Homeಮುಖಪುಟಟೂಲ್‌ ಕಿಟ್ ವಿಚಾರದಲ್ಲಿ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ಸರಿಯೇ?

ಟೂಲ್‌ ಕಿಟ್ ವಿಚಾರದಲ್ಲಿ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ಸರಿಯೇ?

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ಆಡಳಿತವನ್ನು ಬಂಧನದಲ್ಲಿರಿಸಿ ಸ್ಥಾಪಿತಗೊಂಡಿರುವ ಮಿಲಿಟರಿ ಆಡಳಿತ, ನಿನ್ನೆ ಶನಿವಾರ ದೇಶವ್ಯಾಪಿಯಾಗಿ ಇಂಟರ್‌ನೆಟ್ ಸ್ಥಗಿತಗೊಳಿಸಿದೆ. ವಿಶ್ವದ ಹಲವಾರು ದೇಶಗಳು ಈ ಕ್ರಮಗಳನ್ನು ಖಂಡಿಸುತ್ತಿವೆ. ಇದನ್ನು ಆಂತರಿಕ ಹಸ್ತಕ್ಷೇಪ ಎನ್ನಲಾಗುತ್ತದೆಯೇ?

ಇನ್ನೂ ಒಂದು ವಿಷಯ, ಕಳೆದ ವಾರ ಆ ದೇಶದಲ್ಲಿ ಮಿಲಿಟರಿ ದಂಗೆ ನಡೆದಾಗ ನಿಮ್ಮದೇ ಇಲಾಖೆ ಕಳವಳ ವ್ಯಕ್ತಪಡಿಸಿದ್ದು ಸೂಕ್ತವೇ ಆಗಿತ್ತು. ಓಕೆ, ಆದರೆ ಅದನ್ನು ಆಂತರಿಕ ಹಸ್ತಕ್ಷೇಪ ಎನ್ನಲಾಗುತ್ತದೆಯೇ ಜೈ ಶಂಕರ್ ಸರ್? ಈಗ ಅಲ್ಲಿ ಇಂಟರ್‌ನೆಟ್ ಸ್ಥಗಿತ ಮಾಡಿದ್ದರ ಕುರಿತು ನಿಮ್ಮ ಇಲಾಖೆ ಇನ್ನೂ ಆಕ್ಷೇಪ ವ್ಯಕ್ತ ಮಾಡಿಲ್ಲ. ಏಕೆಂದರೆ, ನಿಮ್ಮ ಇಲಾಖೆಯ ಮೂರ್ಖತನದ ಪ್ರಕಟಣೆ (ವಿದೇಶಿಯರ ಹಸ್ತಕ್ಷೇಪ ವಿರೋಧಿಸುವ ಪ್ರಕಟಣೆ). ಇಂದು ನೀವು ಮತ್ತು ನಿಮ್ಮ ಇಲಾಖೆ ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸುವ ನೈತಿಕ ಅಧಿಕಾತವನ್ನೇ ಕಳೆದುಕೊಂಡು ಬಿಟ್ಟಿದ್ದೀರಿ, ಅಲ್ಲವೇ ಜೈ ಶಂಕರ್ ಜೀ?

ದೆಹಲಿ ಪೊಲೀಸರ ಹೆಜ್ಜೆಗಳಲ್ಲಿ ವಿದೇಶಾಂಗ ನೀತಿ!

ಸ್ವೀಡನ್‌ನ ಹದಿಹರೆಯದ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹಂಚಿಕೊಂಡ ಟೂಲ್‌ಕಿಟ್‌ಗೆ ಖಲಿಸ್ತಾನಿ ಲಿಂಕ್ ದೊರೆತಿದೆ ಎಂದು ದೆಹಲಿ ಪೊಲೀಸರು ಹೇಳಿಕೊಂಡ ಎರಡು ದಿನಗಳ ನಂತರ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು, ‘ಈ ಡಾಕ್ಯುಮೆಂಟ್ ಬಹಳಷ್ಟು ವಿಷಯ ಬಹಿರಂಗಪಡಿಸಿದೆ ಮತ್ತು ಅಂತರರಾಷ್ಟ್ರೀಯ ಹೇಳಿಕೆಗಳಿಗೆ (ರಿಹಾನ್ನ, ಥನ್‌ಬರ್ಗ್, ಮೀನಾ ಹ್ಯಾರಿಸ್ ಮುಂತಾದವರು ರೈತ ಪ್ರತಿಭಟನೆ ಪರ ನೀಡಿದ ಹೇಳಿಕೆಗಳು) ಅವರ ಸಚಿವಾಲಯ ಏಕೆ ಪ್ರತಿಕ್ರಿಯಿಸಿತು ಎಂಬುದನ್ನು ಸ್ಪಷ್ಟವಾಗಿ ನೋಡಬಹುದು’ ಎಂದಿದ್ದಾರೆ.

