Homeಕರ್ನಾಟಕಮೂರು ತಿಂಗಳಾದರೂ ಹೊರಬೀಳದ 'ಡಿನೋಟಿಫಿಕೇಶನ್' ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿ ಮೂರು ತಿಂಗಳಾದರೂ ಚನ್ನರಾಯಪಟ್ಟಣ ಭೂಸ್ವಾಧೀನ ರದ್ದುಪಡಿಸುವ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಸರ್ಕಾರ ಹೊರಡಿಸದಿರುವ ಕಾರಣ, ಭೂಸ್ವಾಧೀನ ವಿರೋಧಿ ಹೋರಾಟದ ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಧಿಕೃತ ಆದೇಶ ಹೊರಡಿಸದಿರುವ ಕಾರಣ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ತಿಳಿಸಿದೆ.

ಘೋಷಣೆಯಾದರೂ ಮೌಖಿಕ ಆದೇಶಕ್ಕೆ ಸಿಗದ ಅಧಿಕೃತ ಮುದ್ರೆ

ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ನಡೆಸಿದ ತೀವ್ರ ಸಂಘರ್ಷಮಯ ಹೋರಾಟದ ಫಲವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 15ರಂದು ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಸರ್ಕಾರದ ಈ ತೀರ್ಮಾನ ದೇಶವ್ಯಾಪಿ ಸುದ್ದಿಯಾಗಿತ್ತು, ಸರ್ಕಾರವು ಕೂಡಾ ಇದನ್ನು ರೈತಪರ ನಿಲುವು ಎಂದು ವ್ಯಾಪಕವಾಗಿ ಪ್ರಚಾರ ಮಾಡಿತ್ತು. ಆದರೆ, ಘೋಷಣೆ ಹೊರಬಿದ್ದು ತಿಂಗಳುಗಳೇ ಕಳೆದರೂ, ಸರ್ಕಾರದ ಮೌಖಿಕ ಆದೇಶವು ಡಿನೋಟಿಫಿಕೇಶನ್ ರೂಪದಲ್ಲಿ ಅಧಿಕೃತವಾಗಿ ಹೊರಬಂದಿಲ್ಲ.

ಆತಂಕಕ್ಕೆ ಕಾರಣವಾದ ಸಭೆಯ ಹುನ್ನಾರ

ಈ ಮಧ್ಯೆ, ಸರ್ಕಾರದ ಘೋಷಣೆಗೆ ವ್ಯತಿರಿಕ್ತವಾಗಿ, ಎರಡು ಹಳ್ಳಿಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದವು. ರೈತರ ತೀವ್ರ ಪ್ರತಿರೋಧದ ನಂತರ ಈ ಸಭೆಯನ್ನು ಮುಂದೂಡಲಾಗಿದೆ. “ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಭಯದಲ್ಲೇ ರೈತರು ಬದುಕುವಂತಾಗಿದೆ” ಎಂದು ಹೋರಾಟಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.

ಹೋರಾಟ ತೀವ್ರಗೊಳಿಸಲು ರೈತರ ಸಿದ್ಧತೆ

ಡಿನೋಟಿಫಿಕೇಶನ್ ಆದೇಶದ ವಿಳಂಬದಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಯೋಜನೆಯೊಂದಿಗೆ ಹೆಜ್ಜೆ ಇಟ್ಟಿದ್ದಾರೆ. ತಮ್ಮ ತಮ್ಮ ಊರುಗಳಲ್ಲಿ ಸಭೆಗಳನ್ನು ಕರೆಯುವ ಮೂಲಕ ಸಂಘಟನೆಯನ್ನು ಗಟ್ಟಿಗೊಳಿಸಿಕೊಂಡು ಹೋರಾಟವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ.

