Homeಕರ್ನಾಟಕಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

- Advertisement -
- Advertisement -

“ಉರಿಗೌಡ, ದೊಡ್ಡನಂಜೇಗೌಡ ಎಂಬ (ಕಾಲ್ಪನಿಕ) ಪಾತ್ರಗಳೇ ಟಿಪ್ಪುವನ್ನು ಕೊಂದಿದ್ದು” ಎಂದು ಪ್ರತಿಪಾದಿಸಿ ಟೀಕೆಗೆ ಒಳಗಾಗಿರುವ ರಂಗಾಯಣ ನಿರ್ದೇಶಕ, ‘ಟಿಪ್ಪು ನಿಜಕನಸುಗಳು’ ನಾಟಕದ ಸೃಷ್ಟಿಕರ್ತ ಅಡ್ಡಂಡ ಕಾರ್ಯಪ್ಪ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಿಧನರಾದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರ ವಿರುದ್ಧ ಇತ್ತೀಚೆಗೆ ಬಹಳ ಹಗುರವಾಗಿ ಮಾತನಾಡಿರುವ ಅಡ್ಡಂಡ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ರೈತ ಸಂಘ ಮುಂದಾಗಿದೆ.

ಈ ಕುರಿತು ಮೈಸೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಲಾಗಿದ್ದು, “ಹೋರಾಟಗಾರ ಪ.ಮಲ್ಲೇಶ್ ಅವರ ಕುರಿತು ಅಪಹಾಸ್ಯವಾಗಿ ಮಾತಾಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಾರದೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು” ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

“ಪ.ಮಲ್ಲೇಶ್ ಅವರು ಮರಣ ಹೊಂದಿದ್ದಾರೆ. ತೀರಿಹೋದವರ ಕುರಿತು ಕೇವಲವಾಗಿ ಮಾತಾಡಿರುವ ಅಡ್ಡಂಡ ಕಾರ್ಯಪ್ಪ ಸಂಸ್ಕೃತಿ ಹೀನ ವ್ಯಕ್ತಿತ್ವದವರು. ವಿಕೃತವಾದ ಆಲೋಚನೆ ಹಾಗೂ ಸಮಾಜ ಒಡೆಯುವ ನೀತಿ ಅಡ್ಡಂಡ ಹೊಂದಿದ್ದಾರೆ” ಎಂದು ಟೀಕಿಸಿದ್ದಾರೆ.

ವ್ಯಕ್ತಿ ಮೃತಪಟ್ಟ ವ್ಯಕ್ತಿಯ ಕುರಿತು ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುವಂತೆ ಯಾರಾದರೂ ನಡೆದುಕೊಂಡರೆ ಈ ದೇಶದ ಕಾನೂನಿನಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಅವಕಾಶವಿದೆ. ವಾರದೊಳಗೆ ಅವರು ಕ್ಷಮೆ ಕೇಳದಿದ್ದರೆ ಸಾಮಾಜಿಕ ಹಿತಚಿಂತನೆಯ ದೃಷ್ಟಿಯಿಂದ ಮಾನನಷ್ಟ ಪ್ರಕರಣ ದಾಖಲಿಸುತ್ತೇವೆ. ಅಹಿಂಸಾತ್ಮಕ ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ಮೈಸೂರಿಗೆ ಸಾಂಸ್ಕೃತಿಕವಾಗಿ ಸಾಹಿತ್ಯಕವಾಗಿ ಗೌರವವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪು, ಸಾಹುಕಾರ್ ಚೆನ್ನಯ್ಯ, ಯಶೋಧರ ದಾಸಪ್ಪ, ಪ್ರೊ.ನಂಜುಂಡಸ್ವಾಮಿ ಪ್ರೇರಕ ಶಕ್ತಿಯಾಗಿದ್ದಾರೆ. ಅವರ ಮುಮದುವರಿದ ಭಾಗಿ ಇದ್ದವರು ಪ.ಮಲ್ಲೇಶ್‌. ಈ ಪರಂಪರೆಗೆ ಧಕ್ಕೆ ತರುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ರಂಗಾಯಣದಿಂದ ಎತ್ತಂಗಡಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನವನ್ನು ನವೆಂಬರ್‌ 19ರಂದು ಆಯೋಜಿಸಲಾಗಿತ್ತು. ಆ ವೇಳೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ಉಪನಿರ್ದೇಶಕಿ ನಿರ್ಮಲಾ ಮಠಮತಿ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ಈ ವೇಳೆ ಪ.ಮಲ್ಲೇಶ್ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪಿಸಿದ ಕಾರ್ಯಪ್ಪ, “ರಂಗಾಯಣಕ್ಕೆ ಯಾವ ಅತಿಥಿಯನ್ನು ಕರೆದರೂ ಅದಕ್ಕೂ ಗಲಾಟೆ. ಪಾಪ ಒಬ್ಬ ಸ್ಪಾನ್ಸರ್‌ (ಪ್ರಾಯೋಜಕರು) ಇದ್ದರು. ಅವರು ಸತ್ತು ಹೋದರು. ಪಾಪ ಪ.ಮಲ್ಲೇಶ್ ಅಂಥ ಅವರ ಹೆಸರು. ಚಳವಳಿಗಾರರಿಗೆ ಸ್ಪಾನ್ಸರ್‌. ಶಾಮಿಯಾನಬೇಕು, ಟೀ ಬೇಕು, ಸಂಜೆ ಹೋಗುವಾಗ ಸಕಲ ತೀರ್ಥಗಳನ್ನು ಸೇವಿಸುವವರಿಗೆ ಅದೂ ಬೇಕು. ಇದನ್ನೆಲ್ಲ ಅವರು ಕೊಡ್ತಾ ಇದ್ದರು. ಅವರು ಸತ್ತು ಹೋದರು. ಇನ್ನೊಂದು ಎಡಪಂಥೀಯ ಗುಂಪು ನಿತ್ಯ ಇದನ್ನೇ ಕಾಯಕ ಮಾಡಿಕೊಂಡಿತ್ತು. ಚಳವಳಿ, ಚಳವಳಿ… ಇದೆಲ್ಲದರ ನಡುವೆ ಯಶಸ್ವಿಯಾಗಿ ನಾಟಕ ಮಾಡಿಯೇ ತೀರಿದ್ದೇನೆ” ಎಂದಿದ್ದರು.

