Homeಕರ್ನಾಟಕಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

- Advertisement -
- Advertisement -

“ಉರಿಗೌಡ, ದೊಡ್ಡನಂಜೇಗೌಡ ಎಂಬ (ಕಾಲ್ಪನಿಕ) ಪಾತ್ರಗಳೇ ಟಿಪ್ಪುವನ್ನು ಕೊಂದಿದ್ದು” ಎಂದು ಪ್ರತಿಪಾದಿಸಿ ಟೀಕೆಗೆ ಒಳಗಾಗಿರುವ ರಂಗಾಯಣ ನಿರ್ದೇಶಕ, ‘ಟಿಪ್ಪು ನಿಜಕನಸುಗಳು’ ನಾಟಕದ ಸೃಷ್ಟಿಕರ್ತ ಅಡ್ಡಂಡ ಕಾರ್ಯಪ್ಪ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಿಧನರಾದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರ ವಿರುದ್ಧ ಇತ್ತೀಚೆಗೆ ಬಹಳ ಹಗುರವಾಗಿ ಮಾತನಾಡಿರುವ ಅಡ್ಡಂಡ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ರೈತ ಸಂಘ ಮುಂದಾಗಿದೆ.

ಈ ಕುರಿತು ಮೈಸೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಲಾಗಿದ್ದು, “ಹೋರಾಟಗಾರ ಪ.ಮಲ್ಲೇಶ್ ಅವರ ಕುರಿತು ಅಪಹಾಸ್ಯವಾಗಿ ಮಾತಾಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಾರದೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು” ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

“ಪ.ಮಲ್ಲೇಶ್ ಅವರು ಮರಣ ಹೊಂದಿದ್ದಾರೆ. ತೀರಿಹೋದವರ ಕುರಿತು ಕೇವಲವಾಗಿ ಮಾತಾಡಿರುವ ಅಡ್ಡಂಡ ಕಾರ್ಯಪ್ಪ ಸಂಸ್ಕೃತಿ ಹೀನ ವ್ಯಕ್ತಿತ್ವದವರು. ವಿಕೃತವಾದ ಆಲೋಚನೆ ಹಾಗೂ ಸಮಾಜ ಒಡೆಯುವ ನೀತಿ ಅಡ್ಡಂಡ ಹೊಂದಿದ್ದಾರೆ” ಎಂದು ಟೀಕಿಸಿದ್ದಾರೆ.

ವ್ಯಕ್ತಿ ಮೃತಪಟ್ಟ ವ್ಯಕ್ತಿಯ ಕುರಿತು ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುವಂತೆ ಯಾರಾದರೂ ನಡೆದುಕೊಂಡರೆ ಈ ದೇಶದ ಕಾನೂನಿನಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಅವಕಾಶವಿದೆ. ವಾರದೊಳಗೆ ಅವರು ಕ್ಷಮೆ ಕೇಳದಿದ್ದರೆ ಸಾಮಾಜಿಕ ಹಿತಚಿಂತನೆಯ ದೃಷ್ಟಿಯಿಂದ ಮಾನನಷ್ಟ ಪ್ರಕರಣ ದಾಖಲಿಸುತ್ತೇವೆ. ಅಹಿಂಸಾತ್ಮಕ ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ಮೈಸೂರಿಗೆ ಸಾಂಸ್ಕೃತಿಕವಾಗಿ ಸಾಹಿತ್ಯಕವಾಗಿ ಗೌರವವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪು, ಸಾಹುಕಾರ್ ಚೆನ್ನಯ್ಯ, ಯಶೋಧರ ದಾಸಪ್ಪ, ಪ್ರೊ.ನಂಜುಂಡಸ್ವಾಮಿ ಪ್ರೇರಕ ಶಕ್ತಿಯಾಗಿದ್ದಾರೆ. ಅವರ ಮುಮದುವರಿದ ಭಾಗಿ ಇದ್ದವರು ಪ.ಮಲ್ಲೇಶ್‌. ಈ ಪರಂಪರೆಗೆ ಧಕ್ಕೆ ತರುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ರಂಗಾಯಣದಿಂದ ಎತ್ತಂಗಡಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನವನ್ನು ನವೆಂಬರ್‌ 19ರಂದು ಆಯೋಜಿಸಲಾಗಿತ್ತು. ಆ ವೇಳೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ಉಪನಿರ್ದೇಶಕಿ ನಿರ್ಮಲಾ ಮಠಮತಿ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ಈ ವೇಳೆ ಪ.ಮಲ್ಲೇಶ್ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪಿಸಿದ ಕಾರ್ಯಪ್ಪ, “ರಂಗಾಯಣಕ್ಕೆ ಯಾವ ಅತಿಥಿಯನ್ನು ಕರೆದರೂ ಅದಕ್ಕೂ ಗಲಾಟೆ. ಪಾಪ ಒಬ್ಬ ಸ್ಪಾನ್ಸರ್‌ (ಪ್ರಾಯೋಜಕರು) ಇದ್ದರು. ಅವರು ಸತ್ತು ಹೋದರು. ಪಾಪ ಪ.ಮಲ್ಲೇಶ್ ಅಂಥ ಅವರ ಹೆಸರು. ಚಳವಳಿಗಾರರಿಗೆ ಸ್ಪಾನ್ಸರ್‌. ಶಾಮಿಯಾನಬೇಕು, ಟೀ ಬೇಕು, ಸಂಜೆ ಹೋಗುವಾಗ ಸಕಲ ತೀರ್ಥಗಳನ್ನು ಸೇವಿಸುವವರಿಗೆ ಅದೂ ಬೇಕು. ಇದನ್ನೆಲ್ಲ ಅವರು ಕೊಡ್ತಾ ಇದ್ದರು. ಅವರು ಸತ್ತು ಹೋದರು. ಇನ್ನೊಂದು ಎಡಪಂಥೀಯ ಗುಂಪು ನಿತ್ಯ ಇದನ್ನೇ ಕಾಯಕ ಮಾಡಿಕೊಂಡಿತ್ತು. ಚಳವಳಿ, ಚಳವಳಿ… ಇದೆಲ್ಲದರ ನಡುವೆ ಯಶಸ್ವಿಯಾಗಿ ನಾಟಕ ಮಾಡಿಯೇ ತೀರಿದ್ದೇನೆ” ಎಂದಿದ್ದರು.

