Homeಕರ್ನಾಟಕಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಸೋಲು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬೇಕೆಂದು ತೋರಿಸುತ್ತಿದೆ ಎಂದು ಬಿಜೆಪಿ ವಕ್ತಾರ ವಾಮನ ಆಚಾರ್ಯ ಅಭಿಪ್ರಾಯ ತಾಳಿದ್ದಾರೆ. ಸೋಮವಾರ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಬರೆದ ಲೇಖನದಲ್ಲಿ ಬಿಜೆಪಿ ಸೋಲಿನ ಆತ್ಮಾವಲೋಕವನ್ನು ಅವರು ಮಾಡಿದ್ದಾರೆ.

224 ಸ್ಥಾನಗಳಿಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್, 1989 ನಂತರದಲ್ಲಿ ಅತಿಹೆಚ್ಚು ಸ್ಥಾನ ಪಡೆದ ಪಕ್ಷವಾಗಿ ದಿಗ್ವಿಜಯ ಸಾಧಿಸಿದೆ. ಪ್ರಸ್ತುತ ಬಿಜೆಪಿ 66 ಸ್ಥಾನಗಳನ್ನು ಗೆದ್ದುಕೊಂಡರೆ, ದಕ್ಷಿಣ ಭಾರತದಲ್ಲಿನ ತನ್ನ ಅಧಿಕಾರ ಕಳೆದುಕೊಂಡಿದೆ.

ಈ ಕುರಿತು ಲೇಖನ ಬರೆದಿರುವ ಆಚಾರ್ಯ, “ಕರ್ನಾಟಕದಲ್ಲಿ ಕೇಸರಿ ಪಕ್ಷದ ಸೋಲು ರಾಜ್ಯದಲ್ಲಿ ನಿರ್ಣಾಯಕ ನಾಯಕತ್ವದ ಕೊರತೆಯನ್ನು ಎತ್ತಿಹಿಡಿದಿದೆ. ಮೋದಿಯವರ ರ್‍ಯಾಲಿಗಳು ಸಹ ಬಿಜೆಪಿಯ ಸ್ಥಾನಗಳನ್ನು ಉಳಿಸಿಕೊಳ್ಳಲು ವಿಫಲವಾಗಿವೆ” ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರ ನಾಯಕತ್ವವು ಮತದಾರರ ಅಥವಾ ಪಕ್ಷದ ಕಾರ್ಯಕರ್ತರ ನಾಡಿಮಿಡಿತವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅವರಲ್ಲಿ [ಬೊಮ್ಮಾಯಿ] ಯಾರೂ ಪ್ರಬಲ ನಾಯಕತ್ವವನ್ನು ಕಾಣಲಿಲ್ಲ. ಅವರನ್ನು ಯಾವಾಗಲೂ ರಾಜಿ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ” ಎಂದು ಆಚಾರ್ಯ ಟೀಕಿಸಿದ್ದಾರೆ. “ಬೇರೆಡೆ ಬಿಜೆಪಿಯ ಅನುಭವದಂತೆಯೇ, ಪ್ರಬಲ ಮುಖ್ಯಮಂತ್ರಿ ಅಭ್ಯರ್ಥಿಗಳ ಕೊರತೆಯು ತುಂಬಾ ದುಬಾರಿಯಾಗಿ ಈ ಚುನಾವಣೆ ಪರಿಣಮಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರ ಆರೋಪಗಳು ಮತದಾರರ ಮೇಲೆ ಪರಿಣಾಮ ಬೀರಿವೆ ಎಂದು ಪಕ್ಷದ ವಕ್ತಾರರು ಗಮನ ಸೆಳೆದ್ದಾರೆ. ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರವು ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಾಗಿ ಭಾರೀ ಲಂಚವನ್ನು ಪಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರ ರೇಟ್‌ ಕಾರ್ಡ್ ಬಿಡುಗಡೆ ಮಾಡಿ ಜಾಹೀರಾತನ್ನೂ ನೀಡಿತ್ತು.

“ಎಲ್ಲ ಯಶಸ್ವಿ ಸರ್ಕಾರಗಳು ಭ್ರಷ್ಟಾಚಾರವನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುತ್ತಿವೆ” ಎಂದಿರುವ ವಾವನ ಆಚಾರ್ಯ, “ಬಿಜೆಪಿ ಸರ್ಕಾರದಿಂದ ಈ ಪ್ರವೃತ್ತಿಯನ್ನು ಬದಲಾಯಿಸಲಾಗಿಲ್ಲ” ಎಂದು ಟೀಕಿಸಿದ್ದಾರೆ.

ಅಭಿವೃದ್ಧಿ, ಮೂಲಸೌಕರ್ಯ ವಿಷಯದಲ್ಲಿ ಜನರಿಗೆ ತೋರಿಸಲು ಏನೂ ಇಲ್ಲದ ಕಾರಣ ಪಕ್ಷವು ಅಧಿಕಾರಕ್ಕೆ ಮರಳಲು ವಿಫಲವಾಗಿದೆ ಎಂದು ಆಚಾರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಇತರ ಹಿಂದುಳಿದ ವರ್ಗಗಳ ಕೋಟಾದಲ್ಲಿದ್ದ ಮುಸ್ಲಿಮರ 4% ಮೀಸಲಾತಿಯನ್ನು ರದ್ದುಗೊಳಿಸಿದ್ದರೂ ಮತದಾರರನ್ನು ಸೆಳೆಯುವಲ್ಲಿ ಬಿಜೆಪಿ ವಿಫಲವಾಗಿದೆ ಎಂದಿದ್ದಾರೆ.

ಇದನ್ನೂ ಓದಿರಿ: ವಿವಿಧ ಜಾತಿಗಳಿಗೆ ಮೂರು ಪಕ್ಷಗಳು ಟಿಕೆಟ್ ನೀಡಿದೆಷ್ಟು? ಗೆದ್ದಿದೆಷ್ಟು?

ಮಾರ್ಚ್‌ನಲ್ಲಿ ನಡೆದ ತನ್ನ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ, ರಾಜ್ಯದ ಬಿಜೆಪಿ ಸರ್ಕಾರವು ಮುಸ್ಲಿಮರ ಮೀಸಲಾತಿಯನ್ನು ರದ್ದುಗೊಳಿಸಿತು. ಆ ಮೀಸಲಾತಿಯನ್ನು ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ವೀರಶೈವ-ಲಿಂಗಾಯತರಿಗೆ ಸಮಾನವಾಗಿ ಹಂಚಿಕೆ ಮಾಡಿತು.

“ಬಿಜೆಪಿ ಸರ್ಕಾರದ ಹದಿನಾಲ್ಕು ಮಂತ್ರಿಗಳು ಚುನಾವಣೆಯಲ್ಲಿ ಸೋತರು” ಎಂಬ ಅಂಶದತ್ತ ಅವರು ಗಮನ ಸೆಳೆದಿದ್ದಾರೆ. “ಇದು ಏನನ್ನಾದರೂ ಹೇಳುತ್ತದೆ. ಮೀಸಲಾತಿಯ ಕುರಿತ ಕೊನೆ ಕ್ಷಣದ ಕಸರತ್ತು ಸಹಾಯ ಮಾಡಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಹೊಸ ನಾಯಕತ್ವವನ್ನು ಹೇಗೆ ತರಬಹುದು ಮತ್ತು ಮೋದಿ ಮೇಲಿನ ಅವಲಂಬನೆಯನ್ನು ಹೇಗೆ ಕಡಿಮೆ ಮಾಡಬಹುದು ಸೇರಿದಂತೆ ಹಲವಾರು ಪ್ರಶ್ನೆಗಳ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪಕ್ಷದ ವಕ್ತಾರರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...