Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...