Homeಕರ್ನಾಟಕಮೂರು ತಿಂಗಳಾದರೂ ಹೊರಬೀಳದ 'ಡಿನೋಟಿಫಿಕೇಶನ್' ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿ ಮೂರು ತಿಂಗಳಾದರೂ ಚನ್ನರಾಯಪಟ್ಟಣ ಭೂಸ್ವಾಧೀನ ರದ್ದುಪಡಿಸುವ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಸರ್ಕಾರ ಹೊರಡಿಸದಿರುವ ಕಾರಣ, ಭೂಸ್ವಾಧೀನ ವಿರೋಧಿ ಹೋರಾಟದ ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಧಿಕೃತ ಆದೇಶ ಹೊರಡಿಸದಿರುವ ಕಾರಣ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ತಿಳಿಸಿದೆ.

ಘೋಷಣೆಯಾದರೂ ಮೌಖಿಕ ಆದೇಶಕ್ಕೆ ಸಿಗದ ಅಧಿಕೃತ ಮುದ್ರೆ

ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ನಡೆಸಿದ ತೀವ್ರ ಸಂಘರ್ಷಮಯ ಹೋರಾಟದ ಫಲವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 15ರಂದು ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಸರ್ಕಾರದ ಈ ತೀರ್ಮಾನ ದೇಶವ್ಯಾಪಿ ಸುದ್ದಿಯಾಗಿತ್ತು, ಸರ್ಕಾರವು ಕೂಡಾ ಇದನ್ನು ರೈತಪರ ನಿಲುವು ಎಂದು ವ್ಯಾಪಕವಾಗಿ ಪ್ರಚಾರ ಮಾಡಿತ್ತು. ಆದರೆ, ಘೋಷಣೆ ಹೊರಬಿದ್ದು ತಿಂಗಳುಗಳೇ ಕಳೆದರೂ, ಸರ್ಕಾರದ ಮೌಖಿಕ ಆದೇಶವು ಡಿನೋಟಿಫಿಕೇಶನ್ ರೂಪದಲ್ಲಿ ಅಧಿಕೃತವಾಗಿ ಹೊರಬಂದಿಲ್ಲ.

ಆತಂಕಕ್ಕೆ ಕಾರಣವಾದ ಸಭೆಯ ಹುನ್ನಾರ

ಈ ಮಧ್ಯೆ, ಸರ್ಕಾರದ ಘೋಷಣೆಗೆ ವ್ಯತಿರಿಕ್ತವಾಗಿ, ಎರಡು ಹಳ್ಳಿಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದವು. ರೈತರ ತೀವ್ರ ಪ್ರತಿರೋಧದ ನಂತರ ಈ ಸಭೆಯನ್ನು ಮುಂದೂಡಲಾಗಿದೆ. “ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಭಯದಲ್ಲೇ ರೈತರು ಬದುಕುವಂತಾಗಿದೆ” ಎಂದು ಹೋರಾಟಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.

ಹೋರಾಟ ತೀವ್ರಗೊಳಿಸಲು ರೈತರ ಸಿದ್ಧತೆ

ಡಿನೋಟಿಫಿಕೇಶನ್ ಆದೇಶದ ವಿಳಂಬದಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಯೋಜನೆಯೊಂದಿಗೆ ಹೆಜ್ಜೆ ಇಟ್ಟಿದ್ದಾರೆ. ತಮ್ಮ ತಮ್ಮ ಊರುಗಳಲ್ಲಿ ಸಭೆಗಳನ್ನು ಕರೆಯುವ ಮೂಲಕ ಸಂಘಟನೆಯನ್ನು ಗಟ್ಟಿಗೊಳಿಸಿಕೊಂಡು ಹೋರಾಟವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ.

ಈ ಮಧ್ಯೆ, ಮಾನ್ಯ ಕೈಗಾರಿಕಾ ಸಚಿವರು ಅ.17 ರಂದು ಬ್ರಿಗೇಡ್ ಪೌಂಡೇಶನ್ ಸಹಯೋಗದಲ್ಲಿ ಲಕ್ಷ ಗಿಡಗಳ ನೆಡುವ ಕಾರ್ಯಕ್ರಮಕ್ಕಾಗಿ ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡುತ್ತಿದ್ದಾರೆ. “ಇಲ್ಲಿ ಶತಮಾನಗಳಿಂದ ಲಕ್ಷಾಂತರ ಗಿಡಮರಗಳನ್ನು ನೆಟ್ಟು ಪೋಷಿಸುತ್ತಿರುವ ರೈತರು ಆತಂಕದಲ್ಲಿದ್ದಾರೆ. ಇದು ವೈರುಧ್ಯವೇ ಸರಿ” ಎಂದು ರೈತ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಚಿವರ ಭೇಟಿಯ ಹಿನ್ನೆಲೆಯಲ್ಲಿ, ‘ಸಚಿವರು ಈ ರೈತರಿಗೆ ಸರ್ಕಾರ ಆದೇಶದಂತೆ ಈ ತಿಂಗಳಿನೊಳಗೆ ಡಿನೋಟಿಫಿಕೇಶನ್ ಮಾಡುವ ಖಚಿತ ಬರವಸೆ ನೀಡಿ ಅದನ್ನು ಕಾರ್ಯರೂಪಕ್ಕೆ ತರಬೇಕು’ ಎಂದು ಸಮಿತಿಯು ಬಲವಾಗಿ ಒತ್ತಾಯಿಸಿದೆ. ಅಧಿಕೃತ ಆದೇಶ ಹೊರಬೀಳುವವರೆಗೆ ರೈತರ ಆತಂಕ ನಿವಾರಣೆಯಾಗುವುದು ಕಷ್ಟ.

ರೈತರ ಸಮಸ್ಯೆ ಬಗೆಹರಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ

ನಮ್ಮ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪನವರು ಕೂಡ ಅಂದಿನ ಸಭೆಯಲ್ಲಿ ಸರ್ಕಾರದ ಪರವಾಗಿ ಹಾಜರಿದ್ದು, ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದರು. ಮೂರು ತಿಂಗಳಾದರೂ ಸರ್ಕಾರದ ಆದೇಶ ಜಾರಿಯಾಗದಿರುವುದನ್ನು ಅವರು ಸೂಕ್ಷ್ಮವಾಗಿ ಪರಿಗಣಿಸಬೇಕು. ಅಲ್ಲದೆ, ನಮ್ಮ ರೈತರ ಹಿತ ಕಾಯುವುದು ಮತ್ತು ಸಮಸ್ಯೆ ಬಗೆಹರಿಸುವುದು ಕೂಡ ಉಸ್ತುವಾರಿ ಸಚಿವರ ಜವಾಬ್ದಾರಿಯಾಗಿದ್ದು, ಅವರು ಅದರಂತೆ ಡಿನೋಟಿಫಿಕೇಶನ್ (ಭೂಸ್ವಾಧೀನ ರದ್ದತಿ) ಆದೇಶ ಹೊರಡಿಸಲು ಕ್ರಮವಹಿಸಬೇಕೆಂದು ಸಮಿತಿ ಒತ್ತಾಯಿಸುತ್ತದೆ.

ಪತ್ರಿಕಾಗೋಷ್ಠಿಯಲ್ಲಿ, ಪ್ರಭಾ ಬೆಳವಂಗಲ, ಕಾರಳ್ಳಿ‌ ಶ್ರೀನಿವಾಸ್, ಜಯರಾಮೇಗೌಡ, ಮಾರೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಚೀಮಾಚನಹಳ್ಳಿ ರಮೇಶ್‌, ಅಶ್ವತ್ತಪ್ಪ, ಜಯರಾಮೇಗೌಡ, ಸುಬ್ರಮಣಿ, ಕೃಷ್ಣಪ್ಪ, ವೆಂಕಟಮ್ಮ, ಪಿಳಪ್ಪ, ವೆಂಕಟೇಶ್, ಗೋಪಾಲಗೌಡ, ಮಂಜುನಾಥ್, ಗೋಪಿನಾಥ್, ಗೋಪಾಲಪ್ಪ, ವೆಂಕಟೇಶ್, ಅಶ್ವತ್ತಪ್ಪ, ಪ್ರಮೋದ್ ಭಾಗವಹಿಸಿದ್ದರು.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...