Homeಚಳವಳಿಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘದಿಂದ ರೈತ ಹೋರಾಟಕ್ಕೆ ಬೆಂಬಲ

ಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘದಿಂದ ರೈತ ಹೋರಾಟಕ್ಕೆ ಬೆಂಬಲ

ರೈತ ಹೋರಾಟದ ವಿವಿಧ ಹಂತಗಳಲ್ಲಿ ಪೊಲೀಸರು ರೈತರ ಮೇಲೆ ಅಮಾನವೀಯವಾಗಿ ವರ್ತಿಸುವುದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ತೀವ್ರವಾಗಿ ವಿರೋಧಿಸಿದ ರಾಜ್ಯವೆಂದರೆ ಪಂಜಾಬ್ ಮತ್ತು ಹರಿಯಾಣ. ಪಂಜಾಬಿನ ರೈತರು ಕಾಯ್ದೆ ಜಾರಿಯಾದಾಗಿನಿಂದಲೂ ತೀವ್ರತರದ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ದೆಹಲಿ ಚಲೋ ನಡೆಯಲು ಮೂಲ ಕಾರಣ ಪಂಜಾಬಿನ ರೈತರು.

ಪಂಜಾಬ್‌ನ ರೈತರೆಲ್ಲರೂ ತಮ್ಮ ಹಕ್ಕುಗಳಿಗಾಗಿ ರಸ್ತೆಗಿಳಿದ ಕಾರಣ, ಬಂಜಾಬಿನ ಹಲವು ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ರೈತರಿಗೆ ಸಾಥ್ ನೀಡಿವೆ. ಈಗ ಪಂಜಾಬಿನ ದಂತ ವೈದ್ಯಕೀಯ ವಿದ್ಯಾರ್ಥಿ ಸಂಘ (ಡಿಎಸ್ಎಪಿ) ದಿಂದ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ.

“2020ರ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಪಂಜಾಬ್ ಮತ್ತು ಇಡೀ ದೇಶದ ರೈತ ಸಂಘಗಳ ಜೊತೆಗೆ ಡಿಎಸ್ಎಪಿ ಕೂಡ ನಿಂತಿದೆ. ಈ ಕಾನೂನುಗಳು ಜಾರಿಗೆ ಬಂದರೆ ಪಂಜಾಬ್ ಕೃಷಿ ರಾಜ್ಯವಾಗಿರುವುದರಿಂದ ತೀವ್ರ ಕೆಟ್ಟ ಮಟ್ಟದಲ್ಲಿ ಹೊಡೆತ ಬೀಳುತ್ತದೆ. ವಾಸ್ತವದಲ್ಲಿ ಈ ಕಾನೂನುಗಳು ದೇಶದಲ್ಲಿ ಕೃಷಿಯನ್ನು ಖಾಸಗೀಕರಣಗೊಳಿಸುವ ಸಾಧನಗಳಾಗಿವೆ” ಎಂದು ಡಿಎಸ್ಎಪಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು

“ಭಾರತದ ಕೃಷಿ ಮತ್ತು ರೈತರನ್ನು ಕಾರ್ಪೋರೆಟ್ ಶಕ್ತಿಗಳಿಂದ ರಕ್ಷಿಸಲು ಸಮಾಜದ ಎಲ್ಲಾ ವರ್ಗದವರು ರೈತರ ಹೋರಾಟದಲ್ಲಿ ಕೈಜೋಡಿಸಬೇಕಾಗಿದೆ. ರೈತರ ಹಕ್ಕುಗಳು ಮತ್ತು ಜೀವನೋಪಾಯಕ್ಕಾಗಿ ನಡೆಸುತ್ತಿರುವ ಈ ಹೋರಾಟಕ್ಕೆ ಸೇರಲು ನಾವು ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇವೆ” ಎಂದಿದ್ದಾರೆ.

ರೈತ ಹೋರಾಟದ ವಿವಿಧ ಹಂತಗಳಲ್ಲಿ ಪೊಲೀಸರು ರೈತರ ಮೇಲೆ ಅಮಾನವೀಯವಾಗಿ ವರ್ತಿಸುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ರೈತರ ದೆಹಲಿ ಚಲೋಗೆ ಈಗಾಗಲೇ ದೇಶಾದ್ಯಂತ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹಲವು ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿ ಸಂಘಟನೆಗಳು, ದಲಿತ, ಕಾರ್ಮಿಕ ಸಂಘಟನೆಗಳು ರೈತರ ಪರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿವೆ.


ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...