Homeಮುಖಪುಟಟೂಲ್‌ ಕಿಟ್ ವಿಚಾರದಲ್ಲಿ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ಸರಿಯೇ?

ಟೂಲ್‌ ಕಿಟ್ ವಿಚಾರದಲ್ಲಿ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ಸರಿಯೇ?

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ಆಡಳಿತವನ್ನು ಬಂಧನದಲ್ಲಿರಿಸಿ ಸ್ಥಾಪಿತಗೊಂಡಿರುವ ಮಿಲಿಟರಿ ಆಡಳಿತ, ನಿನ್ನೆ ಶನಿವಾರ ದೇಶವ್ಯಾಪಿಯಾಗಿ ಇಂಟರ್‌ನೆಟ್ ಸ್ಥಗಿತಗೊಳಿಸಿದೆ. ವಿಶ್ವದ ಹಲವಾರು ದೇಶಗಳು ಈ ಕ್ರಮಗಳನ್ನು ಖಂಡಿಸುತ್ತಿವೆ. ಇದನ್ನು ಆಂತರಿಕ ಹಸ್ತಕ್ಷೇಪ ಎನ್ನಲಾಗುತ್ತದೆಯೇ?

ಇನ್ನೂ ಒಂದು ವಿಷಯ, ಕಳೆದ ವಾರ ಆ ದೇಶದಲ್ಲಿ ಮಿಲಿಟರಿ ದಂಗೆ ನಡೆದಾಗ ನಿಮ್ಮದೇ ಇಲಾಖೆ ಕಳವಳ ವ್ಯಕ್ತಪಡಿಸಿದ್ದು ಸೂಕ್ತವೇ ಆಗಿತ್ತು. ಓಕೆ, ಆದರೆ ಅದನ್ನು ಆಂತರಿಕ ಹಸ್ತಕ್ಷೇಪ ಎನ್ನಲಾಗುತ್ತದೆಯೇ ಜೈ ಶಂಕರ್ ಸರ್? ಈಗ ಅಲ್ಲಿ ಇಂಟರ್‌ನೆಟ್ ಸ್ಥಗಿತ ಮಾಡಿದ್ದರ ಕುರಿತು ನಿಮ್ಮ ಇಲಾಖೆ ಇನ್ನೂ ಆಕ್ಷೇಪ ವ್ಯಕ್ತ ಮಾಡಿಲ್ಲ. ಏಕೆಂದರೆ, ನಿಮ್ಮ ಇಲಾಖೆಯ ಮೂರ್ಖತನದ ಪ್ರಕಟಣೆ (ವಿದೇಶಿಯರ ಹಸ್ತಕ್ಷೇಪ ವಿರೋಧಿಸುವ ಪ್ರಕಟಣೆ). ಇಂದು ನೀವು ಮತ್ತು ನಿಮ್ಮ ಇಲಾಖೆ ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸುವ ನೈತಿಕ ಅಧಿಕಾತವನ್ನೇ ಕಳೆದುಕೊಂಡು ಬಿಟ್ಟಿದ್ದೀರಿ, ಅಲ್ಲವೇ ಜೈ ಶಂಕರ್ ಜೀ?

ದೆಹಲಿ ಪೊಲೀಸರ ಹೆಜ್ಜೆಗಳಲ್ಲಿ ವಿದೇಶಾಂಗ ನೀತಿ!

ಸ್ವೀಡನ್‌ನ ಹದಿಹರೆಯದ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹಂಚಿಕೊಂಡ ಟೂಲ್‌ಕಿಟ್‌ಗೆ ಖಲಿಸ್ತಾನಿ ಲಿಂಕ್ ದೊರೆತಿದೆ ಎಂದು ದೆಹಲಿ ಪೊಲೀಸರು ಹೇಳಿಕೊಂಡ ಎರಡು ದಿನಗಳ ನಂತರ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು, ‘ಈ ಡಾಕ್ಯುಮೆಂಟ್ ಬಹಳಷ್ಟು ವಿಷಯ ಬಹಿರಂಗಪಡಿಸಿದೆ ಮತ್ತು ಅಂತರರಾಷ್ಟ್ರೀಯ ಹೇಳಿಕೆಗಳಿಗೆ (ರಿಹಾನ್ನ, ಥನ್‌ಬರ್ಗ್, ಮೀನಾ ಹ್ಯಾರಿಸ್ ಮುಂತಾದವರು ರೈತ ಪ್ರತಿಭಟನೆ ಪರ ನೀಡಿದ ಹೇಳಿಕೆಗಳು) ಅವರ ಸಚಿವಾಲಯ ಏಕೆ ಪ್ರತಿಕ್ರಿಯಿಸಿತು ಎಂಬುದನ್ನು ಸ್ಪಷ್ಟವಾಗಿ ನೋಡಬಹುದು’ ಎಂದಿದ್ದಾರೆ.