ಸಮಾಜವಾದಿ ಪ.ಮಲ್ಲೇಶ್‌ ಅವರ ಕುರಿತು ಅಡ್ಡಂಡ ಕಾರ್ಯಪ್ಪ ಹಗುರವಾಗಿ ಮಾತನಾಡಿರುವುದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.

ರಾಹುಲ್‌ ಅನರ್ಹತೆ ಸಮರ್ಥನೀಯವಲ್ಲ: ಬಡಗಲಪುರ ನಾಗೇಂದ್ರ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ಅನರ್ಹ ಕಾನೂನಿನ ಪ್ರಕಾರವೇ ಸಮರ್ಥನೀಯವಲ್ಲ. ಪ್ರಜಾಪ್ರಭುತ್ವದ ಅಂತಃಸತ್ವವನ್ನು ಅಡಗಿಸುವ ತೀರ್ಮಾನವಿದು. ಇದರ ವಿರುದ್ಧ ದೇಶದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಯಾಗಬೇಕು” ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಶಿಸಿದರು.

ಕೆಳಗಿನ ನ್ಯಾಯಾಲಯಗಳು ತೀರ್ಪು ಅಂತಿಮವಲ್ಲ. ಮುಂದಿನ ಕೋರ್ಟ್‌ಗಳಲ್ಲಿ ಅದನ್ನು ಪ್ರಶ್ನೆ ಮಾಡಬೇಕು. ಹಾಗೆಯೇ ಯಾವುದೇ ಕ್ರಮಗಳು ಪಾರದರ್ಶಕ ಮತ್ತು ಜನ ಒಪ್ಪುವಂತಿರಬೇಕು. ತೀರ್ಪಿಗೂ ಮುನ್ನ ನ್ಯಾಯಾಧೀಶರು ವ್ಯಕ್ತಿಯ ನಡತೆ, ಆ ಮಾತುಗಳು ಹಿಂದಿನ ಉದ್ದೇಶ ಏನು ಎಂಬುದನ್ನೆಲ್ಲ ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣಗಳಲ್ಲಿ ಆ ಪ್ರಕ್ರಿಯೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ದಾಖಲಾದ 1 ಲಕ್ಷ ಮಾನನಷ್ಟ ಪ್ರಕರಣಗಳಲ್ಲಿ 5 ಜನರಿಗೆ ಶಿಕ್ಷೆಯಾದರೆ ಹೆಚ್ಚು. ಇಂತಹ ಪ್ರಕರಣ ದಾಖಲಿಸುವಂತಿದ್ದರೆ ಲಂಕೇಶ್, ಎ.ಕೆ.ಸುಬ್ಬಯ್ಯ, ಪ್ರೊ.ನಂಜುಂಡಸ್ವಾಮಿ ಸಾವಿರ ಸಲ ಜೈಲಿಗೆ ಹೋಗಬೇಕಿತ್ತು. ರಾಹುಲ್ ಅಭಿವ್ಯಕ್ತಿ ದಮನ ಮುಂದೆ ನಮ್ಮೆಲ್ಲರಿಗೂ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಮೀಸಲಾತಿ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ನ್ಯಾಯವಲ್ಲ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಮೀಸಲಾತಿ ಸಾಂವಿಧಾನಿಕ ಹಕ್ಕು. ಬೇರೆ ಬೇರೆ ಸಮಾಜಗಳು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಮೀಸಲಾತಿ ಕೊಡಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ ಅವರು ಮಾತನಾಡಿ, “ಅಡ್ಡಂಡ ಕಾರ್ಯಪ್ಪ ನಾನು ಹೇಳುವುದೇ ಸತ್ಯ. ಅದನ್ನು ಎಲ್ಲರೂ ಒಪ್ಪಬೇಕೆಂದು ಒತ್ತಾಯಿಸುವುದು ದಾಷ್ಟ್ಯತನ. ಇವರ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ ಅನಿಸುತ್ತದೆ. ಇವರಿಗೆ ಬುದ್ಧಿ ಕಲಿಸುವ ಅಗತ್ಯವಿದೆ” ಎಂದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ನೇತ್ರಾವತಿ, ಮಹೇಶ್ ಮಂಡಕಳ್ಳಿ, ಪಿ.ಮರಂಕಯ್ಯ, ರಾಘವೇಂದ್ರ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...