Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...