Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...