‘ಸಾಕಷ್ಟು ಬಹಿರಂಗಪಡಿಸಿದೆ’….. ಅದೇನು ಬಹಿರಂಗಪಡಿಸಿದೆಯೋ ಎಂಬುದು ಪಬ್ಲಿಕ್ ಡೊಮೇನ್‌ನಲ್ಲಿ ಈಗಲೂ ಇದೆ. ಆ ಟೂಲ್‌ಕಿಟ್ ಅನ್ನೆ ಗ್ರೇಟಾ ಹಂಚಿಕೊಂಡಿದ್ದಾರಷ್ಟೇ. ವಿದೇಶಾಂಗ ಸಚಿವ ಜೈಶಂಕರ್ ಅವರು, ಟೂಲ್‌ಕಿಟ್‌ನಿಂದ ‘ಬಹಳಷ್ಟು ವಿಷಯ’ ಬಹಿರಂಗವಾದ ಕುರಿತು ಮಾತಾಡುವುದು ಮತ್ತು ಟ್ವೀಟ್ ಮಾಡುವುದನ್ನು ನೋಡಿದರೆ, ಇವರು ಕೂಡ ದೆಹಲಿ ಪೊಲಿಸರ ಪಥ ಸಂಚಲನದಲ್ಲಿ ಕೋರಸ್ ಹೇಳುತ್ತಿದ್ದಾರೆ ಅನಿಸುತ್ತದೆ. ಹಾಗೆಯೇ, ಸರ್ಕಾರದ ಪರ ಬ್ಯಾಟಿಂಗ್ ಕಂ ಆ್ಯಕ್ಟಿಂಗ್ ಮಾಡಿದ ಸೆಲೆಬ್ರಿಟಿಗಳ ಸಾಲಿಗೆ ಸೇರುತ್ತಿದ್ದಾರೆ ಅನಿಸುತ್ತದೆ.

ಅದರ ಜೊತೆಗೆ, ಗಣರಾಜ್ಯ ದಿನದಂದು ಕೆಲವು ಪುಂಡರಿಂದ ಕೆಂಪುಕೋಟೆ ಆವರಣದೊಳಗೆ ನಡೆದ ಹಿಂಸಾಚಾರವನ್ನು ನಿಯಂತ್ರಿಸಲಾಗದ ‘ದಿ ಗ್ರೇಟ್’ ದೆಹಲಿ ಪೊಲೀಸರ ಊಹೆಗಳನ್ನೇ ಜೈ ಶಂಕರ್ ಈಗ ಪ್ರತಿಪಾದಿಸುತ್ತಿದ್ದಾರೆ. ಅಂದರೆ ಅವರೀಗ ದೆಹಲಿ ಪೊಲೀಸರ ‘ಪಥ ಸಂಚಲನದಲ್ಲಿ’ ಹೆಜ್ಜೆ ಹಾಕುತ್ತಿದ್ದಾರಷ್ಟೇ.

“ಇದು ಬಹಳಷ್ಟನ್ನು ಬಹಿರಂಗಪಡಿಸಿದೆ. ಇನ್ನೂ ಏನೇನು ಹೊರಬರುತ್ತದೆ ಎಂಬುದನ್ನು ನಾವು ಕಾಯಬೇಕು. ನೀವು ನೋಡಿದಂತೆ, ಕೆಲವು ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ತಮಗೆ ಹೆಚ್ಚು ತಿಳಿದಿಲ್ಲದ ವಿಷಯಗಳ ಬಗ್ಗೆ ನೀಡಿದ ಹೇಳಿಕೆಗಳಿಗೆ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಲು ಒಂದು ಕಾರಣವಿತ್ತು” ಎಂದು ಜೈಶಂಕರ್ ಎಎನ್‌ಐ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಹೇಳಿದ್ದಾರೆ.

‘ತಮಗೆ ಹೆಚ್ಚು ತಿಳಿದಿಲ್ಲದ ವಿಷಯಗಳ ಬಗ್ಗೆ ನೀಡಿದ ಹೇಳಿಕೆಗಳಿಗೆ’- ಏನಿದರರ್ಥ? ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳಿಗೆ ಇಲ್ಲೇನು ನಡೆಯುತ್ತಿದೆ ಎಂಬ ಬಗ್ಗೆ ಅರಿವಿಲ್ಲದೆ ಟ್ವೀಟ್ ಮಾಡಿಬಿಟ್ಟರೆ? ಕೃಷಿ ಕಾಯ್ದೆಗಳನ್ನು ಅವರು ಸಂಪೂರ್ಣವಾಗಿ ಓದಿರಲಿಕ್ಕಿಲ್ಲ, ಓದುವ ಅಗತ್ಯವೂ ಇಲ್ಲ. ಆದರೆ, ಅವರು ಎತ್ತಿದ್ದು ಮಾನವ ಹಕ್ಕುಗಳ ವಿಷಯ ಎಂಬುದನ್ನು ವಿದೇಶಾಂಗ ಇಲಾಖೆ ನೆನಪಿಟ್ಟುಕೊಳ್ಳಲಿ. ಹಾಗೆ ನೋಡಿದರೆ, ಹೆಚ್ಚು ತಿಳಿಯದೇನೇ, ಅವರ ಇಲಾಖೆ ಕೊಟ್ಟ ಪ್ರಕಟಣೆಯೇ ಆತ್ಮವಂಚನೆಯಿಂದ ಕೂಡಿತ್ತಲ್ಲವೆ? ‘ಸಂಸತ್ತಿನಲ್ಲಿ ದೀರ್ಘ ಚರ್ಚೆಯ ನಂತರವಷ್ಟೆ ಈ ಕೃಷಿ ಕಾಯ್ದೆಗಳನ್ನು ಅಂಗೀಕಾರ ಮಾಡಲಾಗಿದೆ’ ಎಂಬ ಅವರ ಇಲಾಖೆಯ ಹೇಳಿಕಯೇ ಅರ್ಧಸತ್ಯದಿಂದ ಕೂಡಿದೆ.