‘ಸಾಕಷ್ಟು ಬಹಿರಂಗಪಡಿಸಿದೆ’….. ಅದೇನು ಬಹಿರಂಗಪಡಿಸಿದೆಯೋ ಎಂಬುದು ಪಬ್ಲಿಕ್ ಡೊಮೇನ್‌ನಲ್ಲಿ ಈಗಲೂ ಇದೆ. ಆ ಟೂಲ್‌ಕಿಟ್ ಅನ್ನೆ ಗ್ರೇಟಾ ಹಂಚಿಕೊಂಡಿದ್ದಾರಷ್ಟೇ. ವಿದೇಶಾಂಗ ಸಚಿವ ಜೈಶಂಕರ್ ಅವರು, ಟೂಲ್‌ಕಿಟ್‌ನಿಂದ ‘ಬಹಳಷ್ಟು ವಿಷಯ’ ಬಹಿರಂಗವಾದ ಕುರಿತು ಮಾತಾಡುವುದು ಮತ್ತು ಟ್ವೀಟ್ ಮಾಡುವುದನ್ನು ನೋಡಿದರೆ, ಇವರು ಕೂಡ ದೆಹಲಿ ಪೊಲಿಸರ ಪಥ ಸಂಚಲನದಲ್ಲಿ ಕೋರಸ್ ಹೇಳುತ್ತಿದ್ದಾರೆ ಅನಿಸುತ್ತದೆ. ಹಾಗೆಯೇ, ಸರ್ಕಾರದ ಪರ ಬ್ಯಾಟಿಂಗ್ ಕಂ ಆ್ಯಕ್ಟಿಂಗ್ ಮಾಡಿದ ಸೆಲೆಬ್ರಿಟಿಗಳ ಸಾಲಿಗೆ ಸೇರುತ್ತಿದ್ದಾರೆ ಅನಿಸುತ್ತದೆ.

ಅದರ ಜೊತೆಗೆ, ಗಣರಾಜ್ಯ ದಿನದಂದು ಕೆಲವು ಪುಂಡರಿಂದ ಕೆಂಪುಕೋಟೆ ಆವರಣದೊಳಗೆ ನಡೆದ ಹಿಂಸಾಚಾರವನ್ನು ನಿಯಂತ್ರಿಸಲಾಗದ ‘ದಿ ಗ್ರೇಟ್’ ದೆಹಲಿ ಪೊಲೀಸರ ಊಹೆಗಳನ್ನೇ ಜೈ ಶಂಕರ್ ಈಗ ಪ್ರತಿಪಾದಿಸುತ್ತಿದ್ದಾರೆ. ಅಂದರೆ ಅವರೀಗ ದೆಹಲಿ ಪೊಲೀಸರ ‘ಪಥ ಸಂಚಲನದಲ್ಲಿ’ ಹೆಜ್ಜೆ ಹಾಕುತ್ತಿದ್ದಾರಷ್ಟೇ.

“ಇದು ಬಹಳಷ್ಟನ್ನು ಬಹಿರಂಗಪಡಿಸಿದೆ. ಇನ್ನೂ ಏನೇನು ಹೊರಬರುತ್ತದೆ ಎಂಬುದನ್ನು ನಾವು ಕಾಯಬೇಕು. ನೀವು ನೋಡಿದಂತೆ, ಕೆಲವು ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ತಮಗೆ ಹೆಚ್ಚು ತಿಳಿದಿಲ್ಲದ ವಿಷಯಗಳ ಬಗ್ಗೆ ನೀಡಿದ ಹೇಳಿಕೆಗಳಿಗೆ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಲು ಒಂದು ಕಾರಣವಿತ್ತು” ಎಂದು ಜೈಶಂಕರ್ ಎಎನ್‌ಐ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಹೇಳಿದ್ದಾರೆ.

‘ತಮಗೆ ಹೆಚ್ಚು ತಿಳಿದಿಲ್ಲದ ವಿಷಯಗಳ ಬಗ್ಗೆ ನೀಡಿದ ಹೇಳಿಕೆಗಳಿಗೆ’- ಏನಿದರರ್ಥ? ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳಿಗೆ ಇಲ್ಲೇನು ನಡೆಯುತ್ತಿದೆ ಎಂಬ ಬಗ್ಗೆ ಅರಿವಿಲ್ಲದೆ ಟ್ವೀಟ್ ಮಾಡಿಬಿಟ್ಟರೆ? ಕೃಷಿ ಕಾಯ್ದೆಗಳನ್ನು ಅವರು ಸಂಪೂರ್ಣವಾಗಿ ಓದಿರಲಿಕ್ಕಿಲ್ಲ, ಓದುವ ಅಗತ್ಯವೂ ಇಲ್ಲ. ಆದರೆ, ಅವರು ಎತ್ತಿದ್ದು ಮಾನವ ಹಕ್ಕುಗಳ ವಿಷಯ ಎಂಬುದನ್ನು ವಿದೇಶಾಂಗ ಇಲಾಖೆ ನೆನಪಿಟ್ಟುಕೊಳ್ಳಲಿ. ಹಾಗೆ ನೋಡಿದರೆ, ಹೆಚ್ಚು ತಿಳಿಯದೇನೇ, ಅವರ ಇಲಾಖೆ ಕೊಟ್ಟ ಪ್ರಕಟಣೆಯೇ ಆತ್ಮವಂಚನೆಯಿಂದ ಕೂಡಿತ್ತಲ್ಲವೆ? ‘ಸಂಸತ್ತಿನಲ್ಲಿ ದೀರ್ಘ ಚರ್ಚೆಯ ನಂತರವಷ್ಟೆ ಈ ಕೃಷಿ ಕಾಯ್ದೆಗಳನ್ನು ಅಂಗೀಕಾರ ಮಾಡಲಾಗಿದೆ’ ಎಂಬ ಅವರ ಇಲಾಖೆಯ ಹೇಳಿಕಯೇ ಅರ್ಧಸತ್ಯದಿಂದ ಕೂಡಿದೆ.

