Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...