Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...