Homeಕರ್ನಾಟಕಮೂರು ತಿಂಗಳಾದರೂ ಹೊರಬೀಳದ 'ಡಿನೋಟಿಫಿಕೇಶನ್' ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿ ಮೂರು ತಿಂಗಳಾದರೂ ಚನ್ನರಾಯಪಟ್ಟಣ ಭೂಸ್ವಾಧೀನ ರದ್ದುಪಡಿಸುವ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಸರ್ಕಾರ ಹೊರಡಿಸದಿರುವ ಕಾರಣ, ಭೂಸ್ವಾಧೀನ ವಿರೋಧಿ ಹೋರಾಟದ ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಧಿಕೃತ ಆದೇಶ ಹೊರಡಿಸದಿರುವ ಕಾರಣ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ತಿಳಿಸಿದೆ.

ಘೋಷಣೆಯಾದರೂ ಮೌಖಿಕ ಆದೇಶಕ್ಕೆ ಸಿಗದ ಅಧಿಕೃತ ಮುದ್ರೆ

ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ನಡೆಸಿದ ತೀವ್ರ ಸಂಘರ್ಷಮಯ ಹೋರಾಟದ ಫಲವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 15ರಂದು ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಸರ್ಕಾರದ ಈ ತೀರ್ಮಾನ ದೇಶವ್ಯಾಪಿ ಸುದ್ದಿಯಾಗಿತ್ತು, ಸರ್ಕಾರವು ಕೂಡಾ ಇದನ್ನು ರೈತಪರ ನಿಲುವು ಎಂದು ವ್ಯಾಪಕವಾಗಿ ಪ್ರಚಾರ ಮಾಡಿತ್ತು. ಆದರೆ, ಘೋಷಣೆ ಹೊರಬಿದ್ದು ತಿಂಗಳುಗಳೇ ಕಳೆದರೂ, ಸರ್ಕಾರದ ಮೌಖಿಕ ಆದೇಶವು ಡಿನೋಟಿಫಿಕೇಶನ್ ರೂಪದಲ್ಲಿ ಅಧಿಕೃತವಾಗಿ ಹೊರಬಂದಿಲ್ಲ.

ಆತಂಕಕ್ಕೆ ಕಾರಣವಾದ ಸಭೆಯ ಹುನ್ನಾರ

ಈ ಮಧ್ಯೆ, ಸರ್ಕಾರದ ಘೋಷಣೆಗೆ ವ್ಯತಿರಿಕ್ತವಾಗಿ, ಎರಡು ಹಳ್ಳಿಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದವು. ರೈತರ ತೀವ್ರ ಪ್ರತಿರೋಧದ ನಂತರ ಈ ಸಭೆಯನ್ನು ಮುಂದೂಡಲಾಗಿದೆ. “ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಭಯದಲ್ಲೇ ರೈತರು ಬದುಕುವಂತಾಗಿದೆ” ಎಂದು ಹೋರಾಟಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.

ಹೋರಾಟ ತೀವ್ರಗೊಳಿಸಲು ರೈತರ ಸಿದ್ಧತೆ

ಡಿನೋಟಿಫಿಕೇಶನ್ ಆದೇಶದ ವಿಳಂಬದಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಯೋಜನೆಯೊಂದಿಗೆ ಹೆಜ್ಜೆ ಇಟ್ಟಿದ್ದಾರೆ. ತಮ್ಮ ತಮ್ಮ ಊರುಗಳಲ್ಲಿ ಸಭೆಗಳನ್ನು ಕರೆಯುವ ಮೂಲಕ ಸಂಘಟನೆಯನ್ನು ಗಟ್ಟಿಗೊಳಿಸಿಕೊಂಡು ಹೋರಾಟವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ.