ಸಮಾಜವಾದಿ ಪ.ಮಲ್ಲೇಶ್‌ ಅವರ ಕುರಿತು ಅಡ್ಡಂಡ ಕಾರ್ಯಪ್ಪ ಹಗುರವಾಗಿ ಮಾತನಾಡಿರುವುದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.

ರಾಹುಲ್‌ ಅನರ್ಹತೆ ಸಮರ್ಥನೀಯವಲ್ಲ: ಬಡಗಲಪುರ ನಾಗೇಂದ್ರ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ಅನರ್ಹ ಕಾನೂನಿನ ಪ್ರಕಾರವೇ ಸಮರ್ಥನೀಯವಲ್ಲ. ಪ್ರಜಾಪ್ರಭುತ್ವದ ಅಂತಃಸತ್ವವನ್ನು ಅಡಗಿಸುವ ತೀರ್ಮಾನವಿದು. ಇದರ ವಿರುದ್ಧ ದೇಶದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಯಾಗಬೇಕು” ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಶಿಸಿದರು.

ಕೆಳಗಿನ ನ್ಯಾಯಾಲಯಗಳು ತೀರ್ಪು ಅಂತಿಮವಲ್ಲ. ಮುಂದಿನ ಕೋರ್ಟ್‌ಗಳಲ್ಲಿ ಅದನ್ನು ಪ್ರಶ್ನೆ ಮಾಡಬೇಕು. ಹಾಗೆಯೇ ಯಾವುದೇ ಕ್ರಮಗಳು ಪಾರದರ್ಶಕ ಮತ್ತು ಜನ ಒಪ್ಪುವಂತಿರಬೇಕು. ತೀರ್ಪಿಗೂ ಮುನ್ನ ನ್ಯಾಯಾಧೀಶರು ವ್ಯಕ್ತಿಯ ನಡತೆ, ಆ ಮಾತುಗಳು ಹಿಂದಿನ ಉದ್ದೇಶ ಏನು ಎಂಬುದನ್ನೆಲ್ಲ ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣಗಳಲ್ಲಿ ಆ ಪ್ರಕ್ರಿಯೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ದಾಖಲಾದ 1 ಲಕ್ಷ ಮಾನನಷ್ಟ ಪ್ರಕರಣಗಳಲ್ಲಿ 5 ಜನರಿಗೆ ಶಿಕ್ಷೆಯಾದರೆ ಹೆಚ್ಚು. ಇಂತಹ ಪ್ರಕರಣ ದಾಖಲಿಸುವಂತಿದ್ದರೆ ಲಂಕೇಶ್, ಎ.ಕೆ.ಸುಬ್ಬಯ್ಯ, ಪ್ರೊ.ನಂಜುಂಡಸ್ವಾಮಿ ಸಾವಿರ ಸಲ ಜೈಲಿಗೆ ಹೋಗಬೇಕಿತ್ತು. ರಾಹುಲ್ ಅಭಿವ್ಯಕ್ತಿ ದಮನ ಮುಂದೆ ನಮ್ಮೆಲ್ಲರಿಗೂ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಮೀಸಲಾತಿ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ನ್ಯಾಯವಲ್ಲ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಮೀಸಲಾತಿ ಸಾಂವಿಧಾನಿಕ ಹಕ್ಕು. ಬೇರೆ ಬೇರೆ ಸಮಾಜಗಳು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಮೀಸಲಾತಿ ಕೊಡಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ ಅವರು ಮಾತನಾಡಿ, “ಅಡ್ಡಂಡ ಕಾರ್ಯಪ್ಪ ನಾನು ಹೇಳುವುದೇ ಸತ್ಯ. ಅದನ್ನು ಎಲ್ಲರೂ ಒಪ್ಪಬೇಕೆಂದು ಒತ್ತಾಯಿಸುವುದು ದಾಷ್ಟ್ಯತನ. ಇವರ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ ಅನಿಸುತ್ತದೆ. ಇವರಿಗೆ ಬುದ್ಧಿ ಕಲಿಸುವ ಅಗತ್ಯವಿದೆ” ಎಂದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ನೇತ್ರಾವತಿ, ಮಹೇಶ್ ಮಂಡಕಳ್ಳಿ, ಪಿ.ಮರಂಕಯ್ಯ, ರಾಘವೇಂದ್ರ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...