Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...