Homeಚಳವಳಿಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘದಿಂದ ರೈತ ಹೋರಾಟಕ್ಕೆ ಬೆಂಬಲ

ಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘದಿಂದ ರೈತ ಹೋರಾಟಕ್ಕೆ ಬೆಂಬಲ

ರೈತ ಹೋರಾಟದ ವಿವಿಧ ಹಂತಗಳಲ್ಲಿ ಪೊಲೀಸರು ರೈತರ ಮೇಲೆ ಅಮಾನವೀಯವಾಗಿ ವರ್ತಿಸುವುದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ತೀವ್ರವಾಗಿ ವಿರೋಧಿಸಿದ ರಾಜ್ಯವೆಂದರೆ ಪಂಜಾಬ್ ಮತ್ತು ಹರಿಯಾಣ. ಪಂಜಾಬಿನ ರೈತರು ಕಾಯ್ದೆ ಜಾರಿಯಾದಾಗಿನಿಂದಲೂ ತೀವ್ರತರದ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ದೆಹಲಿ ಚಲೋ ನಡೆಯಲು ಮೂಲ ಕಾರಣ ಪಂಜಾಬಿನ ರೈತರು.

ಪಂಜಾಬ್‌ನ ರೈತರೆಲ್ಲರೂ ತಮ್ಮ ಹಕ್ಕುಗಳಿಗಾಗಿ ರಸ್ತೆಗಿಳಿದ ಕಾರಣ, ಬಂಜಾಬಿನ ಹಲವು ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ರೈತರಿಗೆ ಸಾಥ್ ನೀಡಿವೆ. ಈಗ ಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘ (ಡಿಎಸ್ಎಪಿ) ದಿಂದ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ.

“2020ರ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಪಂಜಾಬ್ ಮತ್ತು ಇಡೀ ದೇಶದ ರೈತ ಸಂಘಗಳ ಜೊತೆಗೆ ಡಿಎಸ್ಎಪಿ ಕೂಡ ನಿಂತಿದೆ. ಈ ಕಾನೂನುಗಳು ಜಾರಿಗೆ ಬಂದರೆ ಪಂಜಾಬ್ ಕೃಷಿ ರಾಜ್ಯವಾಗಿರುವುದರಿಂದ ತೀವ್ರ ಕೆಟ್ಟ ಮಟ್ಟದಲ್ಲಿ ಹೊಡೆತ ಬೀಳುತ್ತದೆ. ವಾಸ್ತವದಲ್ಲಿ ಈ ಕಾನೂನುಗಳು ದೇಶದಲ್ಲಿ ಕೃಷಿಯನ್ನು ಖಾಸಗೀಕರಣಗೊಳಿಸುವ ಸಾಧನಗಳಾಗಿವೆ” ಎಂದು ಡಿಎಸ್ಎಪಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು

“ಭಾರತದ ಕೃಷಿ ಮತ್ತು ರೈತರನ್ನು ಕಾರ್ಪೋರೆಟ್ ಶಕ್ತಿಗಳಿಂದ ರಕ್ಷಿಸಲು ಸಮಾಜದ ಎಲ್ಲಾ ವರ್ಗದವರು ರೈತರ ಹೋರಾಟದಲ್ಲಿ ಕೈಜೋಡಿಸಬೇಕಾಗಿದೆ. ರೈತರ ಹಕ್ಕುಗಳು ಮತ್ತು ಜೀವನೋಪಾಯಕ್ಕಾಗಿ ನಡೆಸುತ್ತಿರುವ ಈ ಹೋರಾಟಕ್ಕೆ ಸೇರಲು ನಾವು ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇವೆ” ಎಂದಿದ್ದಾರೆ.

ರೈತ ಹೋರಾಟದ ವಿವಿಧ ಹಂತಗಳಲ್ಲಿ ಪೊಲೀಸರು ರೈತರ ಮೇಲೆ ಅಮಾನವೀಯವಾಗಿ ವರ್ತಿಸುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ರೈತರ ದೆಹಲಿ ಚಲೋಗೆ ಈಗಾಗಲೇ ದೇಶಾದ್ಯಂತ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹಲವು ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿ ಸಂಘಟನೆಗಳು, ದಲಿತ, ಕಾರ್ಮಿಕ ಸಂಘಟನೆಗಳು ರೈತರ ಪರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿವೆ.


ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...