Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...