ಕೆಳಮನೆಯಲ್ಲಿ ಸಿಕ್ಕಿರುವ ‘ಭಯಂಕರ’ ಬಹುಮತ ಇದಕ್ಕೆ ನೆರವಾಗಿತ್ತು. ಆದರೆ ಮೇಲ್ಮನೆಯಲ್ಲಿ ಬಹುಮತ ಇಲ್ಲದಿದ್ದಾಗಲೂ, ಈ ಕಾನೂನುಗಳ ಪರ ವಿಸ್ತೃತ ಚರ್ಚೆಯೇ ಇಲ್ಲದೆ, ಮತ ಸಂಖ್ಯೆಯನ್ನು ಎಣಿಕೆ ಮಾಡದೆಯೇ ಅಂಗೀಕಾರ ಪಡೆಯಲಾಗಿದೆ. ರಾಜ್ಯ ಸರ್ಕಾರಗಳ ಜೊತೆ ಚರ್ಚಿಸದೇ ಏಕಾಏಕಿ ಈ ಕಾಯ್ದೆಗಳನ್ನು ಹೇರಿದ್ದು ಒಕ್ಕೂಟ ವ್ಯವಸ್ಥೆಯನ್ನೇ ಅವಮಾನಿಸಿದೆ.
ಹೀಗಿರುವಾಗ ವಿದೇಶಾಂಗ ಸಚಿವ ಜೈಶಂಕರ್ ಯಾವ ಆಧಾರದಲ್ಲಿ ತಮ್ಮ ಇಲಾಖೆಯ ಪ್ರಕಟಣೆಗೆ ಅನುಮತಿ ನೀಡಿದರು? ‘ಸಂಸತ್ತಿನ ಸಂಪೂರ್ಣ ಒಪ್ಪಿಗೆ’ ನಿಜಕ್ಕೂ ಸಿಗದೇ ಇದ್ದಾಗ ಅದು ಸಿಕ್ಕಿದೆ ಎನ್ನುವುದು ಆತ್ಮವಂಚನೆಯಲ್ಲವೆ?

ಟೂಲ್‌ಕಿಟ್ ಅಂದರೆ ಅದರಲ್ಲೇನೂ ಸ್ಕೂಡ್ರೈವರ್, ಗರಗಸ ಅಥವಾ ಪಿಸ್ತೂಲ್ ಇರುವುದಿಲ್ಲ. ಟೂಲ್‌ಕಿಟ್ ಎಂಬುದು ಹಾರ್ಡ್ವೇರ್ ಕೂಡ ಅಲ್ಲ, ಅದು ಒಂದು ಚಳುವಳಿಯ ಕಾರ್ಯಕ್ರಮವನ್ನು, ಅದರ ಮುಂದಿನ ಯೋಜನೆ ಹೇಗಿರಲಿದೆ ಎಂಬುದನ್ನು ವಿವರಿಸುವ ಒಂದು ಸರಳ ಪಠ್ಯವಷ್ಟೇ. ಈಗ ದೊರೆತ ಟೂಲ್‌ಕಿಟ್ ಸಾರ್ವಜನಿಕವಾಗಿ ಲಭ್ಯವಿದೆ. ಅದರಲ್ಲೇನೂ ಈ ದೇಶದ ಬುಡ ಅಲ್ಲಾಡಿಸುವ ಯಾವ ಸಾಲೂ ಇಲ್ಲ. ಅದರಿಂದ ‘ಬಹಳಷ್ಟು ಬಹಿರಂಗ’ ಏನಾಯಿತೊ ಎಂಬುದನ್ನು ದಾಖಲೆ ಸಮೇತ ಜನರ ಮುಂದಿಡುವ ಬದಲು, ಬೆದರಿಕೆಯ ತಂತ್ರ ಅನುಸರಿಸುವ ಈ ಕ್ರಮ ಪ್ರಜಾಪ್ರಭುತ್ವ ವಿರೋಧಿಯೇ ಆಗಿದೆ.

-ಪಿ.ಕೆ. ಮಲ್ಲನಗೌಡರ್

(ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...