Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...