Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...