೀಸಲಾತಿ ಎಂದರೆ ಮೈ ಪರಚಿಕೊಳ್ಳುತ್ತಾರೆ. ಮೂಲತಃ ಸಾಮಾಜಿಕ ನ್ಯಾಯದ ವಿರೋಧಿ ಮನಸ್ಥಿತಿ ಇವರದ್ದು. ಮಂಡಲ್‌ ವರದಿಗೆ ಬೆಂಕಿ ಹಚ್ಚಿದವರು ಇವರು. ಮೀಸಲಾತಿಯ ವಿರುದ್ಧ ವಿಷ ಕಾರುತ್ತಿರುವವರು ಇವರು. ಆದರೆ ಇಡಬ್ಲ್ಯೂಎಸ್‌ ಮೂಲಕ ಅನಾಯಸವಾಗಿ ತಿನ್ನುತ್ತಿದ್ದಾರೆ. ಇಡಬ್ಲ್ಯೂಎಸ್‌ ಕುರಿತು ಇವರಿಗೆ ಏನೂ ಅನಿಸುವುದಿಲ್ಲ” ಎಂದು ಟೀಕಿಸಿದರು.

“ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದು, ಜೈನ್‌ ವಿವಿ ಬಾಯ್ಕಾಟ್‌ ಘೋಷಣೆ ಕೂಗುತ್ತಿದ್ದಾರೆ. ಈ ವಿಶ್ವವಿದ್ಯಾನಿಲಯವನ್ನು ರದ್ದುಗೊಳಿಸಬೇಕು. ಈ ಸ್ಕಿಟ್‌ನಲ್ಲಿ ಭಾಗಿಯಾಗಿರುವವರು (ಸ್ಕಿಟ್ ಮಾಡಿದವನು, ಮಾಡಲು ಕುಮ್ಮಕ್ಕು ಕೊಟ್ಟವನು, ಅದನ್ನು ಪ್ರೋತ್ಸಾಹಿಸಿದ ಮ್ಯಾನೇಜ್‌ಮೆಂಟ್) ಯಾರೇ ಆದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇಂತಹ ದೇಶದ್ರೋಹಿಗಳ ಮೇಲೆ ಯುಎಪಿಎ ಹಾಗೂ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ದಸಂಸ ಹಿರಿಯ ಮುಖಂಡರಾದ ಎನ್‌.ವೆಂಕಟೇಶ್ ಮಾತನಾಡಿ, “ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿ ಈ ಘಟನೆಯನ್ನು ಖಂಡಿಸುತ್ತದೆ. ಇಲ್ಲಿ ಉದ್ದೇಶಪೂರ್ವಕವಾಗಿ ಅಂಬೇಡ್ಕರ್‌ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಅಸಮಾನತೆಯನ್ನು ಉಳಿಸಿಕೊಂಡು ಹೋಗಬೇಕು ಎಂಬುದು ಸಂಘಪರಿವಾರದ ಆಲೋಚನೆ. ಹೀಗಾಗಿ ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬುಡಮೇಲು ಮಾಡಲು, ಸಂವಿಧಾನ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದರು.

ಒಳಮೀಸಲಾತಿ ಹೋರಾಟದ ಮುಂಚೂಣಿ ಮುಖಂಡರಾದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಂವಿಧಾನ ಜಾರಿಮಾಡಬೇಕಾದ ಸರ್ಕಾರ ಇಂತಹ ಘಟನೆಗಳು ನಡೆದಾಗ ತಕ್ಷಣವೇ ಕ್ರಮ ಜರುಗಿಸಬೇಕು. ಸಂವಿಧಾನಶಿಲ್ಪಿಯನ್ನು ಅವಹೇಳನ ಮಾಡಿದವರನ್ನು ಬೇಷರತ್ತಾಗಿ ಅರೆಸ್ಟ್ ಮಾಡಿ, ತನಿಖೆ ಆರಂಭಿಸಬೇಕು. ಅನಗತ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಅವಕಾಶ ನೀಡಿ ಯುವಕರನ್ನು ಪ್ರಚೋದನೆ ಮಾಡಬಾರದು. ಇದು ಸರ್ಕಾರ ವೈಫಲ್ಯವಾಗುತ್ತದೆ. ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು. ಇಂತಹ ವಿಚಾರಗಳು ಹೆಚ್ಚು ಚರ್ಚೆಯಾದಷ್ಟು ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ” ಎಂದು ಎಚ್ಚರಿಸಿದರು.

ಘಟನೆಯನ್ನು ಖಂಡಿಸಿದ ಹಿರಿಯ ದಲಿತ ಮುಖಂಡರಾದ ಕರಿಯಪ್ಪ ಗುಡಿಮನಿ, “ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿಯ ಸ್ಥಳೀಯ ಕಾರ್ಯಕರ್ತರು ವಿಜಯನಗರ ಚಾಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...