ಈ ಮಧ್ಯೆ, ಮಾನ್ಯ ಕೈಗಾರಿಕಾ ಸಚಿವರು ಅ.17 ರಂದು ಬ್ರಿಗೇಡ್ ಪೌಂಡೇಶನ್ ಸಹಯೋಗದಲ್ಲಿ ಲಕ್ಷ ಗಿಡಗಳ ನೆಡುವ ಕಾರ್ಯಕ್ರಮಕ್ಕಾಗಿ ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡುತ್ತಿದ್ದಾರೆ. “ಇಲ್ಲಿ ಶತಮಾನಗಳಿಂದ ಲಕ್ಷಾಂತರ ಗಿಡಮರಗಳನ್ನು ನೆಟ್ಟು ಪೋಷಿಸುತ್ತಿರುವ ರೈತರು ಆತಂಕದಲ್ಲಿದ್ದಾರೆ. ಇದು ವೈರುಧ್ಯವೇ ಸರಿ” ಎಂದು ರೈತ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಚಿವರ ಭೇಟಿಯ ಹಿನ್ನೆಲೆಯಲ್ಲಿ, ‘ಸಚಿವರು ಈ ರೈತರಿಗೆ ಸರ್ಕಾರ ಆದೇಶದಂತೆ ಈ ತಿಂಗಳಿನೊಳಗೆ ಡಿನೋಟಿಫಿಕೇಶನ್ ಮಾಡುವ ಖಚಿತ ಬರವಸೆ ನೀಡಿ ಅದನ್ನು ಕಾರ್ಯರೂಪಕ್ಕೆ ತರಬೇಕು’ ಎಂದು ಸಮಿತಿಯು ಬಲವಾಗಿ ಒತ್ತಾಯಿಸಿದೆ. ಅಧಿಕೃತ ಆದೇಶ ಹೊರಬೀಳುವವರೆಗೆ ರೈತರ ಆತಂಕ ನಿವಾರಣೆಯಾಗುವುದು ಕಷ್ಟ.

ರೈತರ ಸಮಸ್ಯೆ ಬಗೆಹರಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ

ನಮ್ಮ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪನವರು ಕೂಡ ಅಂದಿನ ಸಭೆಯಲ್ಲಿ ಸರ್ಕಾರದ ಪರವಾಗಿ ಹಾಜರಿದ್ದು, ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದರು. ಮೂರು ತಿಂಗಳಾದರೂ ಸರ್ಕಾರದ ಆದೇಶ ಜಾರಿಯಾಗದಿರುವುದನ್ನು ಅವರು ಸೂಕ್ಷ್ಮವಾಗಿ ಪರಿಗಣಿಸಬೇಕು. ಅಲ್ಲದೆ, ನಮ್ಮ ರೈತರ ಹಿತ ಕಾಯುವುದು ಮತ್ತು ಸಮಸ್ಯೆ ಬಗೆಹರಿಸುವುದು ಕೂಡ ಉಸ್ತುವಾರಿ ಸಚಿವರ ಜವಾಬ್ದಾರಿಯಾಗಿದ್ದು, ಅವರು ಅದರಂತೆ ಡಿನೋಟಿಫಿಕೇಶನ್ (ಭೂಸ್ವಾಧೀನ ರದ್ದತಿ) ಆದೇಶ ಹೊರಡಿಸಲು ಕ್ರಮವಹಿಸಬೇಕೆಂದು ಸಮಿತಿ ಒತ್ತಾಯಿಸುತ್ತದೆ.

ಪತ್ರಿಕಾಗೋಷ್ಠಿಯಲ್ಲಿ, ಪ್ರಭಾ ಬೆಳವಂಗಲ, ಕಾರಳ್ಳಿ‌ ಶ್ರೀನಿವಾಸ್, ಜಯರಾಮೇಗೌಡ, ಮಾರೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಚೀಮಾಚನಹಳ್ಳಿ ರಮೇಶ್‌, ಅಶ್ವತ್ತಪ್ಪ, ಜಯರಾಮೇಗೌಡ, ಸುಬ್ರಮಣಿ, ಕೃಷ್ಣಪ್ಪ, ವೆಂಕಟಮ್ಮ, ಪಿಳಪ್ಪ, ವೆಂಕಟೇಶ್, ಗೋಪಾಲಗೌಡ, ಮಂಜುನಾಥ್, ಗೋಪಿನಾಥ್, ಗೋಪಾಲಪ್ಪ, ವೆಂಕಟೇಶ್, ಅಶ್ವತ್ತಪ್ಪ, ಪ್ರಮೋದ್ ಭಾಗವಹಿಸಿದ್ದರು.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...