Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...