Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...