ಈ ಮಧ್ಯೆ, ಮಾನ್ಯ ಕೈಗಾರಿಕಾ ಸಚಿವರು ಅ.17 ರಂದು ಬ್ರಿಗೇಡ್ ಪೌಂಡೇಶನ್ ಸಹಯೋಗದಲ್ಲಿ ಲಕ್ಷ ಗಿಡಗಳ ನೆಡುವ ಕಾರ್ಯಕ್ರಮಕ್ಕಾಗಿ ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡುತ್ತಿದ್ದಾರೆ. “ಇಲ್ಲಿ ಶತಮಾನಗಳಿಂದ ಲಕ್ಷಾಂತರ ಗಿಡಮರಗಳನ್ನು ನೆಟ್ಟು ಪೋಷಿಸುತ್ತಿರುವ ರೈತರು ಆತಂಕದಲ್ಲಿದ್ದಾರೆ. ಇದು ವೈರುಧ್ಯವೇ ಸರಿ” ಎಂದು ರೈತ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಚಿವರ ಭೇಟಿಯ ಹಿನ್ನೆಲೆಯಲ್ಲಿ, ‘ಸಚಿವರು ಈ ರೈತರಿಗೆ ಸರ್ಕಾರ ಆದೇಶದಂತೆ ಈ ತಿಂಗಳಿನೊಳಗೆ ಡಿನೋಟಿಫಿಕೇಶನ್ ಮಾಡುವ ಖಚಿತ ಬರವಸೆ ನೀಡಿ ಅದನ್ನು ಕಾರ್ಯರೂಪಕ್ಕೆ ತರಬೇಕು’ ಎಂದು ಸಮಿತಿಯು ಬಲವಾಗಿ ಒತ್ತಾಯಿಸಿದೆ. ಅಧಿಕೃತ ಆದೇಶ ಹೊರಬೀಳುವವರೆಗೆ ರೈತರ ಆತಂಕ ನಿವಾರಣೆಯಾಗುವುದು ಕಷ್ಟ.

ರೈತರ ಸಮಸ್ಯೆ ಬಗೆಹರಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ

ನಮ್ಮ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪನವರು ಕೂಡ ಅಂದಿನ ಸಭೆಯಲ್ಲಿ ಸರ್ಕಾರದ ಪರವಾಗಿ ಹಾಜರಿದ್ದು, ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದರು. ಮೂರು ತಿಂಗಳಾದರೂ ಸರ್ಕಾರದ ಆದೇಶ ಜಾರಿಯಾಗದಿರುವುದನ್ನು ಅವರು ಸೂಕ್ಷ್ಮವಾಗಿ ಪರಿಗಣಿಸಬೇಕು. ಅಲ್ಲದೆ, ನಮ್ಮ ರೈತರ ಹಿತ ಕಾಯುವುದು ಮತ್ತು ಸಮಸ್ಯೆ ಬಗೆಹರಿಸುವುದು ಕೂಡ ಉಸ್ತುವಾರಿ ಸಚಿವರ ಜವಾಬ್ದಾರಿಯಾಗಿದ್ದು, ಅವರು ಅದರಂತೆ ಡಿನೋಟಿಫಿಕೇಶನ್ (ಭೂಸ್ವಾಧೀನ ರದ್ದತಿ) ಆದೇಶ ಹೊರಡಿಸಲು ಕ್ರಮವಹಿಸಬೇಕೆಂದು ಸಮಿತಿ ಒತ್ತಾಯಿಸುತ್ತದೆ.

ಪತ್ರಿಕಾಗೋಷ್ಠಿಯಲ್ಲಿ, ಪ್ರಭಾ ಬೆಳವಂಗಲ, ಕಾರಳ್ಳಿ‌ ಶ್ರೀನಿವಾಸ್, ಜಯರಾಮೇಗೌಡ, ಮಾರೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಚೀಮಾಚನಹಳ್ಳಿ ರಮೇಶ್‌, ಅಶ್ವತ್ತಪ್ಪ, ಜಯರಾಮೇಗೌಡ, ಸುಬ್ರಮಣಿ, ಕೃಷ್ಣಪ್ಪ, ವೆಂಕಟಮ್ಮ, ಪಿಳಪ್ಪ, ವೆಂಕಟೇಶ್, ಗೋಪಾಲಗೌಡ, ಮಂಜುನಾಥ್, ಗೋಪಿನಾಥ್, ಗೋಪಾಲಪ್ಪ, ವೆಂಕಟೇಶ್, ಅಶ್ವತ್ತಪ್ಪ, ಪ್ರಮೋದ್ ಭಾಗವಹಿಸಿದ್ದರು.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...