ಕೆಳಮನೆಯಲ್ಲಿ ಸಿಕ್ಕಿರುವ ‘ಭಯಂಕರ’ ಬಹುಮತ ಇದಕ್ಕೆ ನೆರವಾಗಿತ್ತು. ಆದರೆ ಮೇಲ್ಮನೆಯಲ್ಲಿ ಬಹುಮತ ಇಲ್ಲದಿದ್ದಾಗಲೂ, ಈ ಕಾನೂನುಗಳ ಪರ ವಿಸ್ತೃತ ಚರ್ಚೆಯೇ ಇಲ್ಲದೆ, ಮತ ಸಂಖ್ಯೆಯನ್ನು ಎಣಿಕೆ ಮಾಡದೆಯೇ ಅಂಗೀಕಾರ ಪಡೆಯಲಾಗಿದೆ. ರಾಜ್ಯ ಸರ್ಕಾರಗಳ ಜೊತೆ ಚರ್ಚಿಸದೇ ಏಕಾಏಕಿ ಈ ಕಾಯ್ದೆಗಳನ್ನು ಹೇರಿದ್ದು ಒಕ್ಕೂಟ ವ್ಯವಸ್ಥೆಯನ್ನೇ ಅವಮಾನಿಸಿದೆ.
ಹೀಗಿರುವಾಗ ವಿದೇಶಾಂಗ ಸಚಿವ ಜೈಶಂಕರ್ ಯಾವ ಆಧಾರದಲ್ಲಿ ತಮ್ಮ ಇಲಾಖೆಯ ಪ್ರಕಟಣೆಗೆ ಅನುಮತಿ ನೀಡಿದರು? ‘ಸಂಸತ್ತಿನ ಸಂಪೂರ್ಣ ಒಪ್ಪಿಗೆ’ ನಿಜಕ್ಕೂ ಸಿಗದೇ ಇದ್ದಾಗ ಅದು ಸಿಕ್ಕಿದೆ ಎನ್ನುವುದು ಆತ್ಮವಂಚನೆಯಲ್ಲವೆ?

ಟೂಲ್‌ಕಿಟ್ ಅಂದರೆ ಅದರಲ್ಲೇನೂ ಸ್ಕೂಡ್ರೈವರ್, ಗರಗಸ ಅಥವಾ ಪಿಸ್ತೂಲ್ ಇರುವುದಿಲ್ಲ. ಟೂಲ್‌ಕಿಟ್ ಎಂಬುದು ಹಾರ್ಡ್ವೇರ್ ಕೂಡ ಅಲ್ಲ, ಅದು ಒಂದು ಚಳುವಳಿಯ ಕಾರ್ಯಕ್ರಮವನ್ನು, ಅದರ ಮುಂದಿನ ಯೋಜನೆ ಹೇಗಿರಲಿದೆ ಎಂಬುದನ್ನು ವಿವರಿಸುವ ಒಂದು ಸರಳ ಪಠ್ಯವಷ್ಟೇ. ಈಗ ದೊರೆತ ಟೂಲ್‌ಕಿಟ್ ಸಾರ್ವಜನಿಕವಾಗಿ ಲಭ್ಯವಿದೆ. ಅದರಲ್ಲೇನೂ ಈ ದೇಶದ ಬುಡ ಅಲ್ಲಾಡಿಸುವ ಯಾವ ಸಾಲೂ ಇಲ್ಲ. ಅದರಿಂದ ‘ಬಹಳಷ್ಟು ಬಹಿರಂಗ’ ಏನಾಯಿತೊ ಎಂಬುದನ್ನು ದಾಖಲೆ ಸಮೇತ ಜನರ ಮುಂದಿಡುವ ಬದಲು, ಬೆದರಿಕೆಯ ತಂತ್ರ ಅನುಸರಿಸುವ ಈ ಕ್ರಮ ಪ್ರಜಾಪ್ರಭುತ್ವ ವಿರೋಧಿಯೇ ಆಗಿದೆ.

-ಪಿ.ಕೆ. ಮಲ್ಲನಗೌಡರ್

(ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...