Homeಮುಖಪುಟಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

- Advertisement -
- Advertisement -

ಕಳೆದ 14 ವರ್ಷಗಳಿಂದ ಕೇಂದ್ರ ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಸೇವಾ ಕಂಪನಿಗಳ ನಡುವೆ ನಡೆಯುತ್ತ ಬಂದಿದ್ದ ವ್ಯಾಜ್ಯವೊಂದನ್ನು ಸುಪ್ರೀಂಕೋರ್ಟ್ ತಾರ್ಕಿಕ ಅಂತ್ಯಕ್ಕೆ ಒಯ್ದಿದೆ.
ಕೇಂದ್ರ ಸರ್ಕಾರ, ದೂರ ಸಂಪರ್ಕ ಇಲಾಖೆ ಮತ್ತು ಖಾಸಗಿ ಮೊಬೈಲ್ ಕಂನಿಗಳಿಗೆ ಕಳೆದ ವಾರ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್, ಖಾಸಗಿ ಮೊಬೈಲ್ ಸೇವಾ ಕಂಪನಿಗಳು ಮುಂದಿನ ವಿಚಾರಣೆ (ಮಾರ್ಚ್17)ಗೆ ಮುನ್ನ ತಮ್ಮ ಬಾಕಿಯನ್ನು ಸರ್ಕಾರಕ್ಕೆ ಕಟ್ಟಬೇಕು ಮತ್ತು ದೂರ ಸಂಪರ್ಕ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ತಪ್ಪಿದಲ್ಲಿ ಕಂಪನಿಗಳ ಲೈಸೆನ್ಸ್ ಕೂಡ ರದ್ದಾಗಬಹುದು ಎಂದು ಎಚ್ಚರಿಸಿದೆ.

ಆದರೆ, ಕೇಂದ್ರ ಸರ್ಕಾರ ಈ ಖಾಸಗಿ ಮೊಬೈಲ್ ಕಂಪನಿಗಳ ಪರ ಮೃದು ಧೋರಣೆ ತೋರಿಸುತ್ತಿದ್ದು, ಅವುಗಳ ನೆರವಿಗೆ ಬರಲು ಯತ್ನಿಸುತ್ತಿದೆ ಎಂದು ಕೆಲವು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವೊಡಾ-ಐಡಿಯಾದ ಪಾಲುದಾರ ಕುಮಾರ ಮಂಗಲಂ ಬಿರ್ಲಾ ಕಂಪನಿ ಸಂಕಷ್ಟದಲ್ಲಿದೆ, ಕೇಂದ್ರ ನೆರವಿಗೆ ಬರಲಿ ಎಂಬರ್ಥದ ಮಾತು ತೇಲಿಬಿಟ್ಟಿದ್ದಾರೆ.

ಈ ಕಂಪನಿಗಳಿಗೆ ಬಾಕಿ ತೀರಿಸಲು ಹೆಚ್ಚಿನ ಕಾಲಾವಕಾಶ ಒದಗಿಸಲು ಕೇಂದ್ರ ಹೊಸ ಶಾಸನ ಅಥವಾ ಹೊಸ ಟೆಲಿಕಾಂ ನೀತಿಯೊಂದನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಕೋರ್ಟಿನ ಗಡುವಿನ ಕುರಿತಂತೆ, ದೂರ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು, ಈ ಗಡುವಿನೊಳಗೆ ಬಾಕಿ ತೀರಿಸಿ ಎಂದು ನಾವು ಒತ್ತಾಯ ಮಾಡುವಂತಿಲ್ಲ ಎಂದಿದ್ದರು. ಇದರ ವಿರುದ್ಧ ಸಿಟ್ಟಿಗೆದ್ದ ಸುಪ್ರೀಂಕೋರ್ಟ್, ಅಧಿಕಾರಿಯೊಬ್ಬರಿಗೆ ಕೋರ್ಟ್ ಆದೇಶಕ್ಕಿಂತ ಕಂಪನಿಗಳ ಹಿತವೇ ಮುಖ್ಯವಾಗಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲ ಖಾಸಗಿ ಮೊಬೈಲ್ ಕಂಪನಿಗಳ ಬಾಕಿ ಒಟ್ಟು 1,45,000 ಕೋಟಿ ರೂ. ಇದ್ದು, ಅದರಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾ-ಐಡಿಯಾ (ವೊಡಾಫೋನ್ ಐಡಿಯಾ) ಈ ಎರಡು ಕಂಪನಿಗಳು ಒಟ್ಟು 88 ಸಾವಿರ ಕೋಟಿ ರೂ. ಬಾಕಿಯನ್ನು ದೂರಸಂಪರ್ಕ ಇಲಾಖೆಗೆ ಕಟ್ಟಬೇಕಿದೆ. ಈ ಮೊತ್ತದಲ್ಲಿ ಲೈಸೆನ್ಸ್ ಫೀ, ತರಂಗಾಂತರ (ಸ್ಪೆಕ್ಟ್ರಂ) ಬಳಕೆ ಮತ್ತು ಬಾಕಿ ಮೇಲಿನ ದಂಡ ಸೇರಿವೆ.

ಇಲ್ಲಿ ಕೇಳಬೇಕಾದ ಪ್ರಶ್ನೆ ಎಂದರೆ, 14 ವರ್ಷಗಳಿಂದ ದೂರಸಂಪರ್ಕ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿಲ್ಲವೇಕೆ? ಖಾಸಗಿ ಮೊಬೈಲ್ ಕಂಪನಿಯ ‘ಹೊಂದಿತ ನಿವ್ವಳ ಆದಾಯ’ (AGR-Adjusted Gross Revenue) ಆಧಾರದಲ್ಲಿ ಎಷ್ಟು ಮೊತ್ತ ಕಟ್ಟಬೇಕು ಎಂದು ನಿರ್ಧರಿಸುವ ಸೂತ್ರವಿದೆ. ಆದರೆ ದೂರಸಂಪರ್ಕ ಇಲಾಖೆ ಮಾಡಿದ ಲೆಕ್ಕಾಚಾರದಲ್ಲಿ ದೋಷವಿದೆ ಎಂದು ಈ ಖಾಸಗಿ ಮೊಬೈಲ್ ಕಂಪನಿಗಳು ಕೋರ್ಟುಗಳಲ್ಲಿ ವಾದಿಸುತ್ತ ಬಂದಿದ್ದವು. ದೂರ ಸಂಪರ್ಕ ಇಲಾಖೆಯ ಕೆಲವು ಅಧಿಕಾರಿಗಳು ಕೋರ್ಟಿನಲ್ಲಿ ಮೃದು ವಾದ ಮಂಡನೆಯಾಗುವಂತೆ ನೋಡಿಕೊಂಡರು ಎಂಬ ಅಪಾದನೆಯಿದೆ.

ಆದರೆ ಈಗ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವುದರಿಂದ, ಕಂಪನಿಗಳು ಬಾಕಿ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ. ವೋಡಾ-ಐಡಿಯಾ 53 ಸಾವಿರ ಕೋಟಿ ರೂ, ಏರ್‌ಟೆಲ್ 35 ಸಾವಿರ ಕೋಟಿ ರೂ. ಬಾಕಿಯನ್ನು ಮಾರ್ಚ್ 17ರೊಳಗಾಗಿ ಪಾವತಿಸಬೇಕಾಗಿದೆ. ವೋಡಾ-ಐಡಿಯಾ ತನ್ನದು ಕೇವಲ 23 ಸಾವಿರ ಕೋಟಿ ರೂ ಮತ್ತು ಏರ್‌ಟೆಲ್ ತನ್ನದು 15-18 ಸಾವಿರ ಕೋಟಿ ರೂ ಎಂದು ವಾದ ಮಾಡುತ್ತ ಬಂದಿದ್ದವು. ಸೋಮವಾರ ಏರ್‌ಟೆಲ್ 10 ಸಾವಿರ ಕೋಟಿ ರೂ. ಡಿಪಾಸಿಟ್ ಮಾಡಿ, ಸದ್ಯದಲ್ಲೇ ಎಲ್ಲವನ್ನೂ ಭರಿಸುವ ಭರವಸೆ ನೀಡಿದೆ. ಆದರೆ ಆರ್ಥಿಕವಾಗಿ ಕಷ್ಟದಲ್ಲಿರುವ ವೋಡಾ-ಐಡಿಯಾ ಕೇವಲ 3500ಕೋಟಿರೂ ಮಾತ್ರ ಕಟ್ಟಿದ್ದು ಪೂರ್ಣ ಹಣ 53 ಸಾವಿರ ಕೋಟಿ ರೂ. ಭರಿಸುವುದು ಕಷ್ಟ ಎನ್ನಲಾಗಿದೆ.

ಈ ನಡುವೆ ಕೇಂದ್ರವು ಒಂದು ಶಾಸನ ಅಥವಾ ಹೊಸ ನೀತಿ ಜಾರಿಗೆ ತಂದು ಈ ಕಂಪನಿಗಳಿಗೆ ಕೊಂಚ ಕಾಲಾವಕಾಶ ಸಿಗುವಂತೆ ಮಾಡಬೇಕು ಎಂಬ ವಾದವನ್ನು ಕೆಲವರು ತೇಲಿಬಿಟ್ಟಿದ್ದಾರೆ. ಸಾರ್ವಜನಿಕ ಕಂಪನಿಗಳಾದ ಬಿಎಸ್‌ಎನ್‌ಎಲ್, ಏರ್ ಇಂಡಿಯಾಗಳ ನೆರವಿಗೆ ಬಾರದ ಕೇಂದ್ರ ಸರ್ಕಾರವೇನಾದರೂ ಈ ಕಂಪನಿಗಳ ಪರ ನಿಂತರೆ, ಅದು ಜನದ್ರೋಹವಾಗಲಿದೆ.

ಅಂತಿಮದಲ್ಲಿ ವೊಡಾ-ಐಡಿಯಾ ಮುಚ್ಚುವ ಎಲ್ಲ ಲಕ್ಷಣಗಳಿವೆ. ಅದರ ಗ್ರಾಹಕರು ಮತ್ತು ನೌಕರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...