Homeಕರ್ನಾಟಕಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

- Advertisement -
- Advertisement -

“ಉರಿಗೌಡ, ದೊಡ್ಡನಂಜೇಗೌಡ ಎಂಬ (ಕಾಲ್ಪನಿಕ) ಪಾತ್ರಗಳೇ ಟಿಪ್ಪುವನ್ನು ಕೊಂದಿದ್ದು” ಎಂದು ಪ್ರತಿಪಾದಿಸಿ ಟೀಕೆಗೆ ಒಳಗಾಗಿರುವ ರಂಗಾಯಣ ನಿರ್ದೇಶಕ, ‘ಟಿಪ್ಪು ನಿಜಕನಸುಗಳು’ ನಾಟಕದ ಸೃಷ್ಟಿಕರ್ತ ಅಡ್ಡಂಡ ಕಾರ್ಯಪ್ಪ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಿಧನರಾದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರ ವಿರುದ್ಧ ಇತ್ತೀಚೆಗೆ ಬಹಳ ಹಗುರವಾಗಿ ಮಾತನಾಡಿರುವ ಅಡ್ಡಂಡ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ರೈತ ಸಂಘ ಮುಂದಾಗಿದೆ.

ಈ ಕುರಿತು ಮೈಸೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಲಾಗಿದ್ದು, “ಹೋರಾಟಗಾರ ಪ.ಮಲ್ಲೇಶ್ ಅವರ ಕುರಿತು ಅಪಹಾಸ್ಯವಾಗಿ ಮಾತಾಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಾರದೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು” ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

“ಪ.ಮಲ್ಲೇಶ್ ಅವರು ಮರಣ ಹೊಂದಿದ್ದಾರೆ. ತೀರಿಹೋದವರ ಕುರಿತು ಕೇವಲವಾಗಿ ಮಾತಾಡಿರುವ ಅಡ್ಡಂಡ ಕಾರ್ಯಪ್ಪ ಸಂಸ್ಕೃತಿ ಹೀನ ವ್ಯಕ್ತಿತ್ವದವರು. ವಿಕೃತವಾದ ಆಲೋಚನೆ ಹಾಗೂ ಸಮಾಜ ಒಡೆಯುವ ನೀತಿ ಅಡ್ಡಂಡ ಹೊಂದಿದ್ದಾರೆ” ಎಂದು ಟೀಕಿಸಿದ್ದಾರೆ.

ವ್ಯಕ್ತಿ ಮೃತಪಟ್ಟ ವ್ಯಕ್ತಿಯ ಕುರಿತು ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುವಂತೆ ಯಾರಾದರೂ ನಡೆದುಕೊಂಡರೆ ಈ ದೇಶದ ಕಾನೂನಿನಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಅವಕಾಶವಿದೆ. ವಾರದೊಳಗೆ ಅವರು ಕ್ಷಮೆ ಕೇಳದಿದ್ದರೆ ಸಾಮಾಜಿಕ ಹಿತಚಿಂತನೆಯ ದೃಷ್ಟಿಯಿಂದ ಮಾನನಷ್ಟ ಪ್ರಕರಣ ದಾಖಲಿಸುತ್ತೇವೆ. ಅಹಿಂಸಾತ್ಮಕ ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ಮೈಸೂರಿಗೆ ಸಾಂಸ್ಕೃತಿಕವಾಗಿ ಸಾಹಿತ್ಯಕವಾಗಿ ಗೌರವವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪು, ಸಾಹುಕಾರ್ ಚೆನ್ನಯ್ಯ, ಯಶೋಧರ ದಾಸಪ್ಪ, ಪ್ರೊ.ನಂಜುಂಡಸ್ವಾಮಿ ಪ್ರೇರಕ ಶಕ್ತಿಯಾಗಿದ್ದಾರೆ. ಅವರ ಮುಮದುವರಿದ ಭಾಗಿ ಇದ್ದವರು ಪ.ಮಲ್ಲೇಶ್‌. ಈ ಪರಂಪರೆಗೆ ಧಕ್ಕೆ ತರುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ರಂಗಾಯಣದಿಂದ ಎತ್ತಂಗಡಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನವನ್ನು ನವೆಂಬರ್‌ 19ರಂದು ಆಯೋಜಿಸಲಾಗಿತ್ತು. ಆ ವೇಳೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ಉಪನಿರ್ದೇಶಕಿ ನಿರ್ಮಲಾ ಮಠಮತಿ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ಈ ವೇಳೆ ಪ.ಮಲ್ಲೇಶ್ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪಿಸಿದ ಕಾರ್ಯಪ್ಪ, “ರಂಗಾಯಣಕ್ಕೆ ಯಾವ ಅತಿಥಿಯನ್ನು ಕರೆದರೂ ಅದಕ್ಕೂ ಗಲಾಟೆ. ಪಾಪ ಒಬ್ಬ ಸ್ಪಾನ್ಸರ್‌ (ಪ್ರಾಯೋಜಕರು) ಇದ್ದರು. ಅವರು ಸತ್ತು ಹೋದರು. ಪಾಪ ಪ.ಮಲ್ಲೇಶ್ ಅಂಥ ಅವರ ಹೆಸರು. ಚಳವಳಿಗಾರರಿಗೆ ಸ್ಪಾನ್ಸರ್‌. ಶಾಮಿಯಾನಬೇಕು, ಟೀ ಬೇಕು, ಸಂಜೆ ಹೋಗುವಾಗ ಸಕಲ ತೀರ್ಥಗಳನ್ನು ಸೇವಿಸುವವರಿಗೆ ಅದೂ ಬೇಕು. ಇದನ್ನೆಲ್ಲ ಅವರು ಕೊಡ್ತಾ ಇದ್ದರು. ಅವರು ಸತ್ತು ಹೋದರು. ಇನ್ನೊಂದು ಎಡಪಂಥೀಯ ಗುಂಪು ನಿತ್ಯ ಇದನ್ನೇ ಕಾಯಕ ಮಾಡಿಕೊಂಡಿತ್ತು. ಚಳವಳಿ, ಚಳವಳಿ… ಇದೆಲ್ಲದರ ನಡುವೆ ಯಶಸ್ವಿಯಾಗಿ ನಾಟಕ ಮಾಡಿಯೇ ತೀರಿದ್ದೇನೆ” ಎಂದಿದ್ದರು.

ಸಮಾಜವಾದಿ ಪ.ಮಲ್ಲೇಶ್‌ ಅವರ ಕುರಿತು ಅಡ್ಡಂಡ ಕಾರ್ಯಪ್ಪ ಹಗುರವಾಗಿ ಮಾತನಾಡಿರುವುದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.

ರಾಹುಲ್‌ ಅನರ್ಹತೆ ಸಮರ್ಥನೀಯವಲ್ಲ: ಬಡಗಲಪುರ ನಾಗೇಂದ್ರ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ಅನರ್ಹ ಕಾನೂನಿನ ಪ್ರಕಾರವೇ ಸಮರ್ಥನೀಯವಲ್ಲ. ಪ್ರಜಾಪ್ರಭುತ್ವದ ಅಂತಃಸತ್ವವನ್ನು ಅಡಗಿಸುವ ತೀರ್ಮಾನವಿದು. ಇದರ ವಿರುದ್ಧ ದೇಶದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಯಾಗಬೇಕು” ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಶಿಸಿದರು.

ಕೆಳಗಿನ ನ್ಯಾಯಾಲಯಗಳು ತೀರ್ಪು ಅಂತಿಮವಲ್ಲ. ಮುಂದಿನ ಕೋರ್ಟ್‌ಗಳಲ್ಲಿ ಅದನ್ನು ಪ್ರಶ್ನೆ ಮಾಡಬೇಕು. ಹಾಗೆಯೇ ಯಾವುದೇ ಕ್ರಮಗಳು ಪಾರದರ್ಶಕ ಮತ್ತು ಜನ ಒಪ್ಪುವಂತಿರಬೇಕು. ತೀರ್ಪಿಗೂ ಮುನ್ನ ನ್ಯಾಯಾಧೀಶರು ವ್ಯಕ್ತಿಯ ನಡತೆ, ಆ ಮಾತುಗಳು ಹಿಂದಿನ ಉದ್ದೇಶ ಏನು ಎಂಬುದನ್ನೆಲ್ಲ ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣಗಳಲ್ಲಿ ಆ ಪ್ರಕ್ರಿಯೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ದಾಖಲಾದ 1 ಲಕ್ಷ ಮಾನನಷ್ಟ ಪ್ರಕರಣಗಳಲ್ಲಿ 5 ಜನರಿಗೆ ಶಿಕ್ಷೆಯಾದರೆ ಹೆಚ್ಚು. ಇಂತಹ ಪ್ರಕರಣ ದಾಖಲಿಸುವಂತಿದ್ದರೆ ಲಂಕೇಶ್, ಎ.ಕೆ.ಸುಬ್ಬಯ್ಯ, ಪ್ರೊ.ನಂಜುಂಡಸ್ವಾಮಿ ಸಾವಿರ ಸಲ ಜೈಲಿಗೆ ಹೋಗಬೇಕಿತ್ತು. ರಾಹುಲ್ ಅಭಿವ್ಯಕ್ತಿ ದಮನ ಮುಂದೆ ನಮ್ಮೆಲ್ಲರಿಗೂ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಮೀಸಲಾತಿ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ನ್ಯಾಯವಲ್ಲ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಮೀಸಲಾತಿ ಸಾಂವಿಧಾನಿಕ ಹಕ್ಕು. ಬೇರೆ ಬೇರೆ ಸಮಾಜಗಳು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಮೀಸಲಾತಿ ಕೊಡಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ ಅವರು ಮಾತನಾಡಿ, “ಅಡ್ಡಂಡ ಕಾರ್ಯಪ್ಪ ನಾನು ಹೇಳುವುದೇ ಸತ್ಯ. ಅದನ್ನು ಎಲ್ಲರೂ ಒಪ್ಪಬೇಕೆಂದು ಒತ್ತಾಯಿಸುವುದು ದಾಷ್ಟ್ಯತನ. ಇವರ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ ಅನಿಸುತ್ತದೆ. ಇವರಿಗೆ ಬುದ್ಧಿ ಕಲಿಸುವ ಅಗತ್ಯವಿದೆ” ಎಂದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ನೇತ್ರಾವತಿ, ಮಹೇಶ್ ಮಂಡಕಳ್ಳಿ, ಪಿ.ಮರಂಕಯ್ಯ, ರಾಘವೇಂದ್